newsics.com
ಬೆಳಗಾವಿ: ರುಬೆಲ್ಲಾ ಲಸಿಕೆ ಪಡೆದ ಬೆಳಗಾವಿಯ ಮೂವರು ಮಕ್ಕಳ ಸಾವಿಗೆ ವೈದ್ಯಕೀಯ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂದು ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಅಧಿಕಾರಿ (ಆರ್ಸಿಹೆಚ್ಒ) ಈಶ್ವರಪ್ಪ ಗಡದ್ ಹೇಳಿದ್ದಾರೆ.
ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಆರೋಗ್ಯ ಸಿಬ್ಬಂದಿ ಜ.10ರಂದು ಲಸಿಕೆ ಸಂಗ್ರಹಿಸಿದ್ದಾರೆ. ಬಳಕೆಯಾಗದ ಲಸಿಕೆಯನ್ನು ಹಿಂತಿರುಗಿಸದೆ ಹಳೆಯ ಲಸಿಕೆಯಿಟ್ಟಿದ್ದ ಬಾಕ್ಸ್ನಲ್ಲಿಯೇ ಲಸಿಕೆಗಳನ್ನು ಇಟ್ಟಿದ್ದಾರೆ. ನಂತರ ಜನವರಿ 11 ಮತ್ತು 12 ರಂದು ಮಕ್ಕಳಿಗೆ ಅದೇ ಲಸಿಕೆ ನೀಡಿದ್ದಾರೆ. ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ಮುಗ್ಧ ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ ಎಂದ ಹೇಳಿದರು.
ಮಕ್ಕಳಿಗೆ ನೀಡುವ ಲಸಿಕೆಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರದ ಐಎಲ್ಆರ್ ರೆಫ್ರಿಜರೇಟರ್ ನಲ್ಲಿಯೇ ಇಡಬೇಕು. 2 ರಿಂದ 8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶದಲ್ಲಿ ಲಸಿಕೆ ಇಡಬೇಕು. ಆದರೆ, ಲಸಿಕಾಕರಣಕ್ಕಾಗಿ ಜ.10ರಂದು ಲಸಿಕೆ ವಯಲ್ ತೆಗೆದುಕೊಂಡಿದ್ದ ಆರೋಗ್ಯ ಸಿಬ್ಬಂದಿ 2 ದಿನ ಹೋಟೆಲ್ನ ಫ್ರಿಡ್ಜ್ನಲ್ಲಿಟ್ಟಿದ್ದರು. ಇದರ ಪರಿಣಾಮ ಜ.12 ರಂದು ಓರ್ವ ಮತ್ತು ಜ.16ರಂದು ಇಬ್ಬರು ಮಕ್ಕಳು ಮೃತಪಟ್ಟಿದ್ದರು.
ಇನ್ನಿಬ್ಬರು ಮಕ್ಕಳಲ್ಲೂ ವಾಂತಿ, ಭೇದಿ, ಜ್ವರ ಲಕ್ಷಣ ಕಂಡುಬಂದಿದ್ದು, ಈಗಲೂ ಇಬ್ಬರೂ ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಾಥಮಿಕ ತನಿಖಾ ವರದಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿ, ನರ್ಸ್ ಹಾಗೂ ಫಾರ್ಮಸಿಸ್ಟ್ ನ ನಿರ್ಲಕ್ಷ್ಯದಿಂದ ಮಕ್ಕಳ ಸಾವು ಸಂಭವಿಸಿದೆ ಎಂದು ತಿಳಿದುಬಂದಿದೆ.
ಈ ಮಧ್ಯೆ, ಮೂವರು ಮಕ್ಕಳ ಸಾವಿನ ಕುರಿತು ವಿಸ್ತೃತ ವರದಿ ನೀಡುವಂತೆ ಬೆಳಗಾವಿ ಜಿಲ್ಲಾಧಿಕಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.
ಕೊರೋನಾದಿಂದ ಹೊಸದಾಗಿ ಬಡವರಾದ 16 ಕೋಟಿಗೂ ಹೆಚ್ಚು ಜನ! ಶೇ.99ರಷ್ಟು ಜನರ ಆದಾಯ ಕುಸಿತ
ಕೊರೋನಾ ಆರ್ಭಟ: ಎರಡೇ ವರ್ಷದಲ್ಲಿ 358 ಕೋಟಿ ಡೋಲೊ-650 ಮಾತ್ರೆ ಮಾರಾಟ!