Sunday, October 1, 2023

ಸಿಎಂ ಯಡಿಯೂರಪ್ಪ ಆಂಧ್ರ ಗವರ್ನರ್: ಅಮರಾವತಿಯಲ್ಲಿ ಭಾರೀ ಚರ್ಚೆ

Follow Us

newsics.com

ಅಮರಾವತಿ(ಆಂಧ್ರಪ್ರದೇಶ): ಕರ್ನಾಟಕ ಸಿಎಂ ಯಡಿಯೂರಪ್ಪ ಅವರು ಆಂಧ್ರಪ್ರದೇಶ ರಾಜ್ಯಪಾಲರಾಗಲಿದ್ದಾರಾ?

ಇಂತಹದೊಂದು ಚರ್ಚೆ ಆಂಧ್ರಪ್ರದೇಶದಲ್ಲಿ ಜೋರಾಗಿದೆ. ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಸೇರಿದಂತೆ ರಾಜ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ ಆಡಳಿತಾರೂಢ ಬಿಜೆಪಿಯಲ್ಲಿ ಅಸಮಾಧಾನದ ಹೊಗೆ ಎದ್ದಿರುವ ಬೆನ್ನಲ್ಲೇ ಆಂಧ್ರಪ್ರದೇಶದ ಹಲವು ಪತ್ರಿಕೆಗಳು ಇಂತಹ ವರದಿಗಳನ್ನು ಪ್ರಕಟಿಸಿವೆ. ಕಳೆದ ಎರಡು ದಿನಗಳಿಂದ ತೆಲುಗು ಮಾಧ್ಯಮಗಳಲ್ಲಿ ಈ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದೆ.

ಹೀಗಾಗಿ ಕರ್ನಾಟಕ ಸಿಎಂ ಬಿ. ಎಸ್. ಯಡಿಯೂರಪ್ಪ ನೆರೆ ರಾಜ್ಯ ಆಂಧ್ರಪ್ರದೇಶದ ರಾಜ್ಯಪಾಲರಾಗಲಿದ್ದಾರೆಂಬ ವಿಚಾರ ಭಾರೀ ಸದ್ದು ಮಾಡಲಾರಂಭಿಸಿದೆ. ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಕಂಡು ಬಂದಿರುವ ಸಂದರ್ಭದಲ್ಲಿ ಇಂತಹುದ್ದೊಂದು ಚರ್ಚೆ ನಡೆಯುತ್ತಿರುವುದು ಭಾರೀ ಮಹತ್ವ ಪಡೆದಿದೆ.

ಆಂಧ್ರಪ್ರದೇಶದ ಹಾಲಿ ರಾಜ್ಯಪಾಲ ಬಿಶ್ವಭೂಷಣ ಅವರ ಅವಧಿ ಜುಲೈ 23ಕ್ಕೆ ಅಂತ್ಯಗೊಳ್ಳಲಿರುವ ಹಿನ್ನೆಲೆಯಲ್ಲಿ ಬಿ. ಎಸ್‌. ಯಡಿಯೂರಪ್ಪ ಹೆಸರು ಮುನ್ನೆಲೆಗೆ ಬಂದಿದ್ದು, ಸಾಕಷ್ಟು ಚರ್ಚೆಯಾಗುತ್ತಿದೆ.

ಆರೋಗ್ಯ ತಪಾಸಣೆ: ಅಮೆರಿಕಕ್ಕೆ ತೆರಳಿದ ರಜನಿಕಾಂತ್

ಖ್ಯಾತ ಮಲೆಯಾಳ ಕವಿ , ಗೀತೆ ರಚನೆಕಾರ ರಮೇಶ್ ನಾಯರ್ ಇನ್ನಿಲ್ಲ

ರಾಹುಲ್ ಗಾಂಧಿ 51ನೇ ಹುಟ್ಟುಹಬ್ಬ: ಕಾಂಗ್ರೆಸ್ ಕಾರ್ಯಕರ್ತರಿಂದ ಸೇವಾ ದಿವಸ್

ಒಂದೇ ದಿನ 60,753 ಜನರಿಗೆ ಕೊರೋನಾ ಸೋಂಕು, 97,743 ಮಂದಿ ಗುಣಮುಖ, 1,647 ಜನ ಸಾವು

ಮತ್ತಷ್ಟು ಸುದ್ದಿಗಳು

vertical

Latest News

ಹಳ್ಳಕ್ಕೆ ಉರುಳಿದ ಬಸ್: 8‌ ಮಂದಿ‌ ಸಾವು, 25 ಪ್ರಯಾಣಿಕರಿಗೆ ಗಾಯ

newsics.com ಚೆನ್ನೈ: ತಮಿಳುನಾಡಿನ ನೀಲಗಿರಿ ಬೆಟ್ಟದಲ್ಲಿ ಶನಿವಾರ ಪ್ರವಾಸಿ ಬಸ್ ಹಳ್ಳಕ್ಕೆ ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು...

ಅಕ್ಟೋಬರ್‌ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ತಾಪಮಾನ ಸಾಧ್ಯತೆ!

newsics.com ನವದೆಹಲಿ: ದೇಶದ ಬಹುತೇಕ ಭಾಗಗಳಲ್ಲಿ ಅಕ್ಟೋಬರ್‌ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನ ಮತ್ತು ಸಾಮಾನ್ಯಕ್ಕಿಂತ ಹೆಚ್ಚು ಕನಿಷ್ಠ ತಾಪಮಾನ ದಾಖಲಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶನಿವಾರ ತಿಳಿಸಿದೆ. ತಮಿಳುನಾಡು, ಕರಾವಳಿ...

ಕರ್ನಾಟಕದಲ್ಲಿ ಈ ಬಾರಿ ಶೇ. 25ರಷ್ಟು ಮಳೆಯ ಕೊರತೆ

newsics.com ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಅವಧಿಯಲ್ಲಿ ಈ ವರ್ಷ ಶೇ 25ರಷ್ಟು ಮಳೆ ಕೊರತೆಯಾಗಿದೆ. ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗಿನ ನಾಲ್ಕು ತಿಂಗಳಲ್ಲಿ ಒಟ್ಟು 845 ಮಿ.ಮೀ ಮಳೆ ಸುರಿಯಬೇಕಿತ್ತು. ಆದರೆ, 635...
- Advertisement -
error: Content is protected !!