Thursday, December 7, 2023

ಮಕ್ಕಳಲ್ಲಿ ಮಿತಿ ಮೀರಿದ ಮೊಬೈಲ್ ತಂತ್ರಜ್ಞಾನ ಬಳಕೆ: ಸಾಹಿತ್ಯ ಸಮ್ಮೇಳನದಲ್ಲಿ ಆತಂಕ

Follow Us

ಕಲಬುರ್ಗಿ:  ಕನ್ನಡ ಸಾಹಿತ್ಯ ಸಮ್ಮೇಳನದ ಸಭಾಂಗಣದಲ್ಲಿ ಮಕ್ಕಳ ಸಾಹಿತ್ಯ ಗೋಷ್ಟಿಯಲ್ಲಿ ಚಿಣ್ಣರ ಮೊಬೈಲ್ ತಂತ್ರಜ್ಞಾನ ಬಳಕೆ ಕುರಿತ ಆತಂಕ ವ್ಯಕ್ತವಾಯಿತು. ಸಾಹಿತಿ ರಾಜಶೇಖರ ಕುಕ್ಕುಂದ ಅವರು ತಮ್ಮ  ಭಾಷಣದಲ್ಲಿ  ಈ  ಕುರಿತು  ಆತಂಕ ವ್ಯಕ್ತಪಡಿಸಿದರು. ಆಧುನಿಕ ಕಾಲಘಟ್ಟದಲ್ಲಿ ತಂತ್ರಜ್ಞಾನದಿಂದ ದೂರ ಇರಲು ಸಾಧ್ಯವಿಲ್ಲ . ಆದರೂ ಇದಕ್ಕೆ ಒಂದು  ಸ್ವಯಂ ನಿಯಂತ್ರಣ ಅತ್ಯಗತ್ಯ ಎಂದು ಅಭಿಪ್ರಾಯಪಟ್ಟರು. ಮಕ್ಕಳಲ್ಲಿ ಡೋಪಮಿನ್  ಗ್ರಂಥಿರಸ  ಹೆಚ್ಚು ಸಂಭ್ರಮಪಟ್ಟಾಗ ಉತ್ಪತಿಯಾಗುತ್ತದೆ. ಇದರಿಂದ ಪದೇ ಪದೇ ಮೊಬೈಲ್ ಬಳಕೆಯ ದಾಸರಾಗಿ ಬದಲಾಗುವ ಸಾಧ್ಯತೆ ಕೂಡ ಇದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು. ಸಮಾಜದ ಮೇಲೆ ಗುರುತರವಾದ ಜವಾಬ್ದಾರಿ ಇದ್ದು, ಮಕ್ಕಳು ಇದಕ್ಕೆ ಬಲಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅಭಿಪ್ರಾಯಪಟ್ಟರು

ಮತ್ತಷ್ಟು ಸುದ್ದಿಗಳು

vertical

Latest News

ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಪೊಲೀಸ್ ವಶಕ್ಕೆ

Newsics.com ಕಲಬುರಗಿ : ಅಪಘಾತವನ್ನು ಕೊಲೆ ಯತ್ನ ಎಂದು ಕಥೆ ಕಟ್ಟಿದ್ದ ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ರನ್ನ ನಗರ ಠಾಣೆಯ ಪೊಲೀಸರು ಮತ್ತೆ ವಶಕ್ಕೆ...

ನಂದಿನಿ ಹಾಲಿನ ದರ ಮತ್ತೆ ಏರಿಕೆ..!!

Newsics.com ಬೆಂಗಳೂರು :  ರಾಜ್ಯದ ಜನತೆಗೆ ಮತ್ತೊಂದು ದರ ಏರಿಕೆಯ ಬಿಸಿ ಕಾದಿದೆ. ಹೌದು, ನಂದಿನಿ ಹಾಲಿನ ದರ ಪರಿಷ್ಕರಣೆಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF) ಚಿಂತನೆ ನಡೆಸಿದೆ. ಈ ಕುರಿತು ಜನವರಿಯಲ್ಲಿ...

ಚಿನ್ನ, ಜಮೀನು, ಬಿಎಂಡಬ್ಲ್ಯೂ ಕಾರಿಗೆ ಬೇಡಿಕೆ : ಕೇರಳದ ವೈದ್ಯೆ ಆತ್ಮಹತ್ಯೆ

Newsics.com ಕೇರಳ : ಕೇರಳದ ತಿರುವನಂತಪುರಂ ಮೆಡಿಕಲ್ ಕಾಲೇಜಿನ ಶಸ್ತ್ರಚಿಕಿತ್ಸಾ ವಿಭಾಗದ ಸ್ನಾತಕೋತ್ತರ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಆತ್ಮಹತ್ಯೆಗೆ ವರದಕ್ಷಿಣೆಗೆ ಬೇಡಿಕೆ ಇಟ್ಟಿದ್ದೆ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಮೃತ ವೈದ್ಯಳನ್ನು...
- Advertisement -
error: Content is protected !!