newsics.com
ಬೆಂಗಳೂರು: ಎಲ್ಲಾ ನೇರ ನೇಮಕಾತಿ ಹುದ್ದೆಗಳ ಭರ್ತಿಯನ್ನು ರಾಜ್ಯ ಸರ್ಕಾರ ತಡೆಹಿಡಿದಿದೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಬಿಗ್ ಶಾಕ್ ನೀಡಿದೆ.
ಕೊರೋನಾ ಹಿನ್ನೆಲೆಯಲ್ಲಿ ಸರ್ಕಾರದ ವೆಚ್ಚದಲ್ಲಿ ಮಿತವ್ಯಯ ಸಾಧಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ಹೇಳಿದೆ.
ಮೈಸೂರಿನ ಪ್ರಾದೇಶಿಕ ಆಯುಕ್ತರಿಗೆ ಈ ಬಗ್ಗೆ ಪತ್ರ ಬರೆದಿರುವ ಆರ್ಥಿಕ ಇಲಾಖೆಯ ವಿಶೇಷಾಧಿಕಾರಿ ಮುರಳೀಧರ ಸಿ. ಅವರು, ಕೋವಿಡ್-19ನಿಂದಾಗಿ ಉಂಟಾಗಿರುವ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ನಿಟ್ಟಿನಲ್ಲಿ 2020-21ನೇ ಸಾಲಿನಲ್ಲಿ ಯಾವುದೇ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡದಂತೆ ಸೂಚಿಸಿದ್ದಾರೆ.
ಅನುಕಂಪದ ಆಧಾರದ ನೇಮಕಾತಿ ಪ್ರಕರಣಗಳಲ್ಲಿ 2020-21ನೇ ಸಾಲಿನಲ್ಲಿ ಅರ್ಜಿಗಳನ್ನು ಸ್ವೀಕರಿಸಲು ಆರ್ಥಿಕ ಇಲಾಖೆ ಸಮ್ಮತಿಸಿದ್ದು, ನೇಮಕಾತಿಗೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಮುಂದಿನ ಆರ್ಥಿಕ ವರ್ಷದಲ್ಲಿ ಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ.
ಇನ್ಮುಂದೆ ಪ್ರತಿ ತಿಂಗಳು ಎಲ್ಲ ಮುಜರಾಯಿ ದೇಗುಲಗಳ ಹುಂಡಿ ತೆರೆಯಲು ಸರ್ಕಾರ ಸೂಚನೆ
ನಾಳೆ ಕಂಗನಾ ರನಾವುತ್ ರಾಜ್ಯಪಾಲರ ಭೇಟಿ