newsics.com
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಇಂದು (ಆ.14) ತುಸು ಇಳಿಕೆಯಾಗಿದೆ. ಕಳೆದ 24ಗಂಟೆಗಳಲ್ಲಿ 1,632 ಮಂದಿಗೆ ಸೋಂಕು ದೃಢಪಟ್ಟಿದ್ದು, 25 ಜನ ಕೊರೋನಾ ಸೋಂಕಿರು ಮೃತಪಟ್ಟಿದ್ದಾರೆ.
ಈ ಮೂಲಕ ರಾಜ್ಯದಲ್ಲಿ ಈವರೆಗೆ ಒಟ್ಟು 29,28,033 ಮಂದಿಗೆ ಸೋಂಕು ದೃಢಪಟ್ಟಿದೆ. ಮಾರಕ ಕೊರೋನಾಕ್ಕೆ ಈವರೆಗೆ ಒಟ್ಟು 36,958 ಜನ ಉಸಿರು ಚೆಲ್ಲಿದ್ದಾರೆ.
ರಾಜ್ಯದಲ್ಲಿ ಪಾಸಿಟಿವಿಟಿ ಪ್ರಮಾಣ ಶೇ. 1.04 ಕ್ಕೆ ತಲುಪಿದೆ.
ಕಳೆದ 24 ಗಂಟೆಯಲ್ಲಿ 1,612 ಮಂದಿ ಸೋಂಕಿತರು ಗುಣಮುಖರಾಗದ್ದು, ಚೇತರಿಸಿಕೊಂಡವರ ಸಂಖ್ಯೆ 28,65,381ಕ್ಕೆ ತಲುಪಿದೆ.
ಒಟ್ಟು 22,698 ಸಕ್ರಿಯ ಪ್ರಕರಣಗಳಿದ್ದು, ಸಾವಿನ ಪ್ರಮಾಣ ಶೇ. 1.53ರಷ್ಟಿದೆ.
ಬೆಂಗಳೂರಿನಲ್ಲಿ ಇಂದು ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. 377 ಮಂದಿಗೆ ಸೋಂಕು ತಗುಲಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. ಇನ್ನು ದಕ್ಷಿಣ ಕನ್ನಡದಲ್ಲೂ ಸೋಂಕು ಏರಿಕೆಯಾಗಿದ್ದು, 411 ಜನ ಸೋಂಕಿತರು ಪತ್ತೆಯಾಗಿದ್ದಾರೆ. ಉಳಿದಂತೆ ಉಡುಪಿ 169, ಹಾಸನ 97 ಮೈಸೂರು 112 ಮಂದಿಗೆ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಕೊರೋನಾ ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಶಾಲೆ ಆರಂಭ ಇಲ್ಲ: ಸಿಎಂ ಬೊಮ್ಮಾಯಿ