newsics.com
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಇಂದು ಏರಿಕೆಯಾಗಿದೆ. ಕಳೆದ 24ಗಂಟೆಗಳಲ್ಲಿ 1857 ಮಂದಿಗೆ ಸೋಂಕು ದೃಢಪಟ್ಟಿದ್ದು, 30 ಜನ ಕೊರೋನಾ ಸೋಂಕಿರು ಮೃತಪಟ್ಟಿದ್ದಾರೆ.
ಈ ಮೂಲಕ ರಾಜ್ಯದಲ್ಲಿ ಈವರೆಗೆ ಒಟ್ಟು 29,23,742 ಮಂದಿಗೆ ಸೋಂಕು ದೃಢಪಟ್ಟಿದೆ. ಮಾರಕ ಕೊರೋನಾಕ್ಕೆ ಈವರೆಗೆ ಒಟ್ಟು 36,911 ಜನ ಉಸಿರು ಚೆಲ್ಲಿದ್ದಾರೆ.
ರಾಜ್ಯದಲ್ಲಿ ಸೋಂಕಿತರು ಕಾಣಿಸಿಕೊಂಡಷ್ಟೇ ಜನ ಗುಣಮುಖರಾಗುತ್ತಿದ್ದು ಪಾಸಿಟಿವಿಟಿ ಪ್ರಮಾಣ ಶೇ. 1.15 ಕ್ಕೆ ತಲುಪಿದೆ.
ಕಳೆದ 24 ಗಂಟೆಯಲ್ಲಿ 1950 ಮಂದಿ ಸೋಂಕಿತರು ಗುಣಮುಖರಾಗದ್ದು, ಚೇತರಿಸಿಕೊಂಡವರ ಸಂಖ್ಯೆ 28,65,067ಕ್ಕೆ ತಲುಪಿದೆ.
ಒಟ್ಟು 22,728 ಸಕ್ರಿಯ ಪ್ರಕರಣಗಳದ್ದು, ಸಾವಿನ ಪ್ರಮಾಣ ಶೇ. 1.61ರಷ್ಟಿದೆ.
ಬೆಂಗಳೂರಿನಲ್ಲಿ ಇಂದು 321 ಮಂದಿಗೆ ಸೋಂಕು ತಗುಲಿದ್ದು, 5 ಜನ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.