Monday, October 2, 2023

ವೃಕ್ಷಮಾತೆ ತುಳಸಿಗೌಡಗೆ ಧಾರವಾಡ ಕೃಷಿ ವಿವಿ ಗೌರವ ಡಾಕ್ಟರೇಟ್, ಜೂ.16ರಂದು ಪ್ರದಾನ

Follow Us

newsics.com

ಅಂಕೋಲಾ(ಉತ್ತರ ಕನ್ನಡ): ಪದ್ಮಶ್ರೀ ಪುರಸ್ಕೃತ ತುಳಸಿ ಗೌಡ ಅವರಿಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ಘೋಷಿಸಿದೆ.

ಅಂಕೋಲಾ ತಾಲೂಕಿನ ಹೊನ್ನಳ್ಳಿಯ ಹಾಲಕ್ಕಿ ಸಮುದಾಯದ ಪದ್ಮಶ್ರೀ ತುಳಸಿ ಗೌಡ ಅವರು ಕೃಷಿ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಈ ಪದವಿ ಘೋಷಿಸಲಾಗಿದೆ.

ಜೂನ್ 16ರಂದು ನಡೆಯುವ ಕೃಷಿ ವಿಶ್ವವಿದ್ಯಾಲಯದ 36 ನೇ ಘಟಿಕೋತ್ಸವದಲ್ಲಿ ‘ವೃಕ್ಷಮಾತೆ’ ಖ್ಯಾತಿಯ ತುಳಸಿ ಗೌಡ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ವಿವಿ ಪ್ರಕಟಣೆ ತಿಳಿಸಿದೆ.
ಹಾಲಕ್ಕಿ ಸಮುದಾಯದ ತುಳಸಿ ಗೌಡ ಅಂಕೋಲಾ ತಾಲೂಕಿನ ಅಗಸೂರಿನ ಹೊನ್ನಳ್ಳಿ ಗ್ರಾಮದ ನಿವಾಸಿ. ನಾರಾಯಣ ಹಾಗೂ ನೀಲಿ ದಂಪತಿಗೆ 1944ರಲ್ಲಿ ಜನಿಸಿದ ತುಳಸಿ ಗೌಡ ಬಡತನದ ಜತೆಗೆ ತನ್ನ ಎರಡನೇ ವಯಸ್ಸಿನಲ್ಲಿಯೇ ತಂದೆಯನ್ನೂ ಕಳೆದುಕೊಂಡರು. ಶಾಲೆ ಮೆಟ್ಟಿಲನ್ನು ಏರದೇ ತಾಯಿಯ ಜತೆ ಚಿಕ್ಕಂದಿನಿಂದಲೇ ಕೂಲಿ ಕೆಲಸ ಆರಂಭಿಸಿದರು. ವರ್ಷಕ್ಕೆ ಸುಮಾರು 30 ಸಾವಿರ ಸಸಿಗಳನ್ನು ನೆಟ್ಟು ಪೋಷಿಸುವ ಕಾರ್ಯವನ್ನು ನಿರಂತರ ಮಾಡುತ್ತಾ ಬಂದಿದ್ದಾರೆ.

ರಾಜ್ಯದ ಹಲವೆಡೆ ಮಳೆ: ಸಿಡಿಲು ಬಡಿದು ಇಬ್ಬರು ರೈತರ ಸಾವು

ಜುಗಲ್ಬಂದಿ ಸಂಗೀತ: ಮಹೇಶ್ ಕಾಳೆ- ಸಂದೀಪ್ ನಾರಾಯಣ್

ಮತ್ತಷ್ಟು ಸುದ್ದಿಗಳು

vertical

Latest News

ಮೊಸಳೆಯೊಂದಿಗೆ ಬೇಸ್ ಬಾಲ್ ಮ್ಯಾಚ್ ನೋಡಲು ಬಂದ ಪ್ರಾಣಿ ಪ್ರೇಮಿ!

newsics.com ಅಮೆರಿಕ: ಮನೆಯಲ್ಲಿ ಸಾಕಿದ್ದ ಮೊಸಳೆಯೊಂದಿಗೆ ಬೇಸ್‌ಬಾಲ್ ಮ್ಯಾಚ್‌ ನೋಡಲು ಸ್ಟೇಡಿಯಂ ಬಂದ ಪ್ರಾಣಿ ಪ್ರೇಮಿಯೊಬ್ಬನನ್ನು ಕಂಡು ಭದ್ರತಾ ಸಿಬ್ಬಂದಿ ದಂಗಾಗಿ ಪ್ರವೇಶ ನಿರಾಕರಿಸಿರುವ ಪ್ರಸಂಗ ಅಮೆರಿಕಾದ...

ಜಿಪಿಎಸ್ ಮ್ಯಾಪ್ ಎಡವಟ್ಟು: ಕಾರು ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರ ಸಾವು

newsics.com ತಿರುವನಂತಪುರಂ: ಜಿಪಿಎಸ್ ಮ್ಯಾಪ್ ತೋರಿಸಿದ ದಾರಿಯಲ್ಲಿ ಹೋದ ಕಾರೊಂದು ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರು ಮೃತಪಟ್ಟ ಘಟನೆ ಕೇರಳದ ಎರ್ನಾಕುಲಂನಲ್ಲಿ ನಡೆದಿದೆ. ತಡರಾತ್ರಿ ಭಾರಿ ಮಳೆಯ ಕಾರಣ ಅವಘಡ ಸಂಭವಿಸಿದೆ. ಮೃತರನ್ನು ಡಾ.ಅದ್ವೈತ್ (29)...

ವರದಿಗಾರ್ತಿ ಮೇಲೆ ರೇಗಿದ ಅಣ್ಣಾಮಲೈ: ಖಂಡನೆ

newsics.com ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮಹಿಳಾ ವರದಿಗಾರರೊಬ್ಬರ ಮೇಲೆ ಸಿಟ್ಟಾಗುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ. ವರದಿಗಾರ್ತಿ ಜೊತೆ ಅಣ್ಣಾಮಲೈ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ...
- Advertisement -
error: Content is protected !!