Monday, October 2, 2023

ಯಕ್ಷಗಾನ ಪ್ರಸಂಗಗಳ ಡಿಜಿಟಲೀಕರಣ- ಸಚಿವ ಸಿ ಟಿ ರವಿ

Follow Us

ಬೆಂಗಳೂರು: ಯಕ್ಷಗಾನದ ಪ್ರಸಂಗಗಳನ್ನು ಡಿಜಿಟಲೀಕರಣ ಮಾಡುವುದಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ ಟಿ ರವಿ ಘೋಷಿಸಿದ್ದಾರೆ.
‘ಯಕ್ಷಗಾನದ ಪ್ರಸಂಗಗಳನ್ನು ಡಿಜಿಟಲೀಕರಣ ಮಾಡುವುದಾಗಿ ಇಲಾಖೆ ವತಿಯಿಂದ ಯೋಜನೆ ಹಮ್ಮಿಕೊಳ್ಳಲಾಗಿದೆ’ ಎಂದು ತಮ್ಮ ಟ್ವೀಟ್ ನಲ್ಲಿ ಮಾಹಿತಿ ನೀಡಿದ್ದಾರೆ. ಈ ಹೊಸ ಯೋಜನೆಗೆ ಅವರು ಬೆಂಗಳೂರಿನಲ್ಲಿ ಚಾಲನೆ ನೀಡಿದ್ದು, ‘ನಮ್ಮ ಹೆಮ್ಮೆಯ ಕಲೆ ಯಕ್ಷಗಾನ ಇನ್ನು ಮುಂದೆ ಡಿಜಿಟಲ್ ಮಾಧ್ಯಮದ ಮೂಲಕ ಮೊಬೈಲ್ ಹಾಗೂ ಕಂಪ್ಯೂಟರ್ ಗಳಿಗೆ ಬರಲಿದ್ದು, ಇದು ಒಂದು ಸಾಧನೆ ಎಂದು ಭಾವಿಸಿದ್ದೇನೆ. ಕಾಲಕ್ಕೆ ತಕ್ಕಂತೆ ನಾವು ಬದಲಾಗಬೇಕು ಎಂಬ ಮಾತನ್ನು ನಾನು ಒಪ್ಪುತ್ತೇನೆ’ ಎಂದು ಟ್ವೀಟ್ ನಲ್ಲಿ ಹೇಳಿದ್ದಾರೆ.

ಮನ ಗೆದ್ದ ತುಳಸಿಯ ‘ಪಂಚ ಪಾವನ‌ ಕಥಾ’:
ಈ ಯೋಜನೆಯಿಂದ ಯಕ್ಷಗಾನವನ್ನು ಇನ್ನು ಮುಂದೆ ಮೊಬೈಲ್, ಕಂಪ್ಯೂಟರಿನಲ್ಲಿ ನೋಡಬಹುದಾಗಿದೆ. ಡಿಜಿಟಲೀಕರಣ ಯೋಜನೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರೊ.ಎಂ.ಎ.ಹೆಗಡೆ ಅವರ ನಿರ್ದೇಶನದ ಪಂಚಭೂತಗಳನ್ನು ಪಾವನಗೊಳಿಸಿ ಪ್ರಕೃತಿ ಸಂರಕ್ಷಿಸಿದ ಮಾಧವನ ಬಾಲಲೀಲಾ ಲೋಕದ `ಪಂಚ ಪಾವನ‌ ಕಥಾ’ವನ್ನು ಪುಟಾಣಿ ಶಿರಸಿಯ ತುಳಸಿ ಹೆಗಡೆ ಪ್ರಸ್ತುತಪಡಿಸಿ ನೋಡುಗರ ಮನ ಗೆದ್ದಳು.

ಮತ್ತಷ್ಟು ಸುದ್ದಿಗಳು

vertical

Latest News

ಜಿಪಿಎಸ್ ಮ್ಯಾಪ್ ಎಡವಟ್ಟು: ಕಾರು ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರ ಸಾವು

newsics.com ತಿರುವನಂತಪುರಂ: ಜಿಪಿಎಸ್ ಮ್ಯಾಪ್ ತೋರಿಸಿದ ದಾರಿಯಲ್ಲಿ ಹೋದ ಕಾರೊಂದು ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರು ಮೃತಪಟ್ಟ ಘಟನೆ ಕೇರಳದ ಎರ್ನಾಕುಲಂನಲ್ಲಿ ನಡೆದಿದೆ. ತಡರಾತ್ರಿ ಭಾರಿ ಮಳೆಯ ಕಾರಣ...

ವರದಿಗಾರ್ತಿ ಮೇಲೆ ರೇಗಿದ ಅಣ್ಣಾಮಲೈ: ಖಂಡನೆ

newsics.com ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮಹಿಳಾ ವರದಿಗಾರರೊಬ್ಬರ ಮೇಲೆ ಸಿಟ್ಟಾಗುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ. ವರದಿಗಾರ್ತಿ ಜೊತೆ ಅಣ್ಣಾಮಲೈ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ...

ರಸ್ತೆ ಅಪಘಾತ: ಮಗು ಸೇರಿ ಕನಿಷ್ಠ 10 ಮಂದಿ ಸಾವು

newsics.com ಮೆಕ್ಸಿಕೊ: ಟ್ರಕ್ ವೊಂದು ಅಪಘಾತಕ್ಕೆ ಒಳಗಾದ ಪರಿಣಾಮ 10 ಜನ ವಲಸಿಗರು ಸಾವನ್ನಪಿರುವ ಘಟನೆ ದಕ್ಷಿಣ ರಾಜ್ಯ ಚೈಪಾಸ್ನಲ್ಲಿ ನಡೆದಿದೆ. ಅಪಘಾತದಲ್ಲಿ 17 ಜನ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಮತ್ತು ಗಾಯಾಳುಗಳು...
- Advertisement -
error: Content is protected !!