Tuesday, December 5, 2023

ಪ್ರವಾಹಕ್ಕೆ ಸಿಲುಕಿ ಮರವೇರಿದ್ದ ಯಾದಗಿರಿ ತಹಸೀಲ್ದಾರ್ ರಕ್ಷಣೆ

Follow Us

newsics.com
ಕಲಬುರಗಿ: ಮಳೆ ಅಬ್ಬರಕ್ಕೆ ಉತ್ತರ ಕರ್ನಾಟಕದ ಬಹುಪಾಲು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಪ್ರವಾಹಕ್ಕೆ ಸಿಲುಕಿ ಮರವೇರಿದ್ದ ಯಾದಗಿರಿ ತಹಸೀಲ್ದಾರ್ ಅವರನ್ನು ರಕ್ಷಿಸಲಾಗಿದೆ.
ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಗಣಾಪುರ ಗ್ರಾಮದ ಸೇತುವೆ ಬಳಿ ಸಿಲುಕಿದ್ದ ಯಾದಗಿರಿ ತಹಸೀಲ್ದಾರ್ ಪಂಡಿತ್ ಬಿರಾದಾರ್ ಅವರನ್ನು ರಕ್ಷಣೆ ಮಾಡಲಾಗಿದೆ ಎಂದು ಕಲಬುರಗಿ ಜಿಲ್ಲಾಡಳಿತ ತಿಳಿಸಿದೆ.
ಬುಧವಾರ ಯಾದಗಿರಿಯಿಂದ ಬೀದರ್’ಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಯಾದಗಿರಿ ತಹಸೀಲ್ದಾರ್ ಪಂಡಿತ್ ಬಿರಾದಾರ್ ಅವರು ಪ್ರವಾಹವಿದ್ದ ಸೇತುವೆಯನ್ನು ದಾಟಿದ್ದಾರೆ. ಈ ವೇಳೆ ಕಾರು ಪ್ರವಾಹದಲ್ಲಿ ಸಿಲುಕಿದ್ದು, ತಕ್ಷಣ ಕಾರಿನಿಂದ ಇಳಿದ ತಹಸೀಲ್ದಾರ್ ಅಲ್ಲೇ ಇದ್ದ ಮರವೊಂದನ್ನು ಏರಿ ಕುಳಿತಿದ್ದಾರೆ.
ಮಾಹಿತಿ ತಿಳಿದ ಕಲಬುರಗಿ ತಹಸೀಲ್ದಾರ್ ಅರುಣ್ ಕುಮಾರ್ ಕುಲಕರ್ಣಿ, ಡಿವೈಎಸ್ಪಿ ವೀರಭದ್ರಯ್ಯ, ಸಿಪಿಐ ಮಹಾಂತೇಶ ಪಾಟೀಲ್, ಪಿಎಸ್‌ಐ ಸಂತೋಷ್ ರಾಥೋಡ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತೆರಳಿ ತಹಸೀಲ್ದಾರ್ ಪಂಡಿತ್ ಬಿರಾದಾರ್ ಆವರನ್ನು ರಕ್ಷಿಸಿದ್ದಾರೆ.

ಕಾರಿನ ಟೈರ್ ಬ್ಲಾಸ್ಟ್; ತಾಯಿ, ಮಗ ಸೇರಿ ಮೂವರ ಸಾವು

ಮತ್ತಷ್ಟು ಸುದ್ದಿಗಳು

vertical

Latest News

ವಿಜಯೇಂದ್ರ ಪತ್ನಿ ಸಹೋದರನ ಮನೆ ಮೇಲೆ ಲೋಕಾಯುಕ್ತ ದಾಳಿ

Newsics.com ಕಲಬುರಗಿ : ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ ಮಾಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪತ್ನಿ ಸಹೋದರ ಡಾ ಪ್ರಭುಲಿಂಗ ಮಾನ್ಕರ್ ಅವರ ಮನೆ...

ಭಾರತದಲ್ಲಿ 75 ಲಕ್ಷಕ್ಕೂ ಅಧಿಕ ವಾಟ್ಸ್ ​ಆ್ಯಪ್ ಅಕೌಂಟ್ ಬ್ಯಾನ್

Newsics.com ನವದೆಹಲಿ : ಮೆಟಾದ ತ್ವರಿತ ಮೆಸೇಜಿಂಗ್ ಪ್ಲಾಟ್​ಫಾರ್ಮ್ ವಾಟ್ಸ್​ಆ್ಯಪ್ ಭಾರತದಲ್ಲಿ ಕಳೆದ ಅಕ್ಟೋಬರ್ ತಿಂಗಳಲ್ಲಿ ಬರೋಬ್ಬರಿ 75 ಲಕ್ಷಕ್ಕೂ ಅಧಿಕ ವಾಟ್ಸ್​ ಆ್ಯಪ್ ಖಾತೆಗಳನ್ನು ರದ್ದುಗೊಳಿಸಿದೆ ಎಂದು ವರದಿಯಾಗಿದೆ. 2021 ಬಳಕೆದಾರರ ಸುರಕ್ಷತ...

ತೆಲಂಗಾಣದ ನೂತನ ಸಿಎಂ ಇವರೇ : ನಾಳೆಯೇ ಪ್ರಮಾಣ ವಚನ..!!

Newsics.com ಹೈದರಾಬಾದ್ : ತೆಲಂಗಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಇದೀಗ ಬಂದ ಮಾಹಿತಿ ಪ್ರಕಾರ, ರೇವಂತ್ ರೆಡ್ಡಿ ಅವರನ್ನೇ...
- Advertisement -
error: Content is protected !!