Wednesday, May 31, 2023

ಮಾಜಿ ಸಚಿವ ಅಮರನಾಥ ಶೆಟ್ಟಿ ನಿಧನ

Follow Us

ಮಂಗಳೂರು: ಮಾಜಿ ಸಚಿವ, ಜೆಡಿಎಸ್ ಹಿರಿಯ ಮುಖಂಡ ಮೂಡಬಿದಿರೆಯ ಅಮರನಾಥ ಶೆಟ್ಟಿ (80) ಸೋಮವಾರ ಮುಂಜಾನೆ ನಿಧನರಾದರು.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಎರಡು ವಾರಗಳ ಹಿಂದೆ ನಗರದ ಎ.ಜೆ. ಆಸ್ಪತ್ರೆಗೆ ದಾಖಲಾಗಿದ್ದರು. ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರಿದ್ದಾರೆ.
ಚುನಾವಣಾ ರಾಜಕೀಯದಿಂದ ದೂರ ಉಳಿದಿದ್ದ ಅವರು 2016ರಲ್ಲಿ ರಾಜಕೀಯದಿಂದ ನಿವೃತ್ತರಾಗಿದ್ದರು. ಅಮರನಾಥ ಶೆಟ್ಟಿ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಪುಷ್ಪಾ 2 ಶೂಟಿಂಗ್‌ ಮುಗಿಸಿ ವಾಪಸ್ ತೆರಳಿದ್ದ ಕಲಾವಿದರ ಬಸ್‌ ಅಪಘಾತ

newsics.com ಅಲ್ಲು ಅರ್ಜುನ್- ರಶ್ಮಿಕಾ ಮಂದಣ್ಣ ನಟನೆಯ 'ಪುಷ್ಪ 2' ಸಿನಿಮಾದಲ್ಲಿ ನಟಿಸುತ್ತಿದ್ದ ಸಹ ಕಲಾವಿದರು ಚಿತ್ರೀಕರಣದಲ್ಲಿ ಭಾಗವಹಿಸಿ ವಾಪಸ್ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ತೆಲಂಗಾಣದ...

ಆದಾಯ ತೆರಿಗೆ ಅಧಿಕಾರಿಗಳಂತೆ ವೇಷ ಧರಿಸಿ ಚಿನ್ನ ಕದ್ದ ಕಳ್ಳರು

newsics.com ಹೈದರಾಬಾದ್: ಆದಾಯ ತೆರಿಗೆ ಅಧಿಕಾರಿಗಳಂತೆ ವೇಷ ಧರಿಸಿ ಹೈದರಾಬಾದ್‌ನ ಅಂಗಡಿಯೊಂದರಲ್ಲಿ 60 ಲಕ್ಷ ರೂ. ಮೌಲ್ಯದ ಚಿನ್ನದ ಬಿಸ್ಕತ್‌ಗಳನ್ನು ಕದ್ದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಗಳನ್ನು ರೆಹಮಾನ್...

ಮಲಯಾಳಂ ಚಿತ್ರರಂಗದ ಖ್ಯಾತ ನಟ ಹರೀಶ್ ಪೆಂಗನ್ ನಿಧನ

newsics.com ಮಲಯಾಳಂ ಚಿತ್ರರಂಗದ ಖ್ಯಾತ ಕಲಾವಿದ ಹರೀಶ್ ಪೆಂಗನ್ ಅವರು ಮಂಗಳವಾರ (ಮೇ 30) ನಿಧನ ಹೊಂದಿದ್ದಾರೆ. ಅವರಿಗೆ 49 ವರ್ಷ ವಯಸ್ಸಾಗಿತ್ತು. ಹರೀಶ್ ಅವರು ಕಳೆದ ಕೆಲ ವರ್ಷಗಳಿಂದ ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದರು....
- Advertisement -
error: Content is protected !!