Tuesday, March 28, 2023

ಬೆಂಗಳೂರಲ್ಲಿ ಭಾರೀ ಮಳೆ; ಹಲವು ರಸ್ತೆಗಳು ಜಲಾವೃತ

Follow Us

newsics.com
ಬೆಂಗಳೂರು: ನಗರದಾದ್ಯಂತ ಮಂಗಳವಾರ ಮಧ್ಯಾಹ್ನದಿಂದ ರಾತ್ರಿಯವರೆಗೆ ಬಿಟ್ಟು ಬಿಡದೇ ಬಾರೀ ಮಳೆ ಸುರಿದಿದೆ. ಸೋಮವಾರ ರಾತ್ರಿಯೂ ಉತ್ತಮ ಮಳೆಯಾಗಿತ್ತು.
ಮಂಗಳವಾರ ಎಡೆಬಿಡದೆ ಸುರಿದ ಮಳೆಯಿಂದಾಗಿ ನಗರದ ಜನಜೀವನ ಅಸ್ತವ್ಯಸ್ತವಾಗಿದೆ. ಟ್ರಾಫಿಕ್ ನಲ್ಲಿ ಸಿಲುಕಿದ ವಾಹನ ಸವಾರರು ಪರದಾಡಿದರು.
ಮೆಜೆಸ್ಟಿಕ್, ನಾಗರಬಾವಿ, ಶಾಂತಿನಗರ, ವಿಲ್ಸನ್ ಗಾರ್ಡನ್, ಲಕ್ಕಸಂದ್ರ, ಗಿರಿನಗರ, ನಾಗೇಂದ್ರ ಬ್ಲಾಕ್​, ಹೊಸಕೆರೆ ಹಳ್ಳಿ, ಇಂದಿರಾ ನಗರ, ಚಾಮರಾಜಪೇಟೆ, ಶ್ರೀರಾಂಪುರ, ರಾಜಾಜಿನಗರ, ಆರ್​ ಆರ್​ ನಗರ ಸೇರಿದಂತೆ ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಅಬ್ಬರದ ಮಳೆಗೆ ಬಹುತೇಕ ರಸ್ತೆಗಳು ಜಲಾವೃತವಾಗಿದ್ದವು. ನಗರದ ಹಲವೆಡೆ ವಿದ್ಯುತ್​ ವ್ಯತ್ಯಯ ಉಂಟಾಗಿದೆ.
ಮಲೆನಾಡು, ಕರಾವಳಿಯಲ್ಲಿ ಕಳೆದೊಂದು ವಾರದಿಂದ ಕಡಿಮೆಯಾಗಿದ್ದ ಮಳೆ ನಾಳೆಯಿಂದ (ಸೆ.30) ಮತ್ತೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಕ್ಟೋಬರ್ 1 ರಿಂದ 3ರವರೆಗೆ ಸಾಧಾರಣ ಮಳೆಯಾಗಲಿದೆ. ಚಾಮರಾಜನಗರ, ಮೈಸೂರು, ‌ಮಂಡ್ಯ, ರಾಮನಗರ, ‌ಹಾಸನ, ಬೆಂಗಳೂರು, ಕೋಲಾರ, ಬಳ್ಳಾರಿಯಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಶಿಕ್ಷಣ ಇಲಾಖೆಗೆ ಹೊಸ ಆಯುಕ್ತರ ನೇಮಕ

ಮುಗ್ಗರಿಸಿದ ಡೆಲ್ಲಿ ಕ್ಯಾಪಿಟಲ್ಸ್; ಸನ್ ರೈಸರ್ಸ್’ಗೆ ಜಯ

ವಿಕ್ರಮ ಬೇತಾಳ ಕಲಾವಿದ ಇನ್ನಿಲ್ಲ

ದೇಶದ ಜನರಿಗೆ ಕೊರೋನಾ ಲಸಿಕೆ ಹಂಚಲು 80,000 ಕೋಟಿ ರೂ. ಬೇಕಾಗಿಲ್ಲ- ಕೇಂದ್ರ ಸ್ಪಷ್ಟನೆ

ಮತ್ತಷ್ಟು ಸುದ್ದಿಗಳು

vertical

Latest News

ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್‌) ಬಡ್ಡಿ ದರ ಶೇ.8.15 ಕ್ಕೆ ಏರಿಕೆ

newscics.com ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಭವಿಷ್ಯ ನಿಧಿಯ ಮೇಲಿನ ಬಡ್ಡಿ ದರವನ್ನುಬ ಹೆಚ್ಚಿಸಲು ತೀರ್ಮಾನಿಸಿದೆ....

ವಾಯುಮಾಲಿನ್ಯದಿಂದ 1,220 ಜನರು ಸಾವು

newscics.com ಮುಂಬೈ: ಮುಂಬೈನಲ್ಲಿ 2016-2021 ರ ನಡುವೆ 1,220 ಜನರು ವಾಯುಮಾಲಿನ್ಯದಿಂದ ಸಾವನ್ನಪ್ಪಿದ್ದಾರೆ. ಅಂಕಿಅಂಶಗಳ ಪ್ರಕಾರ, ಮುಂಬೈನಲ್ಲಿ 2016 ಮತ್ತು 2021 ರ ನಡುವೆ 1,220...

ಭಾರತದ ಮೊದಲ ಗೀರ್ ತದ್ರೂಪಿ ತಳಿ ಆಕಳ ಕರು ಜನನ

newsics.com ನವದೆಹಲಿ: ಭಾರತದ ಮೊದಲ ತದ್ರೂಪಿ ಗಿರ್ ತಳಿಯ ಆಕಳ ಕರು ಹರಿಯಾಣದ ಕರ್ನಾಲ್‌ನಲ್ಲಿರುವ ರಾಷ್ಟ್ರೀಯ ಡೈರಿ ಸಂಶೋಧನಾ ಸಂಸ್ಥೆ (NDRI) ಯಲ್ಲಿ ಜನ್ಮ ಪಡೆದಿದೆ.ಈ...
- Advertisement -
error: Content is protected !!