newsics.com
ಬೆಂಗಳೂರು : ಕಳೆದ ವಾರದಿಂದ ಬಿಡುವು ನೀಡಿದ್ದ ಮಳೆ ಇಂದು(ನ.5) ಮತ್ತೆ ಬೆಂಗಳೂರಿನಲ್ಲಿ ಆರ್ಭಟಿಸಿದೆ.
ಗುರುವಾರ ಸಂಜೆಯಿಂದ ಭಾರೀ ಗುಡುಗು ಮಿಂಚಿನಿಂದ ಮಳೆಯಾಗುತ್ತಿದ್ದು, ನಗರದ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದೆ. ಭಾರೀ ಮಳೆಯಿಂದಾಗಿ ವಾಹನ ಸವಾರರು ಪರದಾಡುತ್ತಿದ್ದಾರೆ.
ವಿಧಾನಸೌಧ , ರೇಸ್ ಕೋರ್ಸ್ ರೋಡ್ , ಕೆಆರ್ ಸರ್ಕಲ್, ಮಲ್ಲೇಶ್ವರಂ, ಜೆಪಿನಗರ ಬಸವನಗುಡಿ, ಜಯನಗರ, ಬನಶಂಕರಿ, ಶೇಷಾದ್ರಿಪುರಂ ಸೇರಿದಂತೆ ನಗರದ ಹಲವೆಡೆ ಮಳೆಯಾಗುತ್ತಿದೆ. ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕೆಬಿಸಿಯಲ್ಲಿ ಕೋಟಿ ರೂ. ಗೆದ್ದ ನಾಜಿಯಾ
ಕಾಲೇಜು ಆರಂಭಕ್ಕೆ ಯುಜಿಸಿ ಮಾರ್ಗಸೂಚಿ
ಮೇಯರ್ ಚುನಾವಣೆಯಲ್ಲಿ ಗೆದ್ದ ನಾಯಿ