Monday, December 11, 2023

ಮುರುಘಾ ಶ್ರೀ ಚೆಕ್ ಗಳಿಗೆ ಸಹಿ ಹಾಕಲು ಹೈಕೋರ್ಟ್ ಅನುಮತಿ​

Follow Us

newsics.com

ಬೆಂಗಳೂರು: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಬಂಧನಕ್ಕೊಳಾಗಿರುವ  ಮುರುಘಾ ಮಠದ ಡಾ. ಶಿವಮೂರ್ತಿ ಶರಣರು ಮಠದ ದಾಖಲೆ, ಚೆಕ್​ಗಳಿಗೆ ಸಹಿ ಹಾಕಲು ಹೈಕೋರ್ಟ್ ಶುಕ್ರವಾರ ಷರತ್ತುಬದ್ಧ ಅನುಮತಿ ನೀಡಿದೆ.

ಮಠದ ಸಿಬ್ಬಂದಿಗೆ ವೇತನ ಮತ್ತು ಇತರೆ ದೈನಂದಿನ ವೆಚ್ಚಗಳಿಗೆ ಸಂಬಂಧಿಸಿದ ಚೆಕ್ ಗಳಿಗೆ ಸಹಿ ಮಾಡಲು ಅನುಮತಿ ನೀಡುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸ್ವಾಮೀಜಿ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಷರತ್ತುಬದ್ಧ ಅನುಮತಿ  ನೀಡಿದೆ. ಮುರುಘಾ ಶ್ರೀಗಳು ವೇತನಕ್ಕೆ ಸಂಬಂಧಿಸಿದ ಚೆಕ್​ಗಳಿಗೆ ಮಾತ್ರ ಸಹಿ ಹಾಕಬೇಕು. ಸಹಿ ಪಡೆಯಲು ಚಿತ್ರದುರ್ಗ ಸೆಂಟ್ರಲ್​ ಜೈಲಿನ ಅಧಿಕಾರಿಗಳು ಸಂಬಂಧಪಟ್ಟವರಿಗೆ ಅನುಮತಿ ನೀಡಬೇಕು. ಸಹಿ ಹಾಕುವ ವೇಳೆ ತನಿಖಾಧಿಕಾರಿ, ಜೈಲು ಅಧೀಕ್ಷಕರು ಉಪಸ್ಥಿತರಿರಬೇಕು ಎಂದು ಹೈಕೋರ್ಟ್ ಹೇಳಿದೆ. ಇದರಿಂದ ವೇತನಕ್ಕಾಗಿ ಕಾಯುತ್ತಿದ್ದ ಮಠದ ಮೂರು ಸಾವಿರ ಸಿಬ್ಬಂದಿ ಸದ್ಯಕ್ಕೆ ನಿಟ್ಟುಸಿರುಬಿಟ್ಟಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಚುನಾವಣೆ: ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ

ಮತ್ತಷ್ಟು ಸುದ್ದಿಗಳು

vertical

Latest News

ನಿನ್ಗೆ ಹುಚ್ಚು ನಾಯಿ ಕಚ್ಚಿದ್ಯಾ? ; ಬಿಜೆಪಿ ವಿರುದ್ಧ ಲಕ್ಷ್ಮಣ್‌ ಸವದಿ ಕೆಂಡಾಮಂಡಲ

  newsics.com ಬೆಳಗಾವಿ: ರೈತರು  ದೇವರ ಸಮಾನ,  ರೈತರ ಹಣ ತಿಂದ ಮಾಲೀಕರು ಉದ್ಧಾರ ಆಗಲ್ಲ. ಅವರಿಗೆ ಮೋಸ ಮಾಡಬೇಡಿ ಎಂದು  ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಕಲಾಪದ ವೇಳೆ...

ಹಸುಗಳ ಮೇಲೆ ಆ್ಯಸಿಡ್‌ ಎರಚಿದ ಬೆಂಗಳೂರಿನ ವೃದ್ಧೆ

newsics.com ನೆಲಮಂಗಲ:  ಮನೆ ಬಳಿ ಮೇಯಲು ಬಂದ ಹಸುಗಳ ಮೇಲೆ ಆ್ಯಸಿಡ್ ಎರಚಿ ವಿಕೃತಿ ಮೆರೆದಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಗುಣಿ ಅಗ್ರಹಾರ ಗ್ರಾಮದಲ್ಲಿ ನಡೆದಿದೆ. ಜೋಸೆಫ್ ಗ್ರೇಸ್ (76 ವರ್ಷ)  ಎನ್ನುವ ಮಹಿಳೆ ಮನೆ...

ಆಸ್ತಿಗಾಗಿ ತಂದೆ-ತಾಯಿಯನ್ನೇ ಕೊಲೆಗೈದಿದ್ದ ಮಗ ಅರೆಸ್ಟ್​

newsics.com ದೇವನಹಳ್ಳಿ:  ಆಸ್ತಿಗಾಗಿ ಹೆತ್ತ ತಂದೆ-ತಾಯಿಯನ್ನೇ ಕೊಲೆಗೈದಿರುವುದಾಗಿ ಪೊಲೀಸರ ವಿಚಾರಣೆ ವೇಳೆ ಮಗ ನರಸಿಂಹಮೂರ್ತಿ ತಪ್ಪೊಪ್ಪಿಕೊಂಡಿದ್ದಾನೆ.  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಗ್ರಾಮದಲ್ಲಿ ವೃದ್ಧ ದಂಪತಿ ಯನ್ನು ಕೊಲೆಗೈದಿದ್ದ ಮಗನನ್ನು ಪೊಲೀಸರು...
- Advertisement -
error: Content is protected !!