Monday, October 2, 2023

ರಮೇಶ್ ಜಾರಕಿಹೊಳಿ ಚೆಕ್ ಬೌನ್ಸ್ ಕೇಸ್ : ಮರುವಿಚಾರಣೆಗೆ ಹೈಕೋರ್ಟ್ ಆದೇಶ

Follow Us

newsics.com
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಹಕಾರ ಬ್ಯಾಂಕ್ ಗೆ ನೀಡಿದ್ದ 5.2 ಕೋಟಿ ರೂ. ಚೆಕ್ ಬೌನ್ಸ್ ಪ್ರಕರಣವನ್ನು ಖಾಸಗಿ ದೂರು ದಾಖಲಿಸಿದ ದಿನಾಂಕದಿಂದ ಮರು ವಿಚಾರಣೆ ನಡೆಸುವಂತೆ ಹೈಕೋರ್ಟ್ ಆದೇಶಿಸಿದೆ.
ಈ ಮೊದಲು ಈ ಪ್ರಕರಣವನ್ನು ಚಿಕ್ಕೋಡಿ ನ್ಯಾಯಾಲಯ ವಜಾಗೊಳಿಸಿತ್ತು. ಇದೀಗ ಚಿಕ್ಕೋಡಿ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್​ ರದ್ದುಪಡಿಸಿದ್ದು, ವಿಚಾರಣೆ ಪ್ರಕ್ರಿಯೆ ಕಾನೂನಿಗೆ ಅನುಗುಣವಾಗಿರಲಿಲ್ಲ. ಈಗ ವಿಚಾರಣೆಗೆ ಪರಿಗಣಿಸುವ ಮುನ್ನ ರಮೇಶ್‌ ಜಾರಕಿಹೊಳಿಗೆ ನೋಟಿಸ್ ನೀಡಿ ಮರು ವಿಚಾರಣೆಗೆ ಸೂಚಿಸಿದೆ.

ಸಾಲಕ್ಕೆ ಪ್ರತಿಯಾಗಿ ನೀಡಿದ್ದ 5.2 ಕೋಟಿ ರೂ. ಮೌಲ್ಯದ ಚೆಕ್ ಬೌನ್ಸ್ ಆಗಿದೆ ಎಂದು ರಮೇಶ್ ಜಾರಕಿಹೊಳಿ ವಿರುದ್ಧ ಬೀರೇಶ್ವರ ಸೊಸೈಟಿ ದೂರು ನೀಡಿತ್ತು. ಚಿಕ್ಕೋಡಿ ನ್ಯಾಯಾಲಯಕ್ಕೆ ವಿಚಾರಣೆ ವೇಳೆ ವಕೀಲರು ಗೈರು ಹಾಜರಾದ ಹಿನ್ನೆಲೆಯಲ್ಲಿ ಪ್ರಕರಣ ವಜಾಗೊಂಡಿತ್ತು. ಇದೀಗ ಕೇಸ್ ಮರುಜೀವ ಪಡೆದುಕೊಂಡಿದೆ.

 

ಇಲ್ಲಿ ಮಗು ಹುಟ್ಟಿದಾಗ ಸಂಬಂಧಿಕರಿಗೆ ಅಕ್ಕಿ ಕಳುಹಿಸಿ ಸಂಭ್ರಮಿಸುತ್ತಾರೆ !

ಮತ್ತಷ್ಟು ಸುದ್ದಿಗಳು

vertical

Latest News

ನಾಳೆಯಿಂದ ಕುಮಾರ ಪರ್ವತ ಚಾರಣಕ್ಕೆ ನಿರ್ಬಂಧ

newsics.com ಸುಬ್ರಹ್ಮಣ್ಯ: ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತಕ್ಕೆ ಚಾರಣ ಹೋಗಲು ನಾಳೆಯಿಂದ(ಅ. 3) ನಿರ್ಬಂಧ ವಿಧಿಸಲಾಗಿದೆ. ಪ್ರಸ್ತುತ ಜಿಲ್ಲೆಯಾದ್ಯಂತ...

ಚಿನ್ನ, ಬೆಳ್ಳಿ ದರ ಸ್ಥಿರ

Newsics.com ಬೆಂಗಳೂರು: ಕಳೆದ ವಾರ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದ ಚಿನ್ನ ಬೆಳ್ಳಿಯ ದರ ಈ ವಾರ ಸ್ಥಿರಗೊಂಡಿದೆ. ದೇಶದಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 53,350 ರೂ., 24 ಕ್ಯಾರಟ್ 10 ಗ್ರಾಂ...

ವಿಮಾನದ ತುರ್ತು ಬಾಗಿಲು ತೆರೆಯಲೆತ್ನಿಸಿದ ಪ್ರಯಾಣಿಕ: ತುರ್ತು ಭೂ ಸ್ಪರ್ಶ, ಬಂಧನ

newsics.com ದೇವನಹಳ್ಳಿ: ಟೇಕ್ಆಫ್ ಆಗುತ್ತಿದ್ದ ವಿಮಾನದ ಎಮರ್ಜೆನ್ಸಿ ಡೋರ್ ತೆರೆಯಲು ಯತ್ನಿಸಿದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಸ್ವಪ್ನೋಲ್ ಹೋಲೆ ಬಂಧಿತ ಪ್ರಯಾಣಿಕ. ಸ್ವಪ್ನೋಲ್ ಇಂಡಿಗೋ...
- Advertisement -
error: Content is protected !!