Tuesday, December 5, 2023

ಕಾವೇರಿ, ಕೃಷ್ಣಾ ಹಾಗೂ ಮಹದಾಯಿ ನದಿ ವಿವಾದ; ಈವರೆಗೆ ವಕೀಲರಿಗೆ ಪಾವತಿಸಿದ ಶುಲ್ಕ 122.75 ಕೋಟಿ ರೂ.!

Follow Us

newsics.com

ಬೆಳಗಾವಿ: ರಾಜ್ಯದಲ್ಲಿರುವ ಜಲ ವಿವಾದಗಳನ್ನು ಬಗೆಹರಿಸಲು  ರಾಜ್ಯ ಸರ್ಕಾರವು ₹122.76 ಕೋಟಿ ಪಾವತಿಸಲಾಗಿದೆ ಎನ್ನಲಾಗಿದೆ.

‘ಕಾವೇರಿ, ಕೃಷ್ಣಾ ಹಾಗೂ ಮಹದಾಯಿ ನದಿಗಳ ವಿವಾದ ಬಗೆಹರಿಸಲು ರಚಿಸಲಾದ ಕಾವೇರಿ ಜಲವಿವಾದ ನ್ಯಾಯಮಂಡಳಿ, ಕೃಷ್ಣಾ ಜಲವಿವಾದ ನ್ಯಾಯಮಂಡಳಿ ಹಾಗೂ ಮಹದಾಯಿ ಜಲವಿವಾದ ನ್ಯಾಯಮಂಡಳಿ ವಿಚಾರಣೆ ಸಮಯದಲ್ಲಿ ರಾಜ್ಯದ ಪರವಾಗಿ ವಾದ ಮಂಡಿಸಲು ವಕೀಲರ ಶುಲ್ಕಕ್ಕಾಗಿ ರಾಜ್ಯ ಸರ್ಕಾರವು ₹122.76 ಕೋಟಿ ಪಾವತಿಸಿದೆ’ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಹೇಳಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಕರ್ನಾಟಕ, ತಮಿಳನಾಡು, ಕೇರಳ ಮತ್ತು ಪುದುಚೇರಿ ರಾಜ್ಯಗಳ ನಡುವಣ ಜಲವಿವಾದದ ಇತ್ಯರ್ಥಕ್ಕೆ 1990ರಲ್ಲಿ ಕಾವೇರಿ ಜಲವಿವಾದ ನ್ಯಾಯಮಂಡಳಿ ರಚಿಸಲಾಗಿದೆ. ಪ್ರಾರಂಭದಿಂದ 2017ರ ಜುಲೈ 10ರವರೆಗೆ ಒಟ್ಟು 580 ಸಿಟ್ಟಿಂಗ್‌ಗಳು ನಡೆದಿವೆ. ಈ ಪ್ರಕರಣದಲ್ಲಿ ರಾಜ್ಯದ ಪರವಾಗಿ ವಾದ ಮಂಡಿಸಿದ ವಕೀಲರಿಗೆ ₹54.13 ಕೋಟಿಗೂ ಅಧಿಕ ಶುಲ್ಕ ಪಾವತಿಸಲಾಗಿದೆ’ ಎಂದರು.

ಒಟ್ಟು 41 ಹಿರಿಯ ವಕೀಲರಿಗೆ ಶುಲ್ಕ ‍ಪಾವತಿಸಲಾಗಿದೆ. ಪ್ರಮುಖವಾಗಿ ಅನಿಲ ಬಿ. ದಿವಾನ್‌ ಅವರಿಗೆ ₹29.78 ಕೋಟಿ ಎಫ್.ಎಸ್.ನಾರಿಮನ್ ಅವರಿಗೆ ₹27.45 ಕೋಟಿ ಎಸ್.ಎಸ್. ಜವಳಿ ಅವರಿಗೆ ₹12.61 ಕೋಟಿ ಮೋಹನ ಕಾತರಕಿ ಅವರಿಗೆ ₹13.39 ಕೋಟಿ ಶುಲ್ಕ ಸಂದಾಯ ಮಾಡಲಾಗಿದೆ ಎಂದು ಅವರು ದಾಖಲೆ ನೀಡಲಾಗಿದೆ.

‘ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ತಮ್ಮ ಬಳಿಯ ಚಿನ್ನಾಭರಣಗಳನ್ನು ಮಾರಾಟ ಮಾಡಿ ₹10.50 ಕೋಟಿ ವೆಚ್ಚದಲ್ಲಿ ಕೆಆರ್‌ಎಸ್‌ ಜಲಾಶಯ ನಿರ್ಮಿಸಿದರು. ಆದರೆ ಅದರ ನೀರನ್ನು ಬಳಸಿಕೊಳ್ಳಲು ಸರ್ಕಾರ ಕೋಟ್ಯಂತರ ಹಣವನ್ನು ವಕೀಲರಿಗೆ ನೀಡಿದೆ’ ಎಂದರು.

ವೈರಲ್ ವಿಡಿಯೋ: ಆಟೋ ನಂಬರ್ ಪ್ಲೇಟ್ ಮೇಲೆ ಹೆಡೆ ಬಿಚ್ಚಿದ ನಾಗರ!

ಮತ್ತಷ್ಟು ಸುದ್ದಿಗಳು

vertical

Latest News

ವಿಜಯೇಂದ್ರ ಪತ್ನಿ ಸಹೋದರನ ಮನೆ ಮೇಲೆ ಲೋಕಾಯುಕ್ತ ದಾಳಿ

Newsics.com ಕಲಬುರಗಿ : ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ ಮಾಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪತ್ನಿ ಸಹೋದರ ಡಾ ಪ್ರಭುಲಿಂಗ ಮಾನ್ಕರ್ ಅವರ ಮನೆ...

ಭಾರತದಲ್ಲಿ 75 ಲಕ್ಷಕ್ಕೂ ಅಧಿಕ ವಾಟ್ಸ್ ​ಆ್ಯಪ್ ಅಕೌಂಟ್ ಬ್ಯಾನ್

Newsics.com ನವದೆಹಲಿ : ಮೆಟಾದ ತ್ವರಿತ ಮೆಸೇಜಿಂಗ್ ಪ್ಲಾಟ್​ಫಾರ್ಮ್ ವಾಟ್ಸ್​ಆ್ಯಪ್ ಭಾರತದಲ್ಲಿ ಕಳೆದ ಅಕ್ಟೋಬರ್ ತಿಂಗಳಲ್ಲಿ ಬರೋಬ್ಬರಿ 75 ಲಕ್ಷಕ್ಕೂ ಅಧಿಕ ವಾಟ್ಸ್​ ಆ್ಯಪ್ ಖಾತೆಗಳನ್ನು ರದ್ದುಗೊಳಿಸಿದೆ ಎಂದು ವರದಿಯಾಗಿದೆ. 2021 ಬಳಕೆದಾರರ ಸುರಕ್ಷತ...

ತೆಲಂಗಾಣದ ನೂತನ ಸಿಎಂ ಇವರೇ : ನಾಳೆಯೇ ಪ್ರಮಾಣ ವಚನ..!!

Newsics.com ಹೈದರಾಬಾದ್ : ತೆಲಂಗಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಇದೀಗ ಬಂದ ಮಾಹಿತಿ ಪ್ರಕಾರ, ರೇವಂತ್ ರೆಡ್ಡಿ ಅವರನ್ನೇ...
- Advertisement -
error: Content is protected !!