Monday, October 2, 2023

ಶರಣ್’ಗೆ ಕಿಡ್ನಿ ಸ್ಟೋನ್ ಸಮಸ್ಯೆ, ಭಯ ಬೇಡ ಎಂದ ನಟಿ ಶ್ರುತಿ

Follow Us

newsics.com
ಬೆಂಗಳೂರು: ಸ್ಯಾಂಡಲ್’ವುಡ್ ನಟ ಶರಣ್ ಅನಾರೋಗ್ಯ ಹಿನ್ನೆಲೆಯಲ್ಲಿ ಶನಿವಾರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಶರಣ್ ಆರೋಗ್ಯದಲ್ಲಿ ಅಂತಹ ದೊಡ್ಡ ಸಮಸ್ಯೆಯಿಲ್ಲ ಎಂದು ಶರಣ್ ಸಹೋದರಿ, ನಟಿ ಶ್ರುತಿ ತಿಳಿಸಿದ್ದಾರೆ.
ಶರಣ್ ಆರೋಗ್ಯದ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಟಿ ಶ್ರುತಿ, ಅಣ್ಣನ ಆರೋಗ್ಯದಲ್ಲಿ ದೊಡ್ಡ ಸಮಸ್ಯೆಯೇನೂ ಆಗಿಲ್ಲ, ಕಿಡ್ನಿಯಲ್ಲಿ ಸ್ಟೋನ್ ಇರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ಹೇಳಿದ್ದಾರೆ.

ನಟ ಶರಣ್ ಅಸ್ವಸ್ಥ; ಆಸ್ಪತ್ರೆಗೆ ದಾಖಲು


ಎರಡು ದಿನಗಳಿಂದ ಶರಣ್’ಗೆ ಹೊಟ್ಟೆನೋವು ಕಾಣಿಸಿಕೊಂಡಿತ್ತು. ಸಿನಿಮಾ ಚಿತ್ರೀಕರಣಕ್ಕೆ ಅಡ್ಡಿಯಾಗಬಾರದು ಎಂಬ ಕಾರಣದಿಂದಾಗಿ ಆತ ನೋವು ತಡೆದುಕೊಂಡಿದ್ದ. ಇಂದು ಶೂಟಿಂಗ್ ವೇಳೆ ನೋವು ಹೆಚ್ಚಾಗಿದೆ. ಹೀಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಆತಂಕಪಡುವ ಅಗತ್ಯವಿಲ್ಲ ಎಂದಿದ್ದಾರೆ. ವೈದ್ಯರು ಶರಣ್ ಗೆ ಕಿಡ್ನಿಯಲ್ಲಿ ಸ್ಟೋನ್ ಇದೆ ಎಂದಿದ್ದಾರೆ. ಚಿಕಿತ್ಸೆ ಬಳಿಕ ನಾಳೆ ಅಥವಾ ನಾಡಿದ್ದು ವಾಪಸ್ ಮನೆಗೆ ಬರುತ್ತಾನೆ. ಯಾವುದೇ ಸಮಸ್ಯೆಯೂ ಆತನಿಗೆ ಇಲ್ಲ ಎಂದು ಹೇಳಿದ್ದಾರೆ.
ಸಿಂಪಲ್ ಸುನಿ ನಿರ್ದೇಶನದ ʼಅವತಾರ ಪುರುಷʼ ಚಿತ್ರದ ಶೂಟಿಂಗ್ ನಟ ಶರಣ್ ಅಸ್ವಸ್ಥರಾಗಿದ್ದರು.

ದೇಶದಲ್ಲೇ ಬ್ಯಾಟರಿ ಉತ್ಪಾದನೆ; ಎಲೆಕ್ಟ್ರಿಕ್ ವಾಹನ ಅಗ್ಗ ಸಾಧ್ಯತೆ

ಪ್ರಶ್ನೆಪತ್ರಿಕೆ ಸಿಗದೆ ಬಿಎಸ್ಸಿ ಪರೀಕ್ಷೆ ಎರಡೂವರೆ ಗಂಟೆ ವಿಳಂಬ!

ಲಂಚ ಪಡೆಯುತ್ತಿದ್ದ 3 ಜಿಎಸ್ಟಿ ಅಧಿಕಾರಿಗಳನ್ನು ಬಂಧಿಸಿದ ಸಿಬಿಐ

ಮತ್ತಷ್ಟು ಸುದ್ದಿಗಳು

vertical

Latest News

ವಿದ್ಯುತ್ ಲೈನ್ ತಗುಲಿ 5 ಜಾನುವಾರು ಸ್ಥಳದಲ್ಲಿಯೇ ಸಾವು

newsics.com ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ. ಮತ್ತೂರು ಗ್ರಾಮದ...

Asian Games; ಭಾರತಕ್ಕೆ ಒಂದೇ ದಿನ 15 ಪದಕ

newsics.com ಹ್ಯಾಂಗ್‌ಝೌ: ಏಷ್ಯನ್‌ ಗೇಮ್ಸ್‌ನಲ್ಲಿ ಭಾರತ 8ನೇ ದಿನವಾದ ಭಾನುವಾರ ಒಂದೇ ದಿನ 15 ಪದಕ ಬಾಚಿಕೊಂಡಿದೆ. 7ನೇ ದಿನವಾದ ಶನಿವಾರ 10 ಚಿನ್ನ, 14 ಬೆಳ್ಳಿ ಮತ್ತು 14 ಕಂಚಿನೊಂದಿಗೆ 38 ಪದಕಗಳನ್ನು ಭಾರತ...

ಬೆಂಗಳೂರು ಕಂಬಳ: ಕೋಣಗಳಿಗೆ ಮಂಗಳೂರಿಂದಲೇ ಬರುತ್ತೆ ಕುಡಿಯುವ ನೀರು!

newsics.com ಬೆಂಗಳೂರು: ನವೆಂಬರ್ ತಿಂಗಳ 25 ಮತ್ತು 26ನೇ ತಾರೀಕಿನಂದು ಮೊದಲ ಬಾರಿಗೆ ತುಳುನಾಡಿನ ಗಡಿಯನ್ನು ದಾಟಿ ಬೆಂಗಳೂರಿನಲ್ಲಿ ಕರಾವಳಿಯ ಸಾಂಸ್ಕೃತಿಕ ಕ್ರೀಡೆ ಕಂಬಳ ನಡೆಯುತ್ತಿದೆ. ಪುತ್ತೂರು ಶಾಸಕ ಅಶೋಕ್‌ ಕುಮಾರ್ ರೈ ನೇತೃತ್ವದಲ್ಲಿ ಕಂಬಳ...
- Advertisement -
error: Content is protected !!