Wednesday, November 29, 2023

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಳೆಯಿಂದ ಸೇವೆ ಆರಂಭ

Follow Us

newsics.com
ಮಂಗಳೂರು: ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕೊರೋನಾ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ದೇವರ ವಿವಿಧ ಸೇವಾ ಕಾರ್ಯಗಳು ನಾಳೆಯಿಂದ (ಸೆ.14)‌ ಆರಂಭಗೊಳ್ಳಲಿದ್ದು, ಕೆಲ ನಿಯಮಗಳ ಜತೆ ಸೇವೆ ಆರಂಭಿಸಲು ಮುಜರಾಯಿ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ.
ಸರ್ಪ ಸಂಸ್ಕಾರ, ಆಶ್ಲೇಷಾ ಬಲಿ ಸೇರಿದಂತೆ ಎಲ್ಲ ಸೇವೆಗಳು ಷರತ್ತುಗಳೊಂದಿಗೆ ಆರಂಭವಾಗಲಿದೆ. ಹಲವು ನಿಯಮಗಳೊಂದಿಗೆ ಸೇವೆಗಳನ್ನು ನಡೆಸಲು ಮುಜರಾಯಿ ಇಲಾಖೆ ಅನುಮತಿ ನೀಡಿದೆ. ಸೇವಾರ್ಥಿಗಳಿಗೆ ಮಾತ್ರ ಭೋಜನ ವ್ಯವಸ್ಥೆ ಇದೆ. ದೇವಾಲಯ ಬೆಳಗ್ಗೆ 6.30 ರಿಂದ 2.30 ರವರೆಗೆ ಹಾಗೂ ಮಧ್ಯಾಹ್ನ 3.30 ರಿಂದ ರಾತ್ರಿ 8 ಗಂಟೆಯವರೆಗೆ ಬಾಗಿಲು ತೆರೆಯಲಿದೆ.
ಒಂದು ದಿನ ಒಟ್ಟು 30 ಜನರಿಗೆ ಮಾತ್ರ ಸರ್ಪಸಂಸ್ಕಾರ ಹಾಗೂ ಆಶ್ಲೇಷಾ ಬಲಿ ಮಾಡಲು ಅವಕಾಶವಿದ್ದು, ಸೇವಾರ್ಥಿಗಳ ಒಂದು ಟಿಕೆಟ್ ನಲ್ಲಿ ಇಬ್ಬರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಆಡಳಿತಾಧಿಕಾರಿ ಎಂ.ಜೆ.ರೂಪಾ ತಿಳಿಸಿದ್ದಾರೆ.
ಮಹಾಪೂಜೆ‌ ಮತ್ತು ಪಂಚಾಮೃತ ಸೇವೆಯ 10 ಟಿಕೇಟ್ ನೀಡಲಾಗುತ್ತಿದ್ದು, ಸರ್ಪಸಂಸ್ಕಾರ ಸೇವೆಯವರಿಗೆ ಎರಡು ದಿನ ಹಾಗೂ ಉಳಿದವರಿಗೆ ಒಂದು ದಿನ ದೇವಾಲಯದ ವಸತಿಗೃಹದಲ್ಲಿ ವಾಸಿಸಲು ಅವಕಾಶವಿದೆ ಎಂದು ರೂಪಾ ತಿಳಿಸಿದ್ದಾರೆ.

ಕಾನೂನು ಪದವಿ ವ್ಯಾಸಂಗ; ಕೋರ್ಟ್ ಮೆಟ್ಟಿಲೇರಿದ 77ರ ಅಜ್ಜಿ!

2.17 ಕೋಟಿ ಮೌಲ್ಯದ 6.1 ಕೆಜಿ ಚರಸ್ ವಶ, ನೇಪಾಳಿಗನ ಸೆರೆ

ಮತ್ತಷ್ಟು ಸುದ್ದಿಗಳು

vertical

Latest News

ಮೈಸೂರು ವಿವಿ ಪ್ರೊಫೆಸರ್ ವಿರುದ್ಧ ಪಿಎಚ್ಡಿ ವಿದ್ಯಾರ್ಥಿನಿಯಿಂದ ಪೊಲೀಸರಿಗೆ ದೂರು: FIR ದಾಖಲು

newsics.com ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಪ್ರೊಫೆಸರ್ ಶುಭ ಗೋಪಾಲ್ ವಿರುದ್ಧ ಪಿಎಚ್.ಡಿ. ವಿದ್ಯಾರ್ಥಿನಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಮೈಸೂರು ವಿವಿಯ ಮೈಕ್ರೋ ಬಯಾಲಜಿ ವಿಭಾಗದ ಪ್ರೊ.ಶುಭ ಗೋಪಾಲ್ ವಿರುದ್ಧ...

ಮುಂದಿನ ವರ್ಷದಿಂದ 500 ರಿಂದ 600 ಕರ್ನಾಟಕ ಪಬ್ಲಿಕ್ ಸ್ಕೂಲ್ ಆರಂಭ: ಮಧು ಬಂಗಾರಪ್ಪ

newsics.com ಹಾಸನ: ಮುಂದಿನ ಶೈಕ್ಷಣಿಕ ವರ್ಷದಲ್ಲಿ 500 ರಿಂದ 600 ಪಬ್ಲಿಕ್ ಶಾಲೆಗಳನ್ನು ಸ್ಥಾಪನೆ ಮಾಡಲಾಗುವುದು. ಚುನಾವಣೆ ಸಂದರ್ಭದಲ್ಲಿ ನೀಡಿದ 5 ಗ್ಯಾರಂಟಿಗಳನ್ನು ಈಡೇರಿಸಿದ್ದು, ಶಾಲೆಗಳ ಅಭಿವೃದ್ಧಿಗೂ ಹಾಗೂ ಗ್ಯಾರಂಟಿಗೂ ಯಾವ ಸಂಬಂಧವಿಲ್ಲ ಎಂದು...

2024ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಬಿಡುಗಡೆ

newsics.com ಬೆಂಗಳೂರು: 2024ಕ್ಕೆ ಮುಂಜೂರಾದ ಸಾರ್ವತ್ರಿಕ ರಜೆಗಳ ಪಟ್ಟಿಯನ್ನು ಕರ್ನಾಟಕ ಸರ್ಕಾರವು ಬಿಡುಗಡೆ ಮಾಡಿದೆ. ಎಲ್ಲಾ ಎರಡನೇ ಶನಿವಾರ, ನಾಲ್ಕನೇ ಶನಿವಾರ ಮತ್ತು ಭಾನುವಾರಗಳು ಸೇರಿದಂತೆ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಹೀಗಿದೆ. ಜನವರಿ 15,...
- Advertisement -
error: Content is protected !!