Saturday, December 2, 2023

ರಾಜ್ಯ ಸರ್ಕಾರದ ವಿರುದ್ಧ ಘರ್ಜಿಸುತ್ತಿರುವ ಕುಮಾರಸ್ವಾಮಿ, ಮೌನಕ್ಕೆ ಶರಣಾದ ಕಾಂಗ್ರೆಸ್ ನಾಯಕರು

Follow Us

ನವದೆಹಲಿ:  ರಾಜ್ಯ ವಿಧಾನಸಭೆಗೆ ನಡೆದ ಉಪ ಚುನಾವಣಾ ಫಲಿತಾಂಶ ಪ್ರಕಟಗೊಂಡ ಬಳಿಕ ಜೆಡಿಎಸ್ ಪಕ್ಷದಲ್ಲಿ ಅದರಲ್ಲೂ ಮುಖ್ಯವಾಗಿ ಕುಮಾರ ಸ್ವಾಮಿ ಅವರಲ್ಲಿ ಬಹಳ ಬದಲಾವಣೆ ಕಾಣಿಸಿಕೊಂಡಿದೆ. ಅಲ್ಲಿಯ ತನಕ ರಾಜ್ಯ ಸರ್ಕಾರವನ್ನು ಟೀಕಿಸುವ ಸಂದರ್ಭದಲ್ಲಿ ಒಂದು ಲಕ್ಷ್ಮಣ ರೇಖೆಯನ್ನು ತಮ್ಮಗೆ ತಾವೇ ಹಾಕಿಕೊಂಡಿದ್ದರು. ಉಪ ಚುನಾವಣೆಯ ಬಳಿಕ ಚಿತ್ರಣ ಬದಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರ್ಕಾರ ಸದ್ಯಕ್ಕೆ ಸುಭದ್ರವಾಗಿದೆ. ಯಾರ ಬಾಹ್ಯ ಬೆಂಬಲದ ಅಗತ್ಯ ಕೂಡ ಇಲ್ಲ. ಬದಲಾದ ರಾಜಕೀಯ ಚಿತ್ರಣದಿಂದಾಗಿ  ಕುಮಾರಸ್ವಾಮಿ ಒದಗಿ ಬಂದ ಎಲ್ಲ ಅವಕಾಶಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಮಂಗಳೂರು ಗಲಭೆಯಾಗಿರ ಬಹುದು , ಬೆಂಗಳೂರು ಪ್ರತಿಭಟನೆಯಾಗಿರಬಹುದು. ಕುಮಾರಸ್ವಾಮಿ ವಾಗ್ಬಾಣ ಬಿರುಸುಪಡೆದುಕೊಂಡಿದೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ತೋರಿಕೆಯ ವಿರೋಧಕ್ಕೆ ಮಾತ್ರ ತಮ್ಮನ್ನು ಸೀಮಿತಗೊಳಿಸುತ್ತಿದ್ದಾರೆಯೇ ಎಂಬ  ಸಂಶಯ ಕೂಡ ತಲೆದೋರಿದೆ. ಕುಮಾರಸ್ವಾಮಿ ಯಾವುದನ್ನು ಮಾತನಾಡಿದರೂ ಅದರ ಹಿಂದೆ ರಾಜಕೀಯ ಲೆಕ್ಕಚಾರವಂತೂ ಇದ್ದೇ ಇರುತ್ತೆ. ಯಾಕೆಂದರೆ ಅವರು ದೇವೇಗೌಡರ  ರಾಜಕೀಯ ಗರಡಿಯಲ್ಲಿ ಪಳಗಿರುವ ರಾಜಕೀಯ ನಾಯಕ.

ಮತ್ತಷ್ಟು ಸುದ್ದಿಗಳು

vertical

Latest News

ನೀವು ಭಯಗೊಂಡಾಗ ದೇಹದಲ್ಲಿ ಏನಾಗುತ್ತದೆ ಗೊತ್ತಾ?

ಭಯವು ಸಾಮಾನ್ಯ ಭಾವನೆಯಾಗಿದೆ. ಪ್ರತಿಯೊಬ್ಬರೂ ಒಂದಲ್ಲ ಒಂದು ಹಂತದಲ್ಲಿ ಹೆದರುತ್ತಾರೆ. ಆದರೆ ಕೆಲವರು ಸಣ್ಣ ವಿಷಯಗಳಿಗೂ ತುಂಬಾ ಹೆದರುತ್ತಾರೆ. ಅವರು ಯಾಕೆ ಹೆದರುತ್ತಾರೆ ಎಂದು ಅವರಿಗೆ ತಿಳಿದಿಲ್ಲ. ಕೆಲವರು ಹಾರರ್ ಸಿನಿಮಾಗಳನ್ನು...

ಹೂವು ಬಿಡಿಸಲು ಹೋಗಿದ್ದಾಗ ವಿದ್ಯುತ್ ತಂತಿ ತುಳಿದು ಮಹಿಳೆ ಸಾವು

newsics.com ದಾವಣಗೆರೆ: ಪಂಪ್​ಸೆಟ್​​ಗೆ ಅಳವಡಿಸಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ  ಬಸವರಾಜಪುರದಲ್ಲಿ ನಡೆದಿದೆ. ಅಲಿಬಾಯಿ(62) ಮೃತ ರ್ದುದೈವಿ. ಹೂವು ಬಿಡಿಸಲು ಹೋಗಿದ್ದಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಬಸವಪಟ್ಟಣ...

ಜೈ ಶ್ರೀರಾಮ್‌ ಹೇಳುವಂತೆ ಗಡ್ಡಕ್ಕೆ ಬೆಂಕಿ ಹಚ್ಚಿ ವೃದ್ಧನ ಮೇಲೆ ಹಲ್ಲೆ

newsics.com ಕೊಪ್ಪಳ :  65 ವರ್ಷದ ಅಂಧ ಮುಸ್ಲಿಂ ವೃದ್ಧನಿಗೆ ಇಬ್ಬರು ಅನಾಮಿಕ ವ್ಯಕ್ತಿಗಳು ಗಂಗಾವತಿ ಟೌನ್‌ನಲ್ಲಿ ಕಿರುಕುಳ ನೀಡಿದ ಘಟನೆ ನಡೆದಿದೆ. ಗಂಗಾವತಿಯಲ್ಲಿ ಒಂದು ಕಪ್‌ ಚಹಾ ಕುಡಿದು ಆಟೋರಿಕ್ಷಾಕ್ಕೆ ಕಾಯುತ್ತಿರುವಾಗ ಬೈಕ್‌ನಲ್ಲಿ ಇಬ್ಬರು...
- Advertisement -
error: Content is protected !!