newsics.com
ಮಡಿಕೇರಿ: ತಾಲೂಕಿನ ಮದೆನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರ್ತೋಜಿಯಲ್ಲಿ ಭೂಮಿ ಮತ್ತೆ ಬಾಯ್ದೆರೆದಿದೆ. ಇದರಿಂದಾಗಿ ಐದು ಕುಟುಂಬಗಳು ಅಪಾಯ ಎದುರಿಸುತ್ತಿವೆ.
ಭೂಮಿ ಬಾಯ್ದೆರೆದಿರುವುದರಿಂದ ಖಾದರ್ ಮತ್ತು ರಾಜಣ್ಣ ಇಬ್ಬರ ಮನೆಗಳ ಗೋಡೆಗಳು ಸಂಪೂರ್ಣ ಬಿರುಕುಬಿಟ್ಟಿವೆ.
ಖಾದರ್ ಮತ್ತು ರಾಜಣ್ಣ ಅವರ ಎರಡು ಕುಟುಂಬ ಸದಸ್ಯರು ಮನೆ ಖಾಲಿ ಮಾಡಿ ಬೇರೆಡೆಗೆ ತೆರಳಿದ್ದಾರೆ. ಮಂಗಳವಾರ ಸಂಜೆಯೇ ಭೂಮಿ ಬಾಯ್ದೆರೆದಿರುವ ವಿಷಯವನ್ನು ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೂ ಯಾವುದೇ ಅಧಿಕಾರಿಗಳಾಗಲಿ ಅಥವಾ ಜನಪ್ರತಿನಿಧಿಗಳಾಗಲಿ ಇತ್ತ ಸುಳಿದಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ತೋಜಿ ಗ್ರಾಮದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 275 ತಡೆಗೋಡೆ ಕಾಮಗಾರಿಗೆ ಕರ್ತೋಜಿ ಬೆಟ್ಟದಿಂದ ಸಾವಿರಾರು ಲೋಡ್ ಮಣ್ಣು ತೆಗೆದದ್ದೇ ಭೂಮಿ ಮತ್ತೆ ಬಾಯ್ದೆರೆಯಲು ಕಾರಣ ಎನ್ನಲಾಗಿದೆ.
2022ರ ಅಕ್ಟೋಬರ್ ವೇಳೆಗೆ ಬೆಂಗಳೂರು-ಮೈಸೂರು ನಡುವಿನ ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಮುಕ್ತ
ಹಿಮಾಚಲ ಪ್ರದೇಶದಲ್ಲಿ ಭೂಕುಸಿತ: 11 ಮಂದಿ ಸಾವು, ಮುಂದುವರೆದ ರಕ್ಷಣಾ ಕಾರ್ಯ