ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿದ್ದ ದುಬೈನಿಂದ ಆಗಮಿಸಿದ್ದ ಸ್ಪೈಸ್ ಜೆಟ್ ವಿಮಾನ ಕರಾವಳಿಯಲ್ಲಿನ ಹವಾಮಾನ ವೈಪರೀತ್ಯದಿಂದಾಗಿ ಶನಿವಾರ ಬೆಂಗಳೂರಿನಲ್ಲಿ ಇಳಿದಿದೆ.
ದಮ್ಮಾಮ್ ಮತ್ತು ದುಬೈನಿಂದ ಬಂದಿದ್ದ ಏರ್ ಇಂಡಿಯಾ ವಿಮಾನ ಬೆಳಗ್ಗೆ 4:30ಕ್ಕೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದ್ದು, ಆದರೆ 8:30ಕ್ಕೆ ಬಂದಿದ್ದ ಮತ್ತೊಂದು ವಿಮಾನ ನೇರವಾಗಿ ಬೆಂಗಳೂರಿನಲ್ಲಿ ಇಳಿದಿದೆ.
ಬೆಂಗಳೂರಿನಿಂದ ಬೆಳಗ್ಗೆ 8 ಗಂಟೆಗೆ ಹೊರಟಿದ್ದ ಸ್ಪೈಸ್ ಜೆಟ್, ಇಂಡಿಗೋ ವಿಮಾನಗಳು ಮಂಗಳೂರಿನಲ್ಲಿ ಮಬ್ಬು ಕವಿದ ವಾತಾವರಣವಿದ್ದರಿಂದ ಮರಳಿ ಬೆಂಗಳೂರಿಗೆ ವಾಪಸ್ಸಾಗಿವೆ ಎಂದು ತಿಳಿದುಬಂದಿದೆ. ಹೈದರಬಾದ್ ನಿಂದ ಬಂದಿದ್ದ ಮತ್ತೊಂದು ವಿಮಾನಕ್ಕೂ ಲ್ಯಾಂಡ್ ಆಗಲು ಅನುಮತಿ ದೊರೆತಿಲ್ಲ.
ಮಂಗಳೂರಲ್ಲಿ ಹವಾಮಾನ ವೈಪರೀತ್ಯ; ವಿಮಾನ ಸಂಚಾರದಲ್ಲಿ ವ್ಯತ್ಯಯ
Follow Us