Wednesday, November 29, 2023

ಮೂವರು ಅರ್ಚಕರ ಕೊಲೆ ಪ್ರಕರಣ; ಗುಂಡು ಹಾರಿಸಿ 3 ಆರೋಪಿಗಳ ಬಂಧನ

Follow Us

newsics.com
ಮಂಡ್ಯ: ಜಿಲ್ಲೆಯ ಗುತ್ತಲಿನ ಅರಕೇಶ್ವರಸ್ವಾಮಿ ದೇಗುಲದ ಮೂವರು ಅರ್ಚಕರನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಪೊಲೀಸರು ಗುಂಡು ಹಾರಿಸಿ ಸೋಮವಾರ ಮುಂಜಾನೆ ಬಂಧಿಸಿದ್ದಾರೆ.
ಮದ್ದೂರು ತಾಲ್ಲೂಕು ಸಾದೊಳಲು ಗೇಟ್‌ನ ಬಸ್ ತಂಗುದಾಣದಲ್ಲಿ ಮೂವರು ಆರೋಪಿಗಳು ಮಲಗಿದ್ದರು. ಸೋಮವಾರ ನಸುಕಿನಲ್ಲಿ ಆರೋಪಿಗಳನ್ನು ಸುತ್ತುವರಿದ ಪೊಲೀಸರು ಶರಣಾಗಲು ಸೂಚನೆ ನೀಡಿದರು. ಈ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದರು. ಆಗ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ಬಂಧಿತ ಆರೋಪಿಗಳಿಗೆ ಮದ್ದೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಂಧಿತರನ್ನು ಆಂಧ್ರಮೂಲದ ವಿಜಿ, ಮದ್ದೂರಿನ ಗಾಂಧಿ ಮತ್ತು ಮಂಜು ಎಂದು ಗುರುತಿಸಲಾಗಿದೆ. ಅರಕೇಶ್ವರಸ್ವಾಮಿ ದೇವಸ್ಥಾನದಲ್ಲಿ ಮಲಗಿದ್ದ ಮೂವರು ಅರ್ಚಕರನ್ನು ದುಷ್ಕರ್ಮಿಗಳು ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿದ್ದರು.
ಪಿಎಸ್ಐ ಶರತ್ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದ್ದಾರೆ. ಕೊಲೆ ಆರೋಪಿಗಳು ನಡೆಸಿದ ಹಲ್ಲೆಯಿಂದ ಓರ್ವ ಸಬ್ ಇನ್‌ಸ್ಪೆಕ್ಟರ್, ಇಬ್ಬರು ಕಾನ್‌ಸ್ಟೆಬಲ್‌’ಗಳು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಆರೋಪಿಗಳು ತೊಪ್ಪನಹಳ್ಳಿ, ಸಾದೊಳಲು, ಹುಲಿಗೆರೆಪುರದ ನಿರ್ಜನ ಪ್ರದೇಶದಲ್ಲಿ ಶೆಡ್ ಹಾಕಿಕೊಂಡು ರಾತ್ರಿ ಕಳೆಯುತ್ತಿದ್ದರು.
ಆರೋಪಿಗಳ ಸೆರೆ ಕಾರ್ಯಾಚರಣೆ ವೇಳೆ ಮೊದಲು ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಸಲಾಯಿತು. ಆದರೆ ಆರೋಪಿಗಳು ಪೊಲೀಸರ ಮೇಲೆ ದಾಳಿಗೆ ಮುಂದಾದಾಗ, ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಯಿತು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ತಿಳಿಸಿದ್ದಾರೆ.

ಮೂರು ಲಕ್ಷ ಗಾಂಜಾ ಗಿಡಗಳ ನಾಶ

ದೇಶದೆಲ್ಲೆಡೆ‌ ಕಂಗನಾ ಹವಾ; ಝಾನ್ಸಿ ರಾಣಿ ಸಪೋರ್ಟ್’ಗೆ ಬಂತು ಸೀರೆ…!

ದೆಹಲಿ ಸಿಎಎ ಗಲಭೆ; ಉಮರ್ ಖಾಲಿದ್ ಬಂಧನ

ಸ್ವಪ್ನಾ ಸುರೇಶ್ ಗೆ ಎದೆನೋವು, ಆಸ್ಪತ್ರೆಗೆ ದಾಖಲು

ಮತ್ತಷ್ಟು ಸುದ್ದಿಗಳು

vertical

Latest News

ಮೈಸೂರು ವಿವಿ ಪ್ರೊಫೆಸರ್ ವಿರುದ್ಧ ಪಿಎಚ್ಡಿ ವಿದ್ಯಾರ್ಥಿನಿಯಿಂದ ಪೊಲೀಸರಿಗೆ ದೂರು: FIR ದಾಖಲು

newsics.com ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಪ್ರೊಫೆಸರ್ ಶುಭ ಗೋಪಾಲ್ ವಿರುದ್ಧ ಪಿಎಚ್.ಡಿ. ವಿದ್ಯಾರ್ಥಿನಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಮೈಸೂರು ವಿವಿಯ ಮೈಕ್ರೋ ಬಯಾಲಜಿ ವಿಭಾಗದ ಪ್ರೊ.ಶುಭ ಗೋಪಾಲ್ ವಿರುದ್ಧ...

ಮುಂದಿನ ವರ್ಷದಿಂದ 500 ರಿಂದ 600 ಕರ್ನಾಟಕ ಪಬ್ಲಿಕ್ ಸ್ಕೂಲ್ ಆರಂಭ: ಮಧು ಬಂಗಾರಪ್ಪ

newsics.com ಹಾಸನ: ಮುಂದಿನ ಶೈಕ್ಷಣಿಕ ವರ್ಷದಲ್ಲಿ 500 ರಿಂದ 600 ಪಬ್ಲಿಕ್ ಶಾಲೆಗಳನ್ನು ಸ್ಥಾಪನೆ ಮಾಡಲಾಗುವುದು. ಚುನಾವಣೆ ಸಂದರ್ಭದಲ್ಲಿ ನೀಡಿದ 5 ಗ್ಯಾರಂಟಿಗಳನ್ನು ಈಡೇರಿಸಿದ್ದು, ಶಾಲೆಗಳ ಅಭಿವೃದ್ಧಿಗೂ ಹಾಗೂ ಗ್ಯಾರಂಟಿಗೂ ಯಾವ ಸಂಬಂಧವಿಲ್ಲ ಎಂದು...

2024ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಬಿಡುಗಡೆ

newsics.com ಬೆಂಗಳೂರು: 2024ಕ್ಕೆ ಮುಂಜೂರಾದ ಸಾರ್ವತ್ರಿಕ ರಜೆಗಳ ಪಟ್ಟಿಯನ್ನು ಕರ್ನಾಟಕ ಸರ್ಕಾರವು ಬಿಡುಗಡೆ ಮಾಡಿದೆ. ಎಲ್ಲಾ ಎರಡನೇ ಶನಿವಾರ, ನಾಲ್ಕನೇ ಶನಿವಾರ ಮತ್ತು ಭಾನುವಾರಗಳು ಸೇರಿದಂತೆ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಹೀಗಿದೆ. ಜನವರಿ 15,...
- Advertisement -
error: Content is protected !!