Monday, October 2, 2023

ಇಟಲಿಯಲ್ಲಿ ಮೈಸೂರಿನ ಫುಟ್ ಬಾಲ್ ಆಟಗಾರನ ದಾರುಣ ಅಂತ್ಯ

Follow Us

newsics.com

ಮೈಸೂರು:  ಫುಟ್‌ಬಾಲ್ ಆಟಗಾರ ಯಶವಂತ ಕುಮಾರ್(23) ದೂರದ ಇಟಲಿಯ ರೋಮ್‌ನಲ್ಲಿ  ದಾರುಣ ಅಂತ್ಯ ಕಂಡಿದ್ದಾರೆ. ಯಶವಂತ್ ಕುಮಾರ್ ಮೈಸೂರಿನ ಎನ್.ಆರ್. ಮೊಹಲ್ಲಾದ ಎನ್.ಕುಮಾರ್ ಹಾಗೂ ರೂಪಾ ದಂಪತಿಯ ಪುತ್ರ . ವಿದ್ಯಾವರ್ಧಕ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಪಡೆದಿದ್ದರು. ಸೀರೀ ಬಿ ಫುಟ್​ಬಾಲ್ ಲೀಗ್​ನಲ್ಲಿ ಭಾಗವಹಿಸಲು 4 ತಿಂಗಳ ಹಿಂದೆ ಕ್ಯಾಲ್ಸಿಯೊ ಸಿ 5 ತಂಡಗಳೊಂದಿಗೆ  ಯಶವಂತ ಕುಮಾರ್​ ರೋಮ್​ಗೆ ತೆರಳಿದ್ದರು.

ಆ.6 ರಂದು ಯಶವಂತ ಕುಮಾರ್​ ಅವರು ರೋಮ್​ನ ಜಲಪಾತವೊಂದರಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎಂದು ರೋಮ್​ನ ಸ್ಥಳೀಯ ಮಾಧ್ಯಮ ವರದಿ ಮಾಡಿತ್ತು. ಜಲಪಾತದಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ  ಪತ್ತೆಯಾಗಿದೆ. ಇದೀಗ ಅಲ್ಲಿಯೇ ಅಂತ್ಯಕ್ರಿಯೆ  ನೆರವೇರಿಸಲಾಗಿದೆ.

 

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನದ ತುರ್ತು ಬಾಗಿಲು ತೆರೆಯಲೆತ್ನಿಸಿದ ಪ್ರಯಾಣಿಕ: ತುರ್ತು ಭೂ ಸ್ಪರ್ಶ, ಬಂಧನ

newsics.com ದೇವನಹಳ್ಳಿ: ಟೇಕ್ಆಫ್ ಆಗುತ್ತಿದ್ದ ವಿಮಾನದ ಎಮರ್ಜೆನ್ಸಿ ಡೋರ್ ತೆರೆಯಲು ಯತ್ನಿಸಿದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಸ್ವಪ್ನೋಲ್...

ಸಾಮೂಹಿಕ ಪ್ರಾರ್ಥನೆ ವೇಳೆ ಚರ್ಚ್ ಛಾವಣಿ ಕುಸಿತ: 9 ಮಂದಿ ಸಾವು, 50 ಜನರಿಗೆ ಗಾಯ

newsics.com ಸಿಯುಡಾಡ್ ಮಡೆರೊ(ಮೆಕ್ಸಿಕೋ ಸಿಟಿ): ಭಾನುವಾರದ ಸಾಮೂಹಿಕ ಪ್ರಾರ್ಥನೆಯ ಸಮಯದಲ್ಲಿ ಚರ್ಚ್‌ನ ಛಾವಣಿ ಕುಸಿದು 9 ಜನರು ಸಾವನ್ನಪ್ಪಿದ್ದು, ಸುಮಾರು 50 ಜನರು ಗಾಯಗೊಂಡಿದ್ದಾರೆ. ಸುಮಾರು 30 ಮಂದಿ ಅವಶೇಷಗಳಡಿ ಸಿಕ್ಕಿಹಾಕಿಕೊಂಡಿದ್ದಾರೆ. ಉತ್ತರ ಮೆಕ್ಸಿಕೋದಲ್ಲಿ...

ವಿಮಾನದಲ್ಲಿ ಉಸಿರಾಟ ಸ್ಥಗಿತವಾಗಿದ್ದ ಮಗುವಿಗೆ ಮರುಜೀವ ನೀಡಿದ ವೈದ್ಯ, ಐಎಎಸ್ ಅಧಿಕಾರಿ!

newsics.com ನವದೆಹಲಿ: ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಗುವಿಗೆ ವಿಮಾನದಲ್ಲಿ ಪ್ರಯಾಣಿಸುವ ವೇಳೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು, ವಿಮಾನದಲ್ಲಿದ್ದ ಐಎಎಸ್ ಅಧಿಕಾರಿ ಹಾಗೂ ವೈದ್ಯರೊಬ್ಬರು ಚಿಕಿತ್ಸೆ ನೀಡಿ ಮರುಜೀವ ನೀಡಿದ ಘಟನೆ ರಾಂಚಿ-ದೆಹಲಿ...
- Advertisement -
error: Content is protected !!