Sunday, October 1, 2023

ಸಾಹಿತಿ ಎನ್ ಪಿ ಭಟ್ ನಿಧನ

Follow Us

ಧಾರವಾಡ: ಹಿರಿಯ ಸಾಹಿತಿ, ನಿವೃತ್ತ ಐಆರ್ ಎಸ್ ಅಧಿಕಾರಿ ಎನ್.ಪಿ. ಭಟ್‌ (88) ಭಾನುವಾರ ಇಲ್ಲಿನ ‌ನಾರಾಯಣಪುರದಲ್ಲಿರುವ ನಿವಾಸದಲ್ಲಿ ನಿಧನರಾದರು. ಹೊಸಯಲ್ಲಾಪುರ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿತು.
ಭಟ್ ಅವರಿಗೆ ಪತ್ನಿ ಡಾ‌.ಯಶೋಧಾ (ಡಾ.ವಿ.ಕೃ.ಗೋಕಾಕ್ ಅವರ ಮಗಳು), ಸೊಸೆ ಸುಮಂಗಲಾ ಭಟ್ ಇದ್ದಾರೆ.
ಅತಿ ಕ್ರಿಯಾಶೀಲರಾಗಿದ್ದ ಭಟ್ ಅವರು ‘ಅವನಿ ರಸಿಕರ ರಂಗ’ ಎಂಬ ಸಂಸ್ಥೆ ಸ್ಥಾಪಿಸಿ ದಶಕಕ್ಕೂ ಅಧಿಕ ಕಾಲ ಸಾಹಿತ್ಯ, ಸಾಂಸ್ಕೃತಿಕ, ಸಂಗೀತ ಸಮೃದ್ಧಗೊಳಿಸಲು ಶ್ರಮಿಸಿದ್ದರು. ರಂಜನ ಭಟ್ಟ, ನಾರಂಗಿ ಭಟ್ಟ ಎಂಬ ಕಾವ್ಯನಾಮದಿಂದ‌ ಹಲವು ‌ಕೃತಿಗಳನ್ನು ರಚಿಸಿದ್ದಾರೆ. ಕಥಾಸಂಕಲನ, ಪ್ರವಾಸ ಕಥನ ಮತ್ತಿತರ ಕೃತಿಗಳನ್ನು ರಚಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಶಿರಾಕಿಯಲ್ಕಿ ಜನಿಸಿದ ಭಟ್ ಅವರು ಉತ್ತಮ ಅರ್ಥಶಾಸ್ತ್ರಜ್ಞರು. ಅಮೆರಿಕದ ‌ಕ್ಯಾಲಿಫೋರ್ನಿಯಾದಲ್ಲಿ ಸ್ನಾತಕೋತ್ತರ ಪದವಿ ಪಡೆದು, 1955ರಲ್ಲಿ ಐಆರ್ ಎಸ್ ಅಧಿಕಾರಿಯಾದರು. ಆದಾಯ ತೆರಿಗೆ ಆಯುಕ್ತರಾಗಿ ನಿವೃತ್ತರಾದ ಅವರು 1999ರಿಂದ ಧಾರವಾಡದಲ್ಲಿ‌ ನೆಲೆಸಿದ್ದರು. ಗ್ರಾಹಕರ ವೇದಿಕೆ ಅಧ್ಯಕ್ಷರಾಗಿದ್ದ ಅವರು ಗ್ರಾಹಕ ಹಕ್ಜುಗಳ ಬಗ್ಗೆ ಜಾಗೃತಿ ಮೂಡಿಸಲು ಯತ್ನಿಸಿದ್ದರು.

ಮತ್ತಷ್ಟು ಸುದ್ದಿಗಳು

vertical

Latest News

ಹಳ್ಳಕ್ಕೆ ಉರುಳಿದ ಬಸ್: 8‌ ಮಂದಿ‌ ಸಾವು, 25 ಪ್ರಯಾಣಿಕರಿಗೆ ಗಾಯ

newsics.com ಚೆನ್ನೈ: ತಮಿಳುನಾಡಿನ ನೀಲಗಿರಿ ಬೆಟ್ಟದಲ್ಲಿ ಶನಿವಾರ ಪ್ರವಾಸಿ ಬಸ್ ಹಳ್ಳಕ್ಕೆ ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು...

ಅಕ್ಟೋಬರ್‌ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ತಾಪಮಾನ ಸಾಧ್ಯತೆ!

newsics.com ನವದೆಹಲಿ: ದೇಶದ ಬಹುತೇಕ ಭಾಗಗಳಲ್ಲಿ ಅಕ್ಟೋಬರ್‌ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನ ಮತ್ತು ಸಾಮಾನ್ಯಕ್ಕಿಂತ ಹೆಚ್ಚು ಕನಿಷ್ಠ ತಾಪಮಾನ ದಾಖಲಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶನಿವಾರ ತಿಳಿಸಿದೆ. ತಮಿಳುನಾಡು, ಕರಾವಳಿ...

ಕರ್ನಾಟಕದಲ್ಲಿ ಈ ಬಾರಿ ಶೇ. 25ರಷ್ಟು ಮಳೆಯ ಕೊರತೆ

newsics.com ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಅವಧಿಯಲ್ಲಿ ಈ ವರ್ಷ ಶೇ 25ರಷ್ಟು ಮಳೆ ಕೊರತೆಯಾಗಿದೆ. ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗಿನ ನಾಲ್ಕು ತಿಂಗಳಲ್ಲಿ ಒಟ್ಟು 845 ಮಿ.ಮೀ ಮಳೆ ಸುರಿಯಬೇಕಿತ್ತು. ಆದರೆ, 635...
- Advertisement -
error: Content is protected !!