Saturday, December 2, 2023

ಜ.5 ರಂದು ಮಂಗಳೂರಲ್ಲಿ ಮೋದಿ ಬದುಕಿನ ಯಕ್ಷಗಾನ ‘ನರೇಂದ್ರ ವಿಜಯ’

Follow Us

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಜೀವನಗಾಥೆ ಯಕ್ಷಗಾನ ರೂಪವನ್ನೂ ಪಡೆದುಕೊಂಡಿದೆ. ಮೋದಿ ಅವರ ಜೀವನ ಚರಿತ್ರೆಯ ಕಾಲ್ಪನಿಕ ಕಥಾಪ್ರಸಂಗ ‘ನರೇಂದ್ರ ವಿಜಯ’ ಜ.5 ರ ಸಂಜೆ 6.30 ಕ್ಕೆ ಮಂಗಳೂರಿನ ಟಿ.ವಿ ರಮಣ ಪೈ ಸಭಾಂಗಣದಲ್ಲಿ ಪ್ರದರ್ಶನಗೊಳ್ಳಲಿದೆ.
‘ನರೇಂದ್ರ ವಿಜಯ’ ಯಕ್ಷಗಾನ ಕಥಾಪ್ರಸಂಗವನ್ನು ತೀರ್ಥಹಳ್ಳಿಯ ಜ್ಯೋತಿ ಶಾಸ್ತ್ರಿ ಬರೆದಿದ್ದಾರೆ. ನರೇಂದ್ರ ಮೋದಿಯವರ ಬಾಲ್ಯ, ಜೀವನಶೈಲಿ, ರಾಜಕೀಯ ಹಿನ್ನೆಲೆ ಸೇರಿದಂತೆ ಅವರ ಬದುಕಿನ ಹಲವು ಘಟ್ಟಗಳು ಪ್ರಸ್ತಾಪವಾಗಿವೆ.
ಜ್ಯೋತಿ ಶಾಸ್ತ್ರಿ, ವರದ ಐತಾಳ್, ಮಯೂರಿ ಉಪಾಧ್ಯಾಯ, ನಿರ್ಮಲಾ ಗೋಳಿಕೊಪ್ಪ, ಸವಿತಾ ಭಟ್, ಶಾರ್ವಣಿ ಭಟ್, ನಳಿನಿ ರಾವ್, ದಿಶಾ ಜೋಯಿಸ್, ಮಲ್ಲಿಕಾ ರಾಘವೇಂದ್ರ ಭಟ್ ಮೊದಲಾದವರು ಅಭಿನಯಿಸಲಿದ್ದಾರೆ. ಭಾಗವತರಾಗಿ ನಾಗೇಶ ಕುಲಾಲ್ ನಾಗರಕೊಡಿಗೆ, ಎನ್. ಜಿ.ಹೆಗ್ಡೆ ಮದ್ದಳೆ, ಕೃಷ್ಣಮೂರ್ತಿ ಚೆಂಡೆ ನುಡಿಸಲಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ನೀವು ಭಯಗೊಂಡಾಗ ದೇಹದಲ್ಲಿ ಏನಾಗುತ್ತದೆ ಗೊತ್ತಾ?

ಭಯವು ಸಾಮಾನ್ಯ ಭಾವನೆಯಾಗಿದೆ. ಪ್ರತಿಯೊಬ್ಬರೂ ಒಂದಲ್ಲ ಒಂದು ಹಂತದಲ್ಲಿ ಹೆದರುತ್ತಾರೆ. ಆದರೆ ಕೆಲವರು ಸಣ್ಣ ವಿಷಯಗಳಿಗೂ ತುಂಬಾ ಹೆದರುತ್ತಾರೆ. ಅವರು ಯಾಕೆ ಹೆದರುತ್ತಾರೆ ಎಂದು ಅವರಿಗೆ ತಿಳಿದಿಲ್ಲ. ಕೆಲವರು ಹಾರರ್ ಸಿನಿಮಾಗಳನ್ನು...

ಹೂವು ಬಿಡಿಸಲು ಹೋಗಿದ್ದಾಗ ವಿದ್ಯುತ್ ತಂತಿ ತುಳಿದು ಮಹಿಳೆ ಸಾವು

newsics.com ದಾವಣಗೆರೆ: ಪಂಪ್​ಸೆಟ್​​ಗೆ ಅಳವಡಿಸಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ  ಬಸವರಾಜಪುರದಲ್ಲಿ ನಡೆದಿದೆ. ಅಲಿಬಾಯಿ(62) ಮೃತ ರ್ದುದೈವಿ. ಹೂವು ಬಿಡಿಸಲು ಹೋಗಿದ್ದಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಬಸವಪಟ್ಟಣ...

ಜೈ ಶ್ರೀರಾಮ್‌ ಹೇಳುವಂತೆ ಗಡ್ಡಕ್ಕೆ ಬೆಂಕಿ ಹಚ್ಚಿ ವೃದ್ಧನ ಮೇಲೆ ಹಲ್ಲೆ

newsics.com ಕೊಪ್ಪಳ :  65 ವರ್ಷದ ಅಂಧ ಮುಸ್ಲಿಂ ವೃದ್ಧನಿಗೆ ಇಬ್ಬರು ಅನಾಮಿಕ ವ್ಯಕ್ತಿಗಳು ಗಂಗಾವತಿ ಟೌನ್‌ನಲ್ಲಿ ಕಿರುಕುಳ ನೀಡಿದ ಘಟನೆ ನಡೆದಿದೆ. ಗಂಗಾವತಿಯಲ್ಲಿ ಒಂದು ಕಪ್‌ ಚಹಾ ಕುಡಿದು ಆಟೋರಿಕ್ಷಾಕ್ಕೆ ಕಾಯುತ್ತಿರುವಾಗ ಬೈಕ್‌ನಲ್ಲಿ ಇಬ್ಬರು...
- Advertisement -
error: Content is protected !!