Tuesday, March 28, 2023

ಜ.5 ರಂದು ಮಂಗಳೂರಲ್ಲಿ ಮೋದಿ ಬದುಕಿನ ಯಕ್ಷಗಾನ ‘ನರೇಂದ್ರ ವಿಜಯ’

Follow Us

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಜೀವನಗಾಥೆ ಯಕ್ಷಗಾನ ರೂಪವನ್ನೂ ಪಡೆದುಕೊಂಡಿದೆ. ಮೋದಿ ಅವರ ಜೀವನ ಚರಿತ್ರೆಯ ಕಾಲ್ಪನಿಕ ಕಥಾಪ್ರಸಂಗ ‘ನರೇಂದ್ರ ವಿಜಯ’ ಜ.5 ರ ಸಂಜೆ 6.30 ಕ್ಕೆ ಮಂಗಳೂರಿನ ಟಿ.ವಿ ರಮಣ ಪೈ ಸಭಾಂಗಣದಲ್ಲಿ ಪ್ರದರ್ಶನಗೊಳ್ಳಲಿದೆ.
‘ನರೇಂದ್ರ ವಿಜಯ’ ಯಕ್ಷಗಾನ ಕಥಾಪ್ರಸಂಗವನ್ನು ತೀರ್ಥಹಳ್ಳಿಯ ಜ್ಯೋತಿ ಶಾಸ್ತ್ರಿ ಬರೆದಿದ್ದಾರೆ. ನರೇಂದ್ರ ಮೋದಿಯವರ ಬಾಲ್ಯ, ಜೀವನಶೈಲಿ, ರಾಜಕೀಯ ಹಿನ್ನೆಲೆ ಸೇರಿದಂತೆ ಅವರ ಬದುಕಿನ ಹಲವು ಘಟ್ಟಗಳು ಪ್ರಸ್ತಾಪವಾಗಿವೆ.
ಜ್ಯೋತಿ ಶಾಸ್ತ್ರಿ, ವರದ ಐತಾಳ್, ಮಯೂರಿ ಉಪಾಧ್ಯಾಯ, ನಿರ್ಮಲಾ ಗೋಳಿಕೊಪ್ಪ, ಸವಿತಾ ಭಟ್, ಶಾರ್ವಣಿ ಭಟ್, ನಳಿನಿ ರಾವ್, ದಿಶಾ ಜೋಯಿಸ್, ಮಲ್ಲಿಕಾ ರಾಘವೇಂದ್ರ ಭಟ್ ಮೊದಲಾದವರು ಅಭಿನಯಿಸಲಿದ್ದಾರೆ. ಭಾಗವತರಾಗಿ ನಾಗೇಶ ಕುಲಾಲ್ ನಾಗರಕೊಡಿಗೆ, ಎನ್. ಜಿ.ಹೆಗ್ಡೆ ಮದ್ದಳೆ, ಕೃಷ್ಣಮೂರ್ತಿ ಚೆಂಡೆ ನುಡಿಸಲಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್‌) ಬಡ್ಡಿ ದರ ಶೇ.8.15 ಕ್ಕೆ ಏರಿಕೆ

newscics.com ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಭವಿಷ್ಯ ನಿಧಿಯ ಮೇಲಿನ ಬಡ್ಡಿ ದರವನ್ನುಬ ಹೆಚ್ಚಿಸಲು ತೀರ್ಮಾನಿಸಿದೆ....

ವಾಯುಮಾಲಿನ್ಯದಿಂದ 1,220 ಜನರು ಸಾವು

newscics.com ಮುಂಬೈ: ಮುಂಬೈನಲ್ಲಿ 2016-2021 ರ ನಡುವೆ 1,220 ಜನರು ವಾಯುಮಾಲಿನ್ಯದಿಂದ ಸಾವನ್ನಪ್ಪಿದ್ದಾರೆ. ಅಂಕಿಅಂಶಗಳ ಪ್ರಕಾರ, ಮುಂಬೈನಲ್ಲಿ 2016 ಮತ್ತು 2021 ರ ನಡುವೆ 1,220...

ಭಾರತದ ಮೊದಲ ಗೀರ್ ತದ್ರೂಪಿ ತಳಿ ಆಕಳ ಕರು ಜನನ

newsics.com ನವದೆಹಲಿ: ಭಾರತದ ಮೊದಲ ತದ್ರೂಪಿ ಗಿರ್ ತಳಿಯ ಆಕಳ ಕರು ಹರಿಯಾಣದ ಕರ್ನಾಲ್‌ನಲ್ಲಿರುವ ರಾಷ್ಟ್ರೀಯ ಡೈರಿ ಸಂಶೋಧನಾ ಸಂಸ್ಥೆ (NDRI) ಯಲ್ಲಿ ಜನ್ಮ ಪಡೆದಿದೆ.ಈ...
- Advertisement -
error: Content is protected !!