Wednesday, May 31, 2023

ಹುಕ್ಕೇರಿಯಲ್ಲಿ ರಾಷ್ಟ್ರೀಯ ಜೈನ್ ವಿದ್ವತ್ ಸಮ್ಮೇಳನ ಆರಂಭ

Follow Us

ಬೆಳಗಾವಿ: ಮೂರು ದಿನಗಳ ರಾಷ್ಟ್ರೀಯ ಜೈನ್ ವಿದ್ವತ್ ಸಮ್ಮೇಳನ ಹುಕ್ಕೇರಿ ತಾಲೂಕಿನ ಯರನಾಳ ಗ್ರಾಮದಲ್ಲಿ ಶುಕ್ರವಾರ ಸಂಜೆ ಉದ್ಘಾಟನೆಗೊಂಡಿತು.
ವಸಂತ ನಿಲಜಗಿ ಸಭಾಮಂಟಪಕ್ಕೆ ಮಹಾವೀರ ನಿಲಜಗಿ ದಂಪತಿ ಪೂಜೆ ಸಲ್ಲಿಸುವ ಮೂಲಕ ಸಮ್ಮೇಳನಕ್ಕೆ ಚಾಲನೆ ನೀಡಿದರು.
ಆಚಾರ್ಯ ಶ್ರೀ ಶಾಂತಿಸಾಗರ ಮುನಿದೀಕ್ಷಾ ಶತಾಬ್ದಿ ವತಿಯಿಂದ ಡಿ.೩೦ರವರೆಗೆ ಈ ಸಮ್ಮೇಳನ ನಡೆಯಲಿದೆ.
ಆಚಾರ್ಯ ವರ್ಧಮಾನ ಸಾಗರ ಮಹಾರಾಜರು ಸಮಾರಂಭದ ಸಾನ್ನಿಧ್ಯ ವಹಿಸಿದ್ದರು. ಹೊಂಬುಜ ಜೈನ ಮಠದ ಜಗದ್ಗರು ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡಿದರು. ಜೈನ ಬಿಹಾರ ಅಧ್ಯಕ್ಷತೆ ವಹಿಸಿದ್ದರು. ಆಸಾಂ ಕೇಂದ್ರೀಯ ವಿವಿ ಕುಲಪತಿ ವಿನೋದ ಜೈನ್ ಹಾಗೂ ಬಳ್ಳಾರಿ ವಿವಿ ಕುಲಪತಿ ಸಿದ್ದು ಅಲಗೂರ ಉಪಸ್ಥಿತರಿದ್ದರು.
ಕರ್ನಾಟಕ, ಮಹಾರಾಷ್ಟ್ರ ರಾಜಸ್ಥಾನ, ಬಿಹಾರ, ಜಾರ್ಖಂಡ್ ರಾಜ್ಯಗಳಿಂದ 150 ಕ್ಕೂ ಹೆಚ್ಚು ಪ್ರತಿನಿಧಿಗಳು ಆಗಮಿಸಿದ್ದರು.

ಮತ್ತಷ್ಟು ಸುದ್ದಿಗಳು

vertical

Latest News

Weekend With Ramesh; ಸಾಧಕರ ಕುರ್ಚಿಯಲ್ಲಿ ಡಿಕೆ ಶಿವಕುಮಾರ್!

newsics.com ಬೆಂಗಳೂರು: ಖಾಸಗಿವಾಹಿನಿಯಲ್ಲಿ ವೀಕೆಂಡ್ ವಿತ್ ರಮೇಶ್ ಐದನೇ ಸೀಸನ್​ನ ಈ ವಾರದ ಅತಿಥಿಯಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಗಮಿಸಲಿದ್ದಾರೆ ಎನ್ನುವ ಗಾಳಿ ಸುದ್ದಿಯೊಂದು ಹಬ್ಬಿದೆ. ಭಾನುವಾರದ ಎಪಿಸೋಡ್...

ತರಬೇತಿ ವಿಮಾನ ತುರ್ತು ಭೂಸ್ಪರ್ಶ; ತಪ್ಪಿದ ಭಾರೀ ಅನಾಹುತ

newsics.com ಬೆಳಗಾವಿ: ತರಬೇತಿ ವಿಮಾನವೊಂದು ತಾಂತ್ರಿಕ ತೊಂದರೆಯಿಂದ  ತುರ್ತು ಭೂಸ್ಪರ್ಶ ಆಗಿದೆ. ಈ ಘಟನೆ ಬೆಳಗಾವಿ ತಾಲೂಕಿನ ಹೊನ್ನಿಹಾಳ ಹೊರವಲಯದಲ್ಲಿ ನಡೆದಿದೆ. ರೆಡ್‌ಬರ್ಡ್  ಸಂಸ್ಥೆಗೆ ಸೇರಿದ VT- RBF ತರಬೇತಿ ವಿಮಾನ ಇದಾಗಿದ್ದು, ಘಟನೆ ನಡೆದ...

ಆಪರೇಷನ್ ಪಠ್ಯ ಪುಸ್ತಕ; ಪಠ್ಯಗಳ ಪರಿಷ್ಕರಿಸ್ತೇವೆಂದ ಶಿಕ್ಷಣ ಸಚಿವ ಮಧು ಬಂಗಾರಪ್ಪ

newsics.com ಬೆಂಗಳೂರು:  ಪಠ್ಯ ಪುಸ್ತಕ  ಪರಿಷ್ಕರಣೆ ನಾವು ಮಾಡ್ತೀವಿ. ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿನಂತೆ ಪರಿಷ್ಕರಣೆ ಮಾಡ್ತೀವಿ. ಮಕ್ಕಳ ಮನಸ್ಸಿನಲ್ಲಿ ಕಲ್ಮಶ ತುಂಬುವ ಪಠ್ಯ ಕೈ ಬಿಡ್ತೀವಿ. ಈ ಬಗ್ಗೆ ಸಿಎಂ, ಡಿಸಿಎಂ ಜೊತೆ ಚರ್ಚಿಸಿ...
- Advertisement -
error: Content is protected !!