ಬೆಂಗಳೂರು: ಬುಧವಾರದಿಂದ (ಜುಲೈ 22) ಬೆಂಗಳೂರಿನಲ್ಲಿ ಲಾಕ್ಡೌನ್ ಇರುವುದಿಲ್ಲ.
ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ನಾಳೆ ಅಧಿಕೃತ ಆದೇಶ ಹೊರಬೀಳಲಿದೆ ಎಂದು ತಿಳಿಸಿದ್ದಾರೆ.
ಸಭೆ ನಂತರ ಮಾತನಾಡಿದ ಸುಧಾಕರ್ ಅವರು, ಬುಧವಾರ ಬೆಳಗ್ಗೆ ಲಾಕ್ಡೌನ್ ಮುಕ್ತಾಯವಾಗಲಿದೆ. ನಂತರ ಈ ಹಿಂದೆ ಇದ್ದ ರೀತಿಯಲ್ಲಿಯೂ ಕೊರೋನಾ ಮಾರ್ಗಸೂಚಿಯಂತೆ ಜನಜೀವನಕ್ಕೆ ಅವಕಾಶವಿರಲಿದೆ. ಭಾನುವಾರದ ಲಾಕ್ಡೌನ್ ಹಾಗೂ ರಾತ್ರಿ 8 ರಿಂದ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ಮುಂದುವರೆಯಲಿದೆ.
ಸೋಮವಾರ ನಡೆದ ಸಭೆಯಲ್ಲಿ ವಲಯವಾರು ಉಸ್ತುವಾರಿಗಳಿಂದ ಸಿಎಂ ವಿಸ್ತೃತ ಮಾಹಿತಿ ಪಡೆದುಕೊಂಡಿದ್ದಾರೆ. ಸದ್ಯದಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಲಯವಾರು ಪ್ರತ್ಯೇಕವಾಗಿ ಸಭೆ ನಡೆಸಲಿದ್ದಾರೆ ಎಂದು ತಿಳಿಸಿದರು.
ಎನ್ ಹೆಚ್ ಎಂ ಅಡಿ ಕೆಲಸ ಮಾಡುವ ವೈದ್ಯರು ಮತ್ತು ಸಿಬ್ಬಂದಿಗೆ 25 ಸಾವಿರ ಇದ್ದ ವೇತನವನ್ನು 45 ಸಾವಿರಕ್ಕೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರದಿಂದಲೇ ವೇತನ ನೀಡಲು ನಿರ್ಧರಿಸಲಾಗಿದೆ ಎಂದು ಸುಧಾಕರ್ ಮಾಹಿತಿ ನೀಡಿದರು.
ಜುಲೈ 22ರಿಂದ ಬೆಂಗಳೂರಿನಲ್ಲಿ ಲಾಕ್ಡೌನ್ ಇಲ್ಲ
Follow Us