Thursday, June 1, 2023

ಸಿಗದ ವ್ಹೀಲ್ ಚೇರ್; ವಿಮ್ಸ್ ಗೆ ಮಗಳನ್ನು ಹೊತ್ತೊಯ್ದ ತಂದೆ

Follow Us

ಬಳ್ಳಾರಿ: ಇಲ್ಲಿನ ವಿಮ್ಸ್ ಆಸ್ಪತ್ರೆಯಲ್ಲಿ ವ್ಹೀಲ್ ಚೇರ್ ನೀಡದ ಕಾರಣ ವ್ಯಕ್ತಿಯೊಬ್ಬರು ತನ್ನ ಮಗಳನ್ನು ತುರ್ತು ನಿಗಾ ಘಟಕದಿಂದ ಮತ್ತೊಂದು ಘಟಕಕ್ಕೆ ಹೆಗಲ ಮೇಲೆ ಹೊತ್ತೊಯ್ದ ಘಟನೆ ಗುರುವಾರ ನಡೆದಿದೆ.

ಸಿರುಗುಪ್ಪ ತಾಲೂಕಿನ ಶಾನವಾಸಪುರ ಗ್ರಾಮದ ಮಾಬಾಷಾ ಎಂಬುವರು ತಮ್ಮ ಮಗಳು ಶ್ರೀಂಥಾಜ್ ಗೆ ಅವರಿಗೆ ಚಿಕಿತ್ಸೆ
ಕೊಡಿಸುವ ಸಲುವಾಗಿ ಆ್ಯಂಬುಲೆನ್ಸ್ ನಲ್ಲಿ
ವಿಮ್ಸ್ ಆಸ್ಪತ್ರೆಗೆ ಕರೆತಂದಾಗ ಘಟನೆ ನಡೆಯಿತು.

ಆಂಬುಲೆನ್ಸ್ ತುರ್ತು ನಿಗಾ ಘಟಕದ ಮುಂಭಾಗ ಇಳಿಸಿ ಮುಂದೆ ಹೋದ ಬಳಿಕ, ಅವರಿಗೆ ಅಲ್ಲಿನ ಸಿಬ್ಬಂದಿ ಬೇರೊಂದು ಘಟಕಕ್ಕೆ ತೆರಳುವಂತೆ ಸೂಚಿಸಿದರು. ಆದರೆ ವ್ಹೀಲ್ ಚೇರ್ ಕೊಡಲಿಲ್ಲ. ಮಗಳನ್ನು ದಾಖಲಿಸುವ ಘಟಕದ ‌ಸಿಬ್ಬಂದಿಗೆ ಮಾಹಿತಿ ನೀಡಿ ವ್ಹೀಲ್ ಚೇರ್ ತರಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಮಗಳನ್ನು ಬಿಟ್ಟು ಎಲ್ಲಿಗೂ ಹೋಗಲು ಆಗದೆ ಅಸಹಾಯಕತೆಯಿಂದ ತಂದೆ ತಾವೇ ಹೆಗಲ‌ ಮೇಲೆ‌ ಮಗಳನ್ನು ಹೊತ್ತುಕೊಂಡು ಹೋದರು. ಈ‌ ವೀಡಿಯೊ ತುಣುಕೊಂದು ಸಾಮಾಜಿಕ‌ ಜಾಲತಾಣ ಗಳಲ್ಲಿ‌ ಹರಿದಾಡುತ್ತಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಲೈಂಗಿಕ ಚಟುವಟಿಕೆ ನಿರಾಕರಿಸಿದ್ದಕ್ಕೆ ಹೆಂಡತಿಯನ್ನೇ ಕೊಂದ ಪತಿ

newsics.com ಹೈದರಾಬಾದ್: ತನ್ನ ಪತ್ನಿ ಲೈಂಗಿಕತೆಗೆ ನಿರಾಕರಿಸಿದ್ದಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ ಆಕೆಯನ್ನು ಕತ್ತು ಹಿಸುಕಿ ಕೊಂದಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಶವಪರೀಕ್ಷೆ ವರದಿಯಲ್ಲಿ ಸಾವಿನ ಕಾರಣ ಬಹಿರಂಗವಾಗುವ ಮೂಲಕ...

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಬೋಗಿ ಬೆಂಕಿಗಾಹುತಿ

newsics.com ಕಣ್ಣೂರು: ಕೇರಳದ ಕಣ್ಣೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಬೋಗಿಯಲ್ಲಿ ಇಂದು (ಜೂ. 1) ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಟ್‌ಫಾರ್ಮ್ ಮತ್ತು ಭಾರತ್ ಪೆಟ್ರೋಲಿಯಂ ಇಂಧನ ಡಿಪೋದಿಂದ ಹಲವಾರು ಮೀಟರ್ ದೂರದಲ್ಲಿ ರೈಲು...

ಅವಳಿ ಮಕ್ಕಳನ್ನು ಕಾರಿನಲ್ಲಿ ಉಸಿರುಗಟ್ಟಿಸಿ ಕೊಲೆಗೈದ ಪಾಪಿ ತಂದೆ

newsics.com ದಾವಣಗೆರೆ: ಪಾಪಿ ತಂದೆಯೊಬ್ಬ ತನ್ನ ಅವಳಿಗೆ ಘಟನೆ ಉಸಿರುಗಟ್ಟಿಸಿ ಕೊಲೆಗೈದ ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ. ಅದ್ವೈತ್ (04) ಹಾಗೂ ಅನ್ವೀತ್ (04) ಮೃತಪಟ್ಟ ಮಕ್ಕಳು. ಅಮರ ಕಿತ್ತೂರು (35) ಮಕ್ಕಳನ್ನು ಕೊಂದ ಪಾಪಿ ತಂದೆ....
- Advertisement -
error: Content is protected !!