Sunday, March 26, 2023

ಹಿಂದಿ ಭಾಷೆ ವಿರುದ್ಧ ರಾಜ್ಯದಲ್ಲಿ ಧ್ವನಿ: ಪರ-ವಿರೋಧದ ಮಾತು

Follow Us

newsics.com
ಬೆಂಗಳೂರು: ಹಿಂದಿಯನ್ನು ಅಧಿಕೃತ ಭಾಷೆಯನ್ನಾಗಿ ಅಂಗೀಕರಿಸಿದ ದಿನವನ್ನು ಹಿಂದಿ ಭಾಷಾ ದಿವಸವಾಗಿ ಆಚರಿಸಲಾಗುತ್ತಿದೆ. 1949 ಸೆಪ್ಟೆಂಬರ್ 14ರಂದು ಹಿಂದಿಯನ್ನು ಅಧಿಕೃತ  ಭಾಷೆಯಾಗಿ ಘೋಷಿಸಲಾಯಿತು. ಇಂದು ಅದರ ವಾರ್ಷಿಕ ದಿನ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹಿಂದಿ ಪರ- ವಿರೋಧ ಧ್ವನಿ ಅಭಿವ್ಯಕ್ತಿಗೊಂಡಿದೆ.

ನಟ ಪ್ರಕಾಶ್ ರೈ ಕನ್ನಡವೇ ನನ್ನ ಉಸಿರು ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಇದರ ಜತೆ ಜತೆಗೆ ಅವರು  ಟ್ರೋಲ್’ಗೆ ಗುರಿಯಾಗಿದ್ದಾರೆ. ಬಹು ಭಾಷಾ ನಟರಾಗಿರುವ ಪ್ರಕಾಶ್ ರೈ ಅನುಕೂಲಕ್ಕೆ ತಕ್ಕಂತೆ ತೀರ್ಮಾನ ತೆಗೆದುಕೊಳ್ಳುವವರ ಸಾಲಿನಲ್ಲಿ ಇದ್ದಾರೆ ಎಂಬ ಟೀಕೆ ವ್ಯಾಪಕವಾಗಿದೆ.

ಈ ಮಧ್ಯೆ, ತಮ್ಮ ಕನ್ನಡ ಅಭಿಮಾನ ಪ್ರಶ್ನಿಸಿದವರಿಗೆ ಕ್ರಿಕೆಟಿಗ ವಿಜಯ್ ಆರ್. ಭಾರದ್ವಾಜ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಕನ್ನಡದಿಂದ ಜೀವನ ನಡೆಯುತ್ತಿದೆ. ಇನ್ನು ಮುಂದೆ ಟೀಕೆ ಮಾಡಿದರೆ ಅದಕ್ಕೆ ಅವರದ್ದೇ ಭಾಷೆಯಲ್ಲಿ ಉತ್ತರಿಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಇಂದು 36 ಉಪಗ್ರಹಗಳ ಉಡಾವಣೆ: ಕ್ಷಣಗಣನೆ ಆರಂಭ ಎಂದ ಇಸ್ರೋ

newsics.com ಶ್ರೀಹರಿಕೋಟಾ: ಇಸ್ರೊ ಸಹೋದ್ಯೋಗಿಗಳ ಜತೆ ನ್ಯೂ ಸ್ಪೇಸ್‌ ಇಂಡಿಯಾ ಲಿಮಿಟೆಡ್‌ ಭಾನುವಾರ ಬೆಳಗ್ಗೆ 36 ಉಪಗ್ರಹಗಳನ್ನು ಉಡಾವಣೆ ಮಾಡಲಿದೆ. 36 ಉಪಗ್ರಹಗಳನ್ನು ಎಲ್‌ವಿಎಂ3–ಎಂ3/ಒನ್‌ವೆಬ್‌ ಇಂಡಿಯಾ–2 ಮಿಷನ್‌ನಲ್ಲಿ ಉಡಾವಣೆ...

ಸರ್ ಎಂ.ವಿ. ಜನ್ಮಸ್ಥಳಕ್ಕೆ ಬಂದಿರುವುದು ನನ್ನ ಸೌಭಾಗ್ಯ: ಮೋದಿ

newsics.com ಬೆಂಗಳೂರು: ಆಧುನಿಕ ಭಾರತಕ್ಕೆ ಮಾದರಿಯಾಗಿರುವ ಹಾಗೂ ಸರ್ ಎಂ.ವಿಶ್ವೇಶ್ವರಯ್ಯ ಹುಟ್ಟಿದ ಪುಣ್ಯಭೂಮಿ ಚಿಕ್ಕಬಳ್ಳಾಪುರಕ್ಕೆ ಇಂದು ನಾನು ಬಂದಿರುವುದು ನನ್ನ ಸೌಭಾಗ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು. ಚಿಕ್ಕಬಳ್ಳಾಪುರದ ಶ್ರೀ ಮಧುಸೂದನ ಸಾಯಿ ವೈದ್ಯಕೀಯ...

ಕಾಸರಕೋಡು ಕಡಲತೀರದಲ್ಲಿ ಅಪರೂಪದ ‘ಗಿಟಾರ್ ಫಿಶ್’ ಪತ್ತೆ

newsics.com ಕೇರಳ: ಕಾಸರಕೋಡು ಕಡಲತೀರದಲ್ಲಿ ಅಪರೂಪದ 'ಗಿಟಾರ್ ಫಿಶ್' ಪತ್ತೆಯಾಗಿದೆ. ಕಡಲತೀರದಲ್ಲಿ ಮೀನು ಬಿದ್ದಿರುವುದು ಕಂಡು ಬಂದಿದ್ದು. ಈ ಹಿಂದೆ ಇಂತಹ ಮೀನನನ್ನು ಎಲ್ಲಿಯೂ ನೋಡಿರಲಿಲ್ಲ ಎಂದು ಕಾಸರಕೋಡಿನ ಇಕೋ ಬೀಚ್‌ನ ವ್ಯವಸ್ಥಾಪಕ ವಿನೋದ್ ಎಸ್...
- Advertisement -
error: Content is protected !!