newsics.com
ಮೈಸೂರು: ಪ್ರಿ ವೆಡ್ಡಿಂಗ್ ಫೋಟೋ ಶೂಟ್ ವೇಳೆ ಕಾವೇರಿ ನದಿಯಲ್ಲಿ ತೆಪ್ಪ ಮುಳುಗಿ ವಧು-ವರ ಸಾವನ್ನಪ್ಪಿದ ಪ್ರಕರಣ ಸಂಬಂಧ 6 ಮಂದಿ ವಿರುದ್ಧ ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣ ಸಂಬಂಧ ಪೊಲೀಸರು ಫೋಟೋ ಶೂಟ್’ನಲ್ಲಿ ಭಾಗವಹಿಸಿ ಮೃತಪಟ್ಟ ಚಂದ್ರ, ಶಶಿಕಲಾ, ಫೋಟೋಗ್ರಾಫರ್, ತೆಪ್ಪ ನೀಡಿದ ಕಟ್ಟೆಪುರ ನಿವಾಸಿ ಮೂಗಪ್ಪ ಸೇರಿ 6 ಜನರ ವಿರುದ್ಧ ಐಪಿಸಿ ಸೆಕ್ಷನ್ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಮಾಹಿತಿ ನೀಡಿದ್ದಾರೆ.
ಪ್ರಿ ವೆಡ್ಡಿಂಗ್ ಫೋಟೊಶೂಟ್; ತೆಪ್ಪ ಮುಳುಗಿ ವಧು, ವರ ಸಾವು
ಪ್ರಿ ವೆಡ್ಡಿಂಗ್ ಫೋಟೋಶೂಟ್ ಮಾಡುತ್ತಿದ್ದ ವೇಳೆ ವಧು-ವರ ಸಾವನ್ನಪ್ಪಿದ್ದರು. ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ತಲಕಾಡು ಗ್ರಾಮದ ಕಾವೇರಿ ಸಂಗಮದಲ್ಲಿ ನಡೆದಿತ್ತು. ತಲಕಾಡಿನಲ್ಲಿ ಪ್ರಿ ವೆಡ್ಡಿಂಗ್ ಫೋಟೋಶೂಟ್ ವೇಳೆ ತೆಪ್ಪ ಮುಳುಗಿ ವಧು-ವರ ಅಸುನೀಗಿದ್ದರು. ಮೈಸೂರಿನ ಕ್ಯಾತಮಾರನಹಳ್ಳಿ ನಿವಾಸಿಗಳಾದ ವಧು ಶಶಿಕಲಾ, ವರ ಚಂದ್ರು ಮೃತಪಟ್ಟಿದ್ದರು.
ತಲಕಾಡಿನ ಮುಡುಕುತೊರೆಯ ಕಾವೇರಿ ನದಿಯಲ್ಲಿ ತೆಪ್ಪದ ಮೇಲೆ ನಿಂತು ಫೋಟೋ ಶೂಟ್ ಮಾಡುತ್ತಿದ್ದಾಗ ಆಯತಪ್ಪಿ ಶಶಿಕಲಾ ನದಿಗೆ ಬಿದ್ದಿದ್ದರು. ಶಶಿಕಲಾಳನ್ನು ಹಿಡಿಯಲು ಹೋಗಿ ಚಂದ್ರು ಸಹ ನದಿಗೆ ಬಿದ್ದಿದ್ದರು. ಈಜು ಬಾರದ ಹಿನ್ನೆಲೆಯಲ್ಲಿ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದರು. ನವೆಂಬರ್ 22 ರಂದು ಚಂದ್ರು, ಶಶಿಕಲಾ ಮದುವೆಯಾಗಬೇಕಿತ್ತು.
ಕೆಂಪು ಬಣ್ಣಕ್ಕೆ ತಿರುಗಿದ ನದಿ ನೀರು: ಆತಂಕಗೊಂಡ ಜನರು
ಸುದ್ದಿ ಜಾಲ ತಾಣ, ಒಟಿಟಿ ಸೇವೆ ಮೇಲೆ ಸರ್ಕಾರದ ನಿಯಂತ್ರಣ
ಕೊಲ್ಕತ್ತಾದಲ್ಲಿ ಲಷ್ಕರ್ ಎ ತೊಯ್ಯಬಾ ಉಗ್ರನ ಬಂಧನ
ಕೊರೋನಾ ಸೈಡ್ ಎಫೆಕ್ಟ್: ಆರೋಗ್ಯ ವಿಮೆ ಪಾವತಿ ಭಾರೀ ಹೆಚ್ಚಳ