ಬೆಂಗಳೂರು: ಚಂದನವನದಲ್ಲಿ ಮಾದಕ ದ್ರವ್ಯ ಜಾಲದ ಜತೆ ಸಂಬಂಧದ ಆರೋಪ ಎದುರಿಸುತ್ತಿರುವ ರಾಗಿಣಿ ಮತ್ತು ಸಂಜನಾ ಜಾಮೀನು ಅರ್ಜಿ ವಿಚಾರಣೆಯನ್ನು ಮತ್ತೆ ಮುಂದೂಡಲಾಗಿದೆ. ಸೆಪ್ಟೆಂಬರ್ 21ರಂದು ಮುಂದಿನ ವಿಚಾರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಆರೋಪಿಗಳು 21ರ ತನಕ ಪರಪ್ಪನ ಅಗ್ರಹಾರದಲ್ಲಿಯೇ ಕಾಲ ಕಳೆಯಬೇಕಾಗಿದೆ.
ಈ ಮಧ್ಯೆ ಮಾದಕ ದ್ರವ್ಯ ಜಾಲ ಸಂಬಂಧ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಹೊಸ ಬಾಂಬ್ ಸಿಡಿಸಿದ್ದಾರೆ. ಎ ಗ್ರೇಡ್ ನ ಇಬ್ಬರು ನಟರೂ ಕೂಡ ಈ ಜಾಲದಲ್ಲಿ ಇದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಸಾಮಾಜಿಕ ಜಾಲ ತಾಣದ ಮೂಲಕ ಸಂಬರಗಿ ಈ ಆರೋಪ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಮಾಹಿತಿ ಬಹಿರಂಗಪಡಿಸುವುದಾಗಿ ಸಂಬರಗಿ ಘೋಷಿಸಿದ್ದಾರೆ