Monday, October 2, 2023

ಪೇಜಾವರ ಶ್ರೀಗಳ ಸ್ಥಿತಿ ಸುಧಾರಣೆ; ದೀರ್ಘ ಕಾಲದ ಚಿಕಿತ್ಸೆ ಅಗತ್ಯ

Follow Us

ಉಡುಪಿ: ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರು ಸಾಕಷ್ಟು ಚೇತರಿಸಿಕೊಂಡಿದ್ದು, ಅವರಿಗೆ ದೀರ್ಘಕಾಲದ ಚಿಕಿತ್ಸೆ ಅಗತ್ಯವಿದೆ ಎಂದು ಮಣಿಪಾಲ ಕೆಎಂಸಿ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀಗಳಿಗೆ ಎಲ್ಲ ರೀತಿಯ ಅಗತ್ಯ ಪರೀಕ್ಷೆಗಳನ್ನೂ ಮಾಡಲಾಗಿದೆ. ಎಲ್ಲವೂ ನಾರ್ಮಲ್ ಆಗಿದೆ‌. ಅವರಿಗೆ ನ್ಯುಮೋನಿಯಾ ಹೊರತುಪಡಿಸಿ ಬೇರೆ ಯಾವುದೇ ತೊಂದರೆ ಇಲ್ಲ. ಶ್ರೀಗಳಿಗೆ ದೀರ್ಘಕಾಲದ ಚಿಕಿತ್ಸೆ ಅಗತ್ಯವಿದೆ ಎಂದರು.

ಬೆಂಗಳೂರಿನ ಇಬ್ಬರು ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ದೆಹಲಿ ಆಸ್ಪತ್ರೆ ವೈದ್ಯರೊಂದಿಗೆ ನಿರಂತರ ಸಂಪರ್ಕ ಇಟ್ಟುಕೊಳ್ಳಲಾಗಿದೆ ಎಂದು ತಿಳಿಸಿದರು..

ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್, ಆರೋಗ್ಯ ಸಚಿವಾಲಯ ‌ನಮ್ಮ ಸಂಪರ್ಕದಲ್ಲಿದ್ದು, ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ‌ ಎಂದು ಅವಿನಾಶ್ ವಿವರಿಸಿದರು.

ಶ್ರೀಗಳನ್ನು ಎಲ್ಲಿಗೂ‌ ಶಿಫ್ಟ್ ಮಾಡುತ್ತಿಲ್ಲ. ಕೆಎಂಸಿಯಲ್ಲೆ ಚಿಕಿತ್ಸೆ ಮುಂದುವರಿಯಲಿದೆ ಎಂದರು.

ಬೆಂಗಳೂರಿನ ಮಣಿಪಾಲ ಸಮೂಹ ಆಸ್ಪತ್ರೆ ತುರ್ತು ಚಿಕಿತ್ಸೆ ವಿಭಾಗ, ಶ್ವಾಸಕೋಶ ತಜ್ಞ ವೈದ್ಯರಾದ ಡಾ‌.ರಾಜೇಶ್ ಶೆಟ್ಟಿ, ಡಾ.ಸತ್ಯನಾರಾಯಣ ಮಾತನಾಡಿ, ಪೇಜಾವರ ಶ್ರೀಗಳಿಗೆ ನಿಧಾನವಾಗಿ ಪ್ರಜ್ಞೆ ಮರುಕಳಿಸುತ್ತಿದೆ, ವಯಸ್ಸಾಗಿದ್ದರಿಂದ ಆರೋಗ್ಯ ಸುಧಾರಣೆಗೆ ಇನ್ನಷ್ಟು ಸಮಯ ಬೇಕು. ದೇಹದ ಎಲ್ಲ ಅಂಗಾಂಗಗಳೂ ಚೆನ್ನಾಗಿವೆ. ಆದರೆ ಶ್ವಾಸಕೋಶದಲ್ಲಿ ಮಾತ್ರ ಸೋಂಕು ಇದೆ. ನಿಧಾನವಾಗಿ ಸೊಂಕು ನಿವಾರಣೆ ಆಗಬೇಕಿದೆ. ವೆಂಟಿಲೇಟರ್ ನಲ್ಲೆ ಚಿಕಿತ್ಸೆ‌ ನಡೆಯುತ್ತಿದೆ ಎಂದರು.

ಮತ್ತಷ್ಟು ಸುದ್ದಿಗಳು

vertical

Latest News

ವಿದ್ಯುತ್ ಲೈನ್ ತಗುಲಿ 5 ಜಾನುವಾರು ಸ್ಥಳದಲ್ಲಿಯೇ ಸಾವು

newsics.com ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ. ಮತ್ತೂರು ಗ್ರಾಮದ...

Asian Games; ಭಾರತಕ್ಕೆ ಒಂದೇ ದಿನ 15 ಪದಕ

newsics.com ಹ್ಯಾಂಗ್‌ಝೌ: ಏಷ್ಯನ್‌ ಗೇಮ್ಸ್‌ನಲ್ಲಿ ಭಾರತ 8ನೇ ದಿನವಾದ ಭಾನುವಾರ ಒಂದೇ ದಿನ 15 ಪದಕ ಬಾಚಿಕೊಂಡಿದೆ. 7ನೇ ದಿನವಾದ ಶನಿವಾರ 10 ಚಿನ್ನ, 14 ಬೆಳ್ಳಿ ಮತ್ತು 14 ಕಂಚಿನೊಂದಿಗೆ 38 ಪದಕಗಳನ್ನು ಭಾರತ...

ಬೆಂಗಳೂರು ಕಂಬಳ: ಕೋಣಗಳಿಗೆ ಮಂಗಳೂರಿಂದಲೇ ಬರುತ್ತೆ ಕುಡಿಯುವ ನೀರು!

newsics.com ಬೆಂಗಳೂರು: ನವೆಂಬರ್ ತಿಂಗಳ 25 ಮತ್ತು 26ನೇ ತಾರೀಕಿನಂದು ಮೊದಲ ಬಾರಿಗೆ ತುಳುನಾಡಿನ ಗಡಿಯನ್ನು ದಾಟಿ ಬೆಂಗಳೂರಿನಲ್ಲಿ ಕರಾವಳಿಯ ಸಾಂಸ್ಕೃತಿಕ ಕ್ರೀಡೆ ಕಂಬಳ ನಡೆಯುತ್ತಿದೆ. ಪುತ್ತೂರು ಶಾಸಕ ಅಶೋಕ್‌ ಕುಮಾರ್ ರೈ ನೇತೃತ್ವದಲ್ಲಿ ಕಂಬಳ...
- Advertisement -
error: Content is protected !!