newsics.com
ಬೆಂಗಳೂರು: ಡ್ರಗ್ ಜಾಲದ ಬೆನ್ನತ್ತಿರುವ ಸಿಸಿಬಿ ಪೊಲೀಸರು ನಟ ಮತ್ತು ನಿರೂಪಕ ಅಕುಲ್ ಬಾಲಾಜಿ, ಆರ್.ವಿ. ಯುವರಾಜ್ ಸೇರಿ ಮೂವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.
ಕಾಟನ್ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ಮುಂದುವರೆಸಿರುವ ಸಿಸಿಬಿ ಪೊಲೀಸರು. ಮತ್ತಷ್ಟು ಮಾಹಿತಿ ಕಲೆ ಹಾಕುವ ಸಂಬಂಧ ಚಿತ್ರರಂಗಕ್ಕೆ ಸೇರಿದ ಅಕುಲ್ ಬಾಲಾಜಿ, ಸಂತೋಷ್ ಕುಮಾರ್, ಮಾಜಿ ಶಾಸಕ ಆರ್.ವಿ. ದೇವರಾಜ್ ಪುತ್ರ ಆರ್.ವಿ.ಯುವರಾಜ್ ಅವರಿಗೆ ನೋಟಿಸ್ ನೀಡಿರುವುದಾಗಿ ತಿಳಿಸಿದ್ದಾರೆ.
ನಾಳೆ (ಸೆ.19) ಬೆಳಗ್ಗೆ 10 ಗಂಟೆಗೆ ಸಿಸಿಬಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ನಲ್ಲಿ ತಿಳಿಸಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ಡ್ರಗ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈವರೆಗೂ 12 ಮಂದಿಯನ್ನು ಬಂಧಿಸಲಾಗಿದೆ. ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ, ರವಿಶಂಕರ್, ಲೂಮ್ ಪೆಪ್ಪರ್, ರಾಹುಲ್ ಸೇರಿದಂತೆ ಹಲವರು ಬಂಧನಕ್ಕೆ ಒಳಗಾಗಿ, ವಿಚಾರಣೆ ನಂತರ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಸ್ಯಾಂಡಲ್ವುಡ್ನ ತಾರಾ ದಂಪತಿ ದಿಗಂತ್ ಮತ್ತು ಐಂದ್ರಿತಾ ರೇ ಅವರಿಗೂ ನೋಟಿಸ್ ನೀಡಿ ವಿಚಾರಣೆ ನಡೆಸಲಾಗಿದೆ. ಈ ದಂಪತಿಯನ್ನು ಮತ್ತೊಂದು ಸುತ್ತಿನ ವಿಚಾರಣೆ ನಡೆಸುವ ಸಾಧ್ಯತೆ ಇದೆ.
ಸ್ಯಾಂಡಲ್ವುಡ್ ಡ್ರಗ್ಸ್ ಕೇಸ್; ಅಕುಲ್ ಸೇರಿ ಮೂವರಿಗೆ ಸಿಸಿಬಿ ನೋಟಿಸ್
Follow Us