newsics.com
ಶಿವಮೊಗ್ಗ: ಸಿಇಟಿಯಲ್ಲಿ ಉತ್ತಮ ಅಂಕ ಬರುತ್ತದೆಯೋ ಇಲ್ಲವೋ ಎಂಬ ಆತಂಕದಿಂದ ದ್ವಿತೀಯ ಪಿಯುಸಿ ಪೂರ್ಣಗೊಳಿಸಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಈ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿಯಲ್ಲಿ ನಡೆದಿದೆ. ಚಂದ್ರಗುತ್ತಿಯ ನಿವಾಸಿ ಕೃಷ್ಣರಾವ್ ಅವರ ಮಗ ಚಿನ್ಮಯ್ (19) ತನ್ನ ಮನೆಯ ಹಿಂದೆಯೇ ನೇಣಿಗೆ ಶರಣಾಗಿದ್ದಾನೆ.
ಕಳೆದ ಬಾರಿ ಸಹ ಸಿಇಟಿಯಲ್ಲಿ ಉತ್ತಮ ಅಂಕ ಬಾರದ ಕಾರಣ ಮತ್ತೊಮ್ಮೆ ಸಿಇಟಿ ಪರೀಕ್ಷೆ ಬರೆದಿದ್ದ. ಆದರೆ ತನಗೆ ಈ ಬಾರಿಯೂ ಉತ್ತಮ ಅಂಕ ಬರದೇ ಸರ್ಕಾರಿ ಕೋಟಾದಡಿ ಇಂಜಿನಿಯರಿಂಗ್ (ಬಿಇ) ಅಭ್ಯಾಸ ಮಾಡಲು ಆಗುತ್ತದೆಯೋ ಇಲ್ಲವೋ ಎಂಬ ಆತಂಕದಿಂದ ಪರೀಕ್ಷೆ ನಡೆಯುವ ಮುನ್ನವೇ ಆತ್ಮಹತ್ಯೆ ಮಾಡಿಕೊಂಡಿದ್ದು, ಸೊರಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವೆಬ್ಸೈಟ್’ನಲ್ಲಿ ತಾಂತ್ರಿಕ ತೊಂದರೆ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸಿಗದ ಫಲಿತಾಂಶ
2021 ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ : ಶೇ. 99.9 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ