newsics.com
ಕಾರವಾರ(ಉತ್ತರ ಕನ್ನಡ): ಹಿರಿಯ ಸಾಹಿತಿ, ರಂಗಕರ್ಮಿ, ಪತ್ರಕರ್ತ ನಾ.ಸು. ಭರತನಹಳ್ಳಿ (84) ಅವರು ವಯೋಸಹಜ ಅನಾರೋಗ್ಯದಿಂದ ಶುಕ್ರವಾರ(ಡಿ.24) ಶಿರಸಿಯ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಉಮ್ಮಚಗಿ(ಕುಂದರಗಿ)ಯಲ್ಲಿ ವಾಸವಿದ್ದ ಭರತನಹಳ್ಳಿ ಅವರಿಗೆ ಸೊಸೆ, ಮೂವರು ಪುತ್ರಿಯರಿದ್ದಾರೆ. ಕಥೆ, ಕಾದಂಬರಿ, ಕವನ, ಪ್ರವಾಸಿ ಕಥನ, ನಾಟಕ, ಮಕ್ಕಳ ಸಾಹಿತ್ಯ, ಅನುವಾದ, ಅಂಕಣ ಬರಹ ಸೇರಿದಂತೆ 26 ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಮುನ್ನಡೆ ವಾರಪತ್ರಿಕೆ ಹಾಗೂ ದಿನಪತ್ರಿಕೆಗಳ ಸಂಪಾದಕರಾಗಿದ್ದರು. ಸ್ವರ್ಣವಲ್ಲಿ ಶ್ರೀಗಳ ಮಾರ್ಗದರ್ಶನದ ಸ್ವರ್ಣವಲ್ಲೀ ಪ್ರಭಾ ಸಂಪಾದಕರಾಗಿ 21 ವರ್ಷ ಕಾರ್ಯನಿರ್ವಹಿಸಿದ್ದರು.
ನಾ.ಸು. ಭರತನಹಳ್ಳಿ, ಉತ್ತರ ಕನ್ನಡ ಜಿಲ್ಲೆಯ 14 ನೇ ಸಾಹಿತ್ಯ ಸಮ್ಮೇಳನದಲ್ಲಿ ಹಾಗೂ ಯಲ್ಲಾಪುರ ತಾಲೂಕಿನ ಪ್ರಥಮ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದರು. ಕೆ.ಶ್ಯಾಮರಾವ್ ದತ್ತಿ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಕರ್ನಾಟಕಶ್ರೀ ಪ್ರಶಸ್ತಿ, ಕಾಸರಗೋಡಿನ ಕಯ್ಯಾರ ಕಿಞ್ಞಣ್ಣ ರೈ ಪ್ರಶಸ್ತಿ ಮೊದಲಾದ ಪುರಸ್ಕಾರಗಳಿಗೆ ಭಾಜನರಾಗಿದ್ದರು.
ಯುವ ನಿರ್ದೇಶಕ ಭರತ್ ನಿಧನ