newsics.com
ತುಮಕೂರು: ಕುಣಿಗಲ್ ತಾಲೂಕಿನ ಗಡಿಭಾಗದಲ್ಲಿನ ಮಾರ್ಕೋನಹಳ್ಳಿ ಜಲಾಶಯದ ಕೋಡಿ ನೀರಿನಲ್ಲಿ ಆಟವಾಡಲು ಹೋದ ನಾಲ್ವರು ಕೊಚ್ಚಿಹೋಗಿದ್ದಾರೆ.
ಪರ್ವಿನ್ತಾಜ್ (23) ಮತ್ತು ಸಾದೀಯ(17) ರಾಜು(23) ಮತ್ತು ಅಪ್ಪು(20) ನೀರಿನಲ್ಲಿ ಕೊಚ್ಚಿಹೋಗಿರುವ ಮೃತರು. ಭಾನುವಾರ ರಜೆ ಇದ್ದ ಹಿನ್ನೆಲೆಯಲ್ಲಿ ಜಲಾಶಯದ ಬಲಭಾಗದ ಕೋಡಿ ಹಳ್ಳದಲ್ಲಿ ಆಟವಾಡುತ್ತಿದ್ದರು. ಆಟವಾಡುತ್ತಾ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ಧಿಡೀರನೇ ಮಾರ್ಕೋನಹಳ್ಳಿ ಜಲಾಶಯಕ್ಕೆ ಎರಡು ಸಾವಿರ ಕ್ಯೂಸೆಕ್ ಒಳಹರಿವು ಹೆಚ್ಚಾಗಿ, ಕೊಚ್ಚಿ ಹೋಗಿದ್ದಾರೆ.
ಸ್ಥಳದಲ್ಲಿದ್ದವರು ಅವರನ್ನು ರಕ್ಷಿಸಲು ಮುಂದಾದರೂ ಯಾವುದೇ ಪ್ರಯೋಜನವಾಗಿಲ್ಲ. ಕುಟುಂಬದ ಸದಸ್ಯರು ಕಣ್ಣ ಮುಂದೆಯೇ ಕೊಚ್ಚಿಹೋಗುತ್ತಿದ್ದ ದೃಶ್ಯ ಹೃದಯವಿದ್ರಾವಕವಾಗಿತ್ತು.
ಏರ್ಟೆಲ್, ವೊಡಾಫೋನ್ ಬೆನ್ನಲ್ಲೇ ಜಿಯೋ ಕೂಡ ಈಗ ದುಬಾರಿ: ಡಿಸೆಂಬರ್ನಿಂದ ಹೊಸ ದರ ಜಾರಿ
ರಾಜ್ಯದಲ್ಲಿ ಕೊರೋನಾ, ಒಮಿಕ್ರಾನ್ ಆತಂಕ: ಶಿಕ್ಷಣ ಸಂಸ್ಥೆಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ