newsics.com
ಬೆಳಗಾವಿ: ಆಟವಾಡುತ್ತ ಕಾಲುವೆಗೆ ಇಳಿದಿದ್ದ ನಾಲ್ವರು ಮಕ್ಕಳ ಪೈಕಿ ಒಂದೇ ಕುಟುಂಬದ ಇಬ್ಬರು ಮಕ್ಕಳು ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ.
ಸ್ವಪ್ನಾ ವಿನಾಯಕ್ ಪುಂಡಿಪಲ್ಲೆ (11) ಮತ್ತು ವಿಜಯ ವಿನಾಯಕ ಪುಂಡಿಪಲ್ಲೆ (7) ಮೃತ ಮಕ್ಕಳು. ಶ್ರೀಧರ್ ಶಂಕರ್ ಪುಂಡಿಪಲ್ಲೆ (4) ಪ್ರಥಮ ವಿನಾಯಕ ಪುಂಡಿಪಲ್ಲೆ(8) ಎಂಬಿಬ್ಬರು ಮಕ್ಕಳು ಬದುಕುಳಿದಿದ್ದಾರೆ.
ಶನಿವಾರ ಸಂಜೆ ಆಟವಾಡುತ್ತ ನಾಲ್ವರು ಮಕ್ಕಳು ಕರಿಮಸೂತಿ ಏತ ನೀರಾವರಿ ಕಾಲುವೆಗೆ ಹೋಗಿದ್ದಾರೆ. ತಕ್ಷಣವೇ ಸ್ಥಳೀಯರು ಇಬ್ಬರು ಮಕ್ಕಳನ್ನು ರಕ್ಷಿಸಿದ್ದಾರೆ.
ಒಂದು ವರ್ಷ ಏರ್ ಇಂಡಿಯಾ ಸಿಬ್ಬಂದಿ ಸೇವೆ ಮುಂದುವರಿಸುವಂತೆ ಟಾಟಾಗೆ ಕೇಂದ್ರ ಸರ್ಕಾರ ಷರತ್ತು