Wednesday, May 31, 2023

ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿದೆ ಪಾಕಿಸ್ತಾನ ಪದ ಬಳಕೆ

Follow Us

ಬೆಂಗಳೂರು:  ರಾಜ್ಯ ರಾಜಕಾರಣದಲ್ಲಿ ಇದ್ದಕ್ಕಿದ್ದ ಹಾಗೆ ಪಾಕಿಸ್ತಾನ ಪದ ಪ್ರಯೋಗ ಪ್ರತಿಧ್ವನಿಸುತ್ತಿದೆ. ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಮತ್ತು ಬಿಜೆಪಿ ನಾಯಕರ ಮಧ್ಯೆ ಮಾತಿನ ಸಮರ ಆರಂಭವಾಗಿದೆ.ಇದು ಹೊಸತಲ್ಲ. ಆದರೆ ಮಾತಿನ ಮಧ್ಯೆ ಪಾಕಿಸ್ತಾನ ಪದ ಪ್ರಯೋಗ ನುಸುಳಿಕೊಂಡಿದೆ. ಶಿಕ್ಷಣ ಸಚಿವ ,ಸುರೇಶ್ ಕುಮಾರ್  ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೆಂಡಾಮಂಡಲವಾಗಿದ್ದಾರೆ. ಸಜ್ಜನ ರಾಜಕಾರಣಿ ಎಂದೇ ಗುರುತಿಸಿಕೊಂಡಿರುವ ,ಸುರೇಶ್ ಕುಮಾರ್ ಕುರಿತ ಗೌರವದ ಭಾವನೆಗೆ ಚ್ಯುತಿ ಉಂಟಾಗಿದೆ ಎಂದು ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಪಾಕಿಸ್ತಾನ ಇಲ್ಲದಿದ್ದರೆ ಬಿಜೆಪಿಗೆ ಒಂದು ಮತ ಕೂಡ ದೊರೆಯುತ್ತಿಲ್ಲ ಎಂದು ಕುಮಾರಸ್ವಾಮಿ ಹೇಳಿಕೆಗೆ ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ  ಪ್ರತಿಕ್ರಿಯಿಸಿದ್ದಾರೆ. ನೆಹರೂ ಅವರ ಅಧಿಕಾರ ದಾಹ ಮತ್ತು ತುಷ್ಟೀಕರಣ ನೀತಿಯಿಂದ ಪಾಕಿಸ್ತಾನ ಜನ್ಮ ತಳೆದಿದೆ ಎಂದು ಟೀಕಿಸಿದ್ದಾರೆ.  ಹೀಗೆ ರಾಷ್ಟ್ಕ ರಾಜಕಾರಣದಲ್ಲಿ ಸದ್ದು ಮಾಡುತ್ತಿದ್ದ ಪಾಕಿಸ್ತಾನ ಪದ ಬಳಕೆ ರಾಜ್ಯ ರಾಜಕಾರಣಕ್ಕೂ ಕಾಲಿಟ್ಟಿರುವುದು ಮುಂದಿನ ದಿನಗಳಲ್ಲಿ  ಇನ್ನಷ್ಟು ತಿರುವು ಪಡೆದುಕೊಳ್ಳುವ ಸಾಧ್ಯತೆಗಳಿವೆ

ಮತ್ತಷ್ಟು ಸುದ್ದಿಗಳು

vertical

Latest News

ಪುಷ್ಪಾ 2 ಶೂಟಿಂಗ್‌ ಮುಗಿಸಿ ವಾಪಸ್ ತೆರಳಿದ್ದ ಕಲಾವಿದರ ಬಸ್‌ ಅಪಘಾತ

newsics.com ಅಲ್ಲು ಅರ್ಜುನ್- ರಶ್ಮಿಕಾ ಮಂದಣ್ಣ ನಟನೆಯ 'ಪುಷ್ಪ 2' ಸಿನಿಮಾದಲ್ಲಿ ನಟಿಸುತ್ತಿದ್ದ ಸಹ ಕಲಾವಿದರು ಚಿತ್ರೀಕರಣದಲ್ಲಿ ಭಾಗವಹಿಸಿ ವಾಪಸ್ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ತೆಲಂಗಾಣದ...

ಆದಾಯ ತೆರಿಗೆ ಅಧಿಕಾರಿಗಳಂತೆ ವೇಷ ಧರಿಸಿ ಚಿನ್ನ ಕದ್ದ ಕಳ್ಳರು

newsics.com ಹೈದರಾಬಾದ್: ಆದಾಯ ತೆರಿಗೆ ಅಧಿಕಾರಿಗಳಂತೆ ವೇಷ ಧರಿಸಿ ಹೈದರಾಬಾದ್‌ನ ಅಂಗಡಿಯೊಂದರಲ್ಲಿ 60 ಲಕ್ಷ ರೂ. ಮೌಲ್ಯದ ಚಿನ್ನದ ಬಿಸ್ಕತ್‌ಗಳನ್ನು ಕದ್ದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಗಳನ್ನು ರೆಹಮಾನ್...

ಮಲಯಾಳಂ ಚಿತ್ರರಂಗದ ಖ್ಯಾತ ನಟ ಹರೀಶ್ ಪೆಂಗನ್ ನಿಧನ

newsics.com ಮಲಯಾಳಂ ಚಿತ್ರರಂಗದ ಖ್ಯಾತ ಕಲಾವಿದ ಹರೀಶ್ ಪೆಂಗನ್ ಅವರು ಮಂಗಳವಾರ (ಮೇ 30) ನಿಧನ ಹೊಂದಿದ್ದಾರೆ. ಅವರಿಗೆ 49 ವರ್ಷ ವಯಸ್ಸಾಗಿತ್ತು. ಹರೀಶ್ ಅವರು ಕಳೆದ ಕೆಲ ವರ್ಷಗಳಿಂದ ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದರು....
- Advertisement -
error: Content is protected !!