Tuesday, March 28, 2023

ಅಣ್ಣ-ತಮ್ಮನ ನಡುವೆ ಜಗಳ, ತಮ್ಮ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

Follow Us

Newsics.Com

ಉಡುಪಿ: ಅಣ್ಣ ತಮ್ಮನ ನಡುವೆ ಜಮೀನಿಗಾಗಿ ಜಗಳವಾಗಿದ್ದು, ಮನನೊಂದ ತಮ್ಮ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆ ಕಾರ್ಕಳ ತಾಲೂಕು ಸಚ್ಚೇರಿಪೇಟೆಯಲ್ಲಿ ನಡೆದಿದೆ.

ಮನೆಯಲ್ಲೇ ಅಣ್ಣ ತಮ್ಮ ಜಗಳ ಆಡಿದ್ದಾರೆ. ತಮ್ಮ ಕೃಷ್ಣ ಅಣ್ಣನ ಮನೆಗೆ ಬೆಂಕಿ ಇಡಲು ಪ್ರಯತ್ನಿಸಿದ್ದಾನೆ. ನಂತರ ಅಲ್ಲಿಂದ ಹೋಗಿದ್ದಾನೆ. ಮನನೊಂದು ಕೃಷ್ಣ ಸಫಲಿಗ ಖಿನ್ನತೆಗೆ ಒಳಗಾಗಿ ತಮ್ಮ ಕಾರಿನಲ್ಲಿ ಕುಳಿತು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ.

ರಾತ್ರಿ 3 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ, ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸರು ಆಗಮಿಸಿ ತನಿಖೆ ನಡೆಸಿದ್ದಾರೆ. ವಿಧಿ ವಿಜ್ಞಾನ ಪ್ರಯೋಗಾಲಯದವರು ಸ್ಥಳಕ್ಕೆ ಬಂದು ಮಾಹಿತಿ ಕಲೆ ಹಾಕಿದ್ದಾರೆ. ಕಾರ್ಕಳ ಗ್ರಾಮಂತರ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ಎಂದು ದಾಖಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್‌) ಬಡ್ಡಿ ದರ ಶೇ.8.15 ಕ್ಕೆ ಏರಿಕೆ

newscics.com ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಭವಿಷ್ಯ ನಿಧಿಯ ಮೇಲಿನ ಬಡ್ಡಿ ದರವನ್ನುಬ ಹೆಚ್ಚಿಸಲು ತೀರ್ಮಾನಿಸಿದೆ....

ವಾಯುಮಾಲಿನ್ಯದಿಂದ 1,220 ಜನರು ಸಾವು

newscics.com ಮುಂಬೈ: ಮುಂಬೈನಲ್ಲಿ 2016-2021 ರ ನಡುವೆ 1,220 ಜನರು ವಾಯುಮಾಲಿನ್ಯದಿಂದ ಸಾವನ್ನಪ್ಪಿದ್ದಾರೆ. ಅಂಕಿಅಂಶಗಳ ಪ್ರಕಾರ, ಮುಂಬೈನಲ್ಲಿ 2016 ಮತ್ತು 2021 ರ ನಡುವೆ 1,220...

ಭಾರತದ ಮೊದಲ ಗೀರ್ ತದ್ರೂಪಿ ತಳಿ ಆಕಳ ಕರು ಜನನ

newsics.com ನವದೆಹಲಿ: ಭಾರತದ ಮೊದಲ ತದ್ರೂಪಿ ಗಿರ್ ತಳಿಯ ಆಕಳ ಕರು ಹರಿಯಾಣದ ಕರ್ನಾಲ್‌ನಲ್ಲಿರುವ ರಾಷ್ಟ್ರೀಯ ಡೈರಿ ಸಂಶೋಧನಾ ಸಂಸ್ಥೆ (NDRI) ಯಲ್ಲಿ ಜನ್ಮ ಪಡೆದಿದೆ.ಈ...
- Advertisement -
error: Content is protected !!