Thursday, December 7, 2023

ಸೆ.28ರಿಂದ ಉಡುಪಿ ಶ್ರೀಕೃಷ್ಣ ಮಠ ಭಕ್ತರಿಗೆ ಓಪನ್

Follow Us

newsics.com 
ಉಡುಪಿ: ಸೆ.28ರಿಂದ ಶ್ರೀಕೃಷ್ಣ ಮಠದಲ್ಲಿ ಭಕ್ತರಿಗೆ ದರ್ಶನಾವಕಾಶ ದೊರೆಯಲಿದೆ.
ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಮಾ.22ರಿಂದ ಶ್ರೀಮಠಕ್ಕೆ ಭಕ್ತರ ಪ್ರವೇಶ ನಿಷೇಧಿಸಲಾಗಿತ್ತು.
ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರ ಮಾರ್ಗದರ್ಶನದಂತೆ ಪರ್ಯಾಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಸೆ. 28ರಿಂದ ಶ್ರೀಕೃಷ್ಣ ಮಠದಲ್ಲಿ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲು ನಿರ್ಧರಿಸಿದ್ದಾರೆ ಎಂದು ವ್ಯವಸ್ಥಾಪಕ ಗೋವಿಂದರಾಜ್‌ ತಿಳಿಸಿದ್ದಾರೆ.
ಮಠದ ಸೇವಾ ಕೌಂಟರ್‌ನಲ್ಲಿ ಭಕ್ತರಿಗೆ ಅಗತ್ಯ ಮಾಹಿತಿ, ನಿರ್ಬಂಧಗಳ ಬಗ್ಗೆ ತಿಳಿಸಲಾಗುವುದು. ಮೊದಲ ಹಂತದಲ್ಲಿ ಮಧ್ಯಾಹ್ನ 2ರಿಂದ ಸಂಜೆ 5 ಗಂಟೆವರೆಗೆ ಮಾತ್ರ ಪ್ರವೇಶವಿರುತ್ತದೆ. ಎಲ್ಲ ಭಕ್ತರು ರಾಜಾಂಗಣದ ಬಳಿ ಇರುವ ಉತ್ತರ ದ್ವಾರದ ಮೂಲಕ ಪ್ರವೇಶಿಸಬೇಕು. ಮಠದ ಆವರಣದೊಳಗೆ ಯಾರೂ ಮಂತ್ರ, ಪಾರಾಯಣ ಮಾಡಬಾರದು. ಮಾಸ್ಕ್ ಧರಿಸಿರಬೇಕು, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು, ಸ್ಯಾನಿಟೈಸರ್‌ ಬಳಸಿಕೊಳ್ಳಬೇಕು. ಹಿರಿಯ ನಾಗರಿಕರು, ಚಿಕ್ಕಮಕ್ಕಳು ಮನೆಯಲ್ಲಿದ್ದು ಪ್ರಾರ್ಥನೆ ಮಾಡುವುದು ಉತ್ತಮ. ಮುಂದಿನ ದಿನಗಳಲ್ಲಿ ಭೋಜನ ಪ್ರಸಾದ- ತೀರ್ಥ ಪ್ರಸಾದ ಆರಂಭಿಸಲಾಗುವುದು. ತುಪ್ಪ, ಎಳ್ಳೆಣ್ಣೆ ದೀಪಗಳನ್ನು ಬೆಳಗುವ ಬದಲು ಕೌಂಟರ್‌ನಲ್ಲಿ ಸಿಗುವ ಶುದ್ಧ ಎಳ್ಳನ್ನು ಪಡೆದು ಒಪ್ಪಿಸಬೇಕು. ಇದರಿಂದ ತಯಾರಿಸಿದ ಶುದ್ಧ ಎಳ್ಳೆಣ್ಣೆಯನ್ನು ಬಳಸಲಾಗುವುದು ಎಂದು ಗೋವಿಂದರಾಜ್ ಶನಿವಾರ ಮಾಹಿತಿ ನೀಡಿದರು.

ಮತ್ತಷ್ಟು ಸುದ್ದಿಗಳು

vertical

Latest News

ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಪೊಲೀಸ್ ವಶಕ್ಕೆ

Newsics.com ಕಲಬುರಗಿ : ಅಪಘಾತವನ್ನು ಕೊಲೆ ಯತ್ನ ಎಂದು ಕಥೆ ಕಟ್ಟಿದ್ದ ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ರನ್ನ ನಗರ ಠಾಣೆಯ ಪೊಲೀಸರು ಮತ್ತೆ ವಶಕ್ಕೆ...

ನಂದಿನಿ ಹಾಲಿನ ದರ ಮತ್ತೆ ಏರಿಕೆ..!!

Newsics.com ಬೆಂಗಳೂರು :  ರಾಜ್ಯದ ಜನತೆಗೆ ಮತ್ತೊಂದು ದರ ಏರಿಕೆಯ ಬಿಸಿ ಕಾದಿದೆ. ಹೌದು, ನಂದಿನಿ ಹಾಲಿನ ದರ ಪರಿಷ್ಕರಣೆಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF) ಚಿಂತನೆ ನಡೆಸಿದೆ. ಈ ಕುರಿತು ಜನವರಿಯಲ್ಲಿ...

ಚಿನ್ನ, ಜಮೀನು, ಬಿಎಂಡಬ್ಲ್ಯೂ ಕಾರಿಗೆ ಬೇಡಿಕೆ : ಕೇರಳದ ವೈದ್ಯೆ ಆತ್ಮಹತ್ಯೆ

Newsics.com ಕೇರಳ : ಕೇರಳದ ತಿರುವನಂತಪುರಂ ಮೆಡಿಕಲ್ ಕಾಲೇಜಿನ ಶಸ್ತ್ರಚಿಕಿತ್ಸಾ ವಿಭಾಗದ ಸ್ನಾತಕೋತ್ತರ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಆತ್ಮಹತ್ಯೆಗೆ ವರದಕ್ಷಿಣೆಗೆ ಬೇಡಿಕೆ ಇಟ್ಟಿದ್ದೆ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಮೃತ ವೈದ್ಯಳನ್ನು...
- Advertisement -
error: Content is protected !!