Wednesday, May 31, 2023

ವಸುಂಧರಾ ರಾಜೇ ಹಾದಿಯಲ್ಲಿ ಯಡಿಯೂರಪ್ಪ?

Follow Us

ಬೆಂಗಳೂರು:  ರಾಜ್ಯ ಸಚಿವ ಸಂಪುಟ ವಿಸ್ತರಣೆ ಮುಂದೂಡಿಕೆಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅಸಮಾಧಾನ ಹೊಂದಿದ್ದಾರೆ. ಇದು ಬಹಿರಂಗವಾಗಿ ಪ್ರಕಟಗೊಂಡಿದೆ. ಸಚಿವ ಸಂಪುಟ ವಿಸ್ತರಣೆಗೆ ಯಾಕೆ ಕಾಲ ಕೂಡಿ ಬಂದಿಲ್ಲ ಎಂಬ ಸರಳ ಪ್ರಶ್ನೆಗೆ ಯಾರ ಬಳಿಯೂ ಉತ್ತರವಿಲ್ಲ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಭೇಟಿಗೆ ಸಮಯ ನಿಗದಿಯಾಗಿಲ್ಲ ಎಂಬ ಉತ್ತರ ಕೇಳಿ ಬರುತ್ತಿದೆ. ಇಂದಿನ ಮಾಹಿತಿ ತಂತ್ರಜ್ಞಾನ ಯುಗದಲ್ಲಿ ವೈಯಕ್ತಿಕ ಭೇಟಿಯಾಗದಿದ್ದರೂ ಕ್ಲಿಷ್ಟ ಸಮಸ್ಯೆಗಳನ್ನು  ನಿಮಿಷಾರ್ಧದಲ್ಲಿ ಬಗೆಹರಿಸಬಹುದು. ಮಾತುಕತೆ ಕೂಡ ಸಾಧ್ಯ. ಆದರೇ ಬೇಕಾಗಿರುವುದು ಇಚ್ಚಾಶಕ್ತಿ ಮಾತ್ರ. ರಾಜ್ಯದಲ್ಲಿ ಯಡಿಯೂರಪ್ಪ ಹೆಚ್ಚಿಸಿಕೊಂಡಿರುವ ಜನಪ್ರಿಯತೆಯಿಂದ ದೂರದ ದೆಹಲಿಯಲ್ಲಿರುವ ಕೆಲವು ನಾಯಕರು ಭಯಪಡುತ್ತಿದ್ದಾರೆ. ಇದಕ್ಕಾಗಿ ಪಕ್ಷದ ಮೇಲೆ ನಿಯಂತ್ರಣ ಇದೆ ಎಂಬುದನ್ನು ತೋರಿಸುವ ಸಲುವಾಗಿ ವಿಳಂಬ ತಂತ್ರ ಎನ್ನುತ್ತಿವೆ ಕೆಲವು ಮೂಲಗಳು. ಇಂತಹ ಪರಿಸ್ಥಿತಿಯಲ್ಲಿ ಯಡಿಯೂರಪ್ಪ ರಾಜಸ್ತಾನ ಮುಖ್ಯಮಂತ್ರಿಯಾಗಿದ್ದ ವಸುಂಧರಾ ರಾಜೇ ಸಿಂಧಿಯಾ ಅವರ ಮಾದರಿ ಅನುಸರಿಸಲಿದ್ದಾರೆಯೇ ಎಂಬ ಪ್ರಶ್ನೆ ಮೂಡಿದೆ. ಅಂದು ಆಡಳಿತದಲ್ಲಿದ್ದ ಬಿಜೆಪಿಯ ಮುಖ್ಯಮಂತ್ರಿಗಳ ಪೈಕಿ ವಸುಂಧರಾ ರಾಜೇ ಭಿನ್ನವಾಗಿದ್ದರು.  ರಾಜಸ್ತಾನದಲ್ಲಿ ಮುಖ್ಯಮಂತ್ರಿ ಮಾತೇ ಅಂತಿಮ. ಇದರಲ್ಲಿ ಎರಡು ಮಾತಿಲ್ಲ ಎಂದು ಖಡಾಖಂಡಿತವಾಗಿ ಸ್ಪಷ್ಟಪಡಿಸಿದ್ದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೂ ಅಗತ್ಯಕಿಂತ ಹೆಚ್ಚಿಗೆ ಮಣಿಹಾಕಲು ಅವರು ನಿರಾಕರಿಸಿದ್ದರು.  ತಮ್ಮ ವೈಯಕ್ತಿಕ ಇಮೇಜ್ ಉಳಿಸಿಕೊಂಡೇ ಅವರು ಪಕ್ಷದ ರಾಷ್ಟ್ರೀಯ ನಾಯಕರೊಂದಿಗೆ  ಮಾತುಕತೆ ನಡೆಸುತ್ತಿದ್ದರು. ಇದೀಗ ಯಡಿಯೂರಪ್ಪ ಅವರು ಕೂಡ ಇದೇ ಹಾದಿ ತುಳಿಯಲಿದ್ದಾರೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಸಾಮಾಜಿಕ ಜಾಲತಾಣಗಳಲ್ಲೂ ನ್ಯಾಯಾಧೀಶರನ್ನು ದೂಷಿಸುವಂತಿಲ್ಲ: ಸುಪ್ರೀಂ ಕೋರ್ಟ್‌ ಆದೇಶ

newsics.com ನವದೆಹಲಿ: ಸೋಷಿಯಲ್ ಮೀಡಿಯಾದಲ್ಲೂ ನ್ಯಾಯಾಧೀಶರನ್ನು ದೂಷಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ ನೀಡಿದೆ. ಜಿಲ್ಲಾ ನ್ಯಾಯಾಧೀಶರ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿದ್ದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ವ್ಯಕ್ತಿಯೊಬ್ಬರಿಗೆ...

ಪತಿಯ ಮೃತದೇಹವನ್ನು ಮನೆಯೊಳಗೆ ದಹನ ಮಾಡಿದ ಮಾನಸಿಕ ಅಸ್ವಸ್ಥ ಹೆಂಡತಿ

newsics.com ಕರ್ನೂಲು: ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ಮಹಿಳೆಯೊಬ್ಬರು ತಮ್ಮ ಪತಿಯ ಮೃತದೇಹವನ್ನು ಏಕಾಂಗಿಯಾಗಿ ಮನೆಯಲ್ಲಿಯೇ ದಹನ ಮಾಡಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಪಾತಿಕೊಂಡ ಗ್ರಾಮದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲಲಿತಮ್ಮ ಎಂಬವರ ಪತಿ...

Weekend With Ramesh; ಸಾಧಕರ ಕುರ್ಚಿಯಲ್ಲಿ ಡಿಕೆ ಶಿವಕುಮಾರ್!

newsics.com ಬೆಂಗಳೂರು: ಖಾಸಗಿವಾಹಿನಿಯಲ್ಲಿ ವೀಕೆಂಡ್ ವಿತ್ ರಮೇಶ್ ಐದನೇ ಸೀಸನ್​ನ ಈ ವಾರದ ಅತಿಥಿಯಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಗಮಿಸಲಿದ್ದಾರೆ ಎನ್ನುವ ಗಾಳಿ ಸುದ್ದಿಯೊಂದು ಹಬ್ಬಿದೆ. ಭಾನುವಾರದ ಎಪಿಸೋಡ್ ಮುಗಿದ ಎರಡೇ ದಿನಕ್ಕೆ ಅಂದರೆ ಮಂಗಳವಾರದಂದು...
- Advertisement -
error: Content is protected !!