Saturday, June 10, 2023

ಸರ್ಕಾರಿ‌ ಬಸ್‌ಗಳಲ್ಲೀಗ ಮಹಿಳೆಯರ ಜಗಳ ಜೋರು: ಉಚಿತ ಪ್ರಯಾಣ ಭರವಸೆ ಜಾರಿಗೆ KSRTC ಸಿಬ್ಬಂದಿ ಮನವಿ

Follow Us

newsics.com
ಬೆಂಗಳೂರು: ಕಾಂಗ್ರೆಸ್‌ನ ಗ್ಯಾರಂಟಿ ಘೋಷಣೆಯ ಪರಿಣಾಮವಾಗಿ ಈಗ ಕೆಎಸ್ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರು‌ ಜಗಳವಾಡುತ್ತಿದ್ದಾರೆ. ಟಿಕೆಟ್ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಉಚಿತ ಪ್ರಯಾಣ‌ ಭರವಸೆ ಇನ್ನೂ ಜಾರಿಯಾಗಿಲ್ಲ ಎಂಬ ವಿಷಯವನ್ನು ಮಹಿಳೆಯರಿಗೆ ಮನವರಿಕೆ ಮಾಡುವಲ್ಲಿ ಕಂಡಕ್ಟರ್‌ಗಳು ಹೈರಾಣಾಗಿದ್ದಾರೆ‌.
ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂಬ ಕಾಂಗ್ರೆಸ್ ಸರ್ಕಾರದ ಚುನಾವಣಾ ಭರವಸೆಯನ್ನು ಉಲ್ಲೇಖಿಸಿ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಟಿಕೆಟ್ ವಿಚಾರವಾಗಿ ಕಂಡಕ್ಟರ್‌ಗಳೊಂದಿಗೆ ವಾಗ್ವಾದ ನಡೆಸುತ್ತಿದ್ದಾರೆ. ಇಂತಹ ಘಟನೆಗಳು ಹೆಚ್ಚಾದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಸಿಬ್ಬಂದಿ ಮತ್ತು ಕಾರ್ಮಿಕರ ಒಕ್ಕೂಟವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಭರವಸೆ ಈಡೇರಿಸುವಂತೆ ಒತ್ತಾಯಿಸಿದೆ.

ಟಿಕೆಟ್ ದರವನ್ನು ಪಾವತಿಸದೆ ಉಚಿತವಾಗಿ ಪ್ರಯಾಣಿಸಲು ಅನುವು ಮಾಡಿಕೊಡುವಂತೆ ಮಹಿಳಾ ಪ್ರಯಾಣಿಕರು ಕಂಡಕ್ಟರ್‌ಗಳನ್ನು ಒತ್ತಾಯಿಸುತ್ತಿದ್ದಾರೆ. ಬಸ್ ಪ್ರಯಾಣದ ವೇಳೆ ಸಿಬ್ಬಂದಿ ಹಾಗೂ ಪ್ರಯಾಣಿಕರ ನಡುವೆ ಹಲವು ಬಾರಿ ವಾಗ್ವಾದಗಳು ನಡೆದಿವೆ. ಇದು ಒಳ್ಳೆಯ ಲಕ್ಷಣವಲ್ಲ. ಮಹಿಳೆಯರಿಗೆ ಉಚಿತ ಪ್ರಯಾಣದ ಕುರಿತು ಸರ್ಕಾರದ ಮಟ್ಟದಲ್ಲಿ ನಿರ್ಧಾರ ತೆಗೆದುಕೊಳ್ಳುವಂತೆ ಮತ್ತು ಸಾರಿಗೆ ನಿಗಮಗಳಿಗೆ ನಿರ್ದೇಶನ ನೀಡುವಂತೆ ನಾವು ವಿನಂತಿಸುತ್ತೇವೆ’ ಎಂದು ಪತ್ರದಲ್ಲಿ ಬರೆದಿದ್ದಾರೆ.

ನಷ್ಟವನ್ನು ಕೂಡ ಅಂದಾಜಿಸಿ ಎಲ್ಲ ನಿಗಮಗಳಿಗೆ ಮುಂಚಿತವಾಗಿ ಪರಿಹಾರ ನೀಡುವಂತೆಯೂ ಒಕ್ಕೂಟ ಸರ್ಕಾರವನ್ನು ಕೋರಿದೆ.

ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಭರವಸೆ ನೀಡಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಅಧಿಕಾರ ವಹಿಸಿಕೊಂಡ ನಂತರ ಮೇ 20ರಂದು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಭರವಸೆ ನೀಡುವ ‘ಶಕ್ತಿ’ ಯೋಜನೆಗೆ ತಾತ್ವಿಕ ಒಪ್ಪಿಗೆ ನೀಡಿದೆ.

ಮೇ 28ರಂದು‌‌ ಸಂಪುಟ ವಿಸ್ತರಣೆ: ಸಂಭಾವ್ಯ ಸಚಿವರ ಪಟ್ಟಿ ವೈರಲ್

ಬೆತ್ತಲೆ ವಿಡಿಯೋ ಮಾಡಿದ ಯುವತಿ ಬ್ಲ್ಯಾಕ್‌ಮೇಲ್: 23‌ ಲಕ್ಷ ಕಳೆದುಕೊಂಡ ಬೆಂಗಳೂರು‌ ಉದ್ಯೋಗಿ

ನೂತನ ಸಂಸತ್ ಭವನ ರಾಷ್ಟ್ರಪತಿಯವರಿಂದಲೇ ಲೋಕಾರ್ಪಣೆಯಾಗಲಿ: ಸುಪ್ರೀಂಗೆ ಮನವಿ

ಮತ್ತಷ್ಟು ಸುದ್ದಿಗಳು

vertical

Latest News

ಗಡಿಯಲ್ಲಿ ಪಾಕ್ ನಿಗೂಢ ಬಲೂನ್ ಪತ್ತೆ: ಸೇನೆಯಿಂದ ಶೋಧ ಕಾರ್ಯ

Newsics.com ಶ್ರೀನಗರ: ಪಾಕಿಸ್ತಾನದ ಅಂತರಾಷ್ಟ್ರೀಯ ಏರ್‌ಲೈನ್ಸ್ ಲಾಂಛನ ಇರುವ ವಿಮಾನದ ಆಕಾರದ ಅನುಮಾನಾಸ್ಪದ ಬಲೂನ್ ಜಮ್ಮು ಮತ್ತು ಕಾಶ್ಮೀರದ...

ಗ್ಯಾರಂಟಿ ಜಾರಿ ಬೆನ್ನಲ್ಲೇ ಮದ್ಯಪ್ರಿಯರಿಗೆ ಶಾಕ್

newsics.com ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿ ಜಾರಿಗೊಳಿಸಿದ ಬೆನ್ನಲ್ಲೇ ಮದ್ಯದ ಬೆಲೆಯನ್ನು ದುಪ್ಪಟ್ಟು ಮಾಡಿ ಮದ್ಯಪ್ರಿಯರಿಗೆ ಶಾಕ್ ನೀಡಿದೆ. ಕರೆಂಟ್ ಬಿಲ್ ದರ ಏರಿಕೆ ಬಳಿಕ...

ಚಂಡಮಾರುತ: ಕರ್ನಾಟಕ ಸೇರಿ 3 ರಾಜ್ಯಗಳಿಗೆ ಅಲರ್ಟ್

Newsics.com ನವದೆಹಲಿ: ಅರಬ್ಬೀ ಸಮುದ್ರದ ಕರಾವಳಿ ಭಾಗದಲ್ಲಿ ಭಾರೀ ಆತಂಕ ಮೂಡಿಸಿರುವ ಬಿಪರ್ಜೋಯ್ ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ಇನ್ನಷ್ಟು ತೀವ್ರಗೊಳ್ಳಲಿದ್ದು ಉತ್ತರ ಈಶಾನ್ಯದೆಡೆಗೆ ಚಲಿಸಲಿದೆ...
- Advertisement -
error: Content is protected !!