Monday, October 2, 2023

ಕನ್ನಡ ಮಾಧ್ಯಮ ಶಿಕ್ಷಣಕ್ಕೆ ಸಾಹಿತ್ಯ ಸಮ್ಮೇಳನ ಆಗ್ರಹ

Follow Us

ಕಲಬುರಗಿ: ಅಖಿಲ ಭಾರತ 85ನೇ ಸಾಹಿತ್ಯ ಸಮ್ಮೇಳನದ ಅಂತಿಮ ದಿನವಾದ ಶುಕ್ರವಾರ 6 ನಿರ್ಣಯ ಕೈಗೊಳ್ಳಲಾಗಿದೆ.
ಎಲ್ಲ ಸರ್ಕಾರಿ‌ ಮತ್ತು ಖಾಸಗಿ ಶಾಲೆಗಳಲ್ಲಿ‌ ಕನ್ನಡ ಮಾಧ್ಯಮದಲ್ಲೇ ಶಿಕ್ಷಣ ನೀಡಬೇಕು, ಸಂವಿಧಾನದ 371 ಜೆ ಕಲಂನ ಲೋಪದೋಷವನ್ನು ಶೀಘ್ರ ನಿವಾರಿಸಿ, ಅದರ ಸಮರ್ಪಕ ಅನುಷ್ಠಾನಕ್ಕೆ ಸರ್ಕಾರ ಕ್ರಮ ಕೈಗೊಳ್ಳಬೇಕು ಸಮ್ಮೇಳನ‌ಆಗ್ರಹಿಸಿದೆ.
ನಂಜುಂಡಪ್ಪ ವರದಿ ಜಾರಿ ಮಾಡಿ ತಾರತಮ್ಯ ನಿವಾರಿಸಬೇಕು, ಕಲ್ಯಾಣ ಕರ್ನಾಟಕದ ಸ್ಮಾರಕಗಳನ್ನು ಕಾಲ‌ಮಿತಿಯಲ್ಲಿ ಅಭಿವೃದ್ಧಿಪಡಿಸಬೇಕು, ಆಂಧ್ರ ಮಾತ್ರವಲ್ಲದೆ ಗಡಿ ಪ್ರದೇಶಗಳಲ್ಲಿ ಕನ್ನಡ ಶಾಲೆಗಳನ್ನು ಮುಚ್ಚದಂತೆ ಸರ್ಕಾರ ನಿಗಾ ವಹಿಸಬೇಕು, ಗಡಿ ವಿಚಾರದಲ್ಲಿ ಕೆಣಕುತ್ತಿರುವ ಮಹಾರಾಷ್ಟ್ರದ ಉದ್ಧಟತನವನ್ನು ಹತ್ತಿಕ್ಕಿ, ಮಹಾಜನ ವರದಿ ಅನುಷ್ಠಾನ ಮಾಡಿ ವಿವಾದ ಅಂತ್ಯಗೊಳಿಸಬೇಕು ಎಂದು ಸಾಹಿತ್ಯ ಸಮ್ಮೇಳನ ಒತ್ತಾಯಿಸಿದೆ.
ಸಮ್ಮೇಳನ ಯಶಸ್ಸಿಗೆ ಕಾರಣರಾದ ಸ್ವಾಗತ ಸಮಿತಿ, ವಿವಿಧ ಸಮಿತಿ, ಜಿಲ್ಲಾಡಳಿತ, ಕಾರ್ಯಕರ್ತರಿಗೆ, ಆತಿಥ್ಯ ತೋರಿದ ಜನರಿಗೆ ಕೃತಜ್ಞತೆ ಸಲ್ಲಿಸುವ ನಿರ್ಣಯವನ್ನೂ ಸಮ್ಮೇಳನ ಕೈಗೊಂಡಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಮೊಸಳೆಯೊಂದಿಗೆ ಬೇಸ್ ಬಾಲ್ ಮ್ಯಾಚ್ ನೋಡಲು ಬಂದ ಪ್ರಾಣಿ ಪ್ರೇಮಿ!

newsics.com ಅಮೆರಿಕ: ಮನೆಯಲ್ಲಿ ಸಾಕಿದ್ದ ಮೊಸಳೆಯೊಂದಿಗೆ ಬೇಸ್‌ಬಾಲ್ ಮ್ಯಾಚ್‌ ನೋಡಲು ಸ್ಟೇಡಿಯಂ ಬಂದ ಪ್ರಾಣಿ ಪ್ರೇಮಿಯೊಬ್ಬನನ್ನು ಕಂಡು ಭದ್ರತಾ ಸಿಬ್ಬಂದಿ ದಂಗಾಗಿ ಪ್ರವೇಶ ನಿರಾಕರಿಸಿರುವ ಪ್ರಸಂಗ ಅಮೆರಿಕಾದ...

ಜಿಪಿಎಸ್ ಮ್ಯಾಪ್ ಎಡವಟ್ಟು: ಕಾರು ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರ ಸಾವು

newsics.com ತಿರುವನಂತಪುರಂ: ಜಿಪಿಎಸ್ ಮ್ಯಾಪ್ ತೋರಿಸಿದ ದಾರಿಯಲ್ಲಿ ಹೋದ ಕಾರೊಂದು ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರು ಮೃತಪಟ್ಟ ಘಟನೆ ಕೇರಳದ ಎರ್ನಾಕುಲಂನಲ್ಲಿ ನಡೆದಿದೆ. ತಡರಾತ್ರಿ ಭಾರಿ ಮಳೆಯ ಕಾರಣ ಅವಘಡ ಸಂಭವಿಸಿದೆ. ಮೃತರನ್ನು ಡಾ.ಅದ್ವೈತ್ (29)...

ವರದಿಗಾರ್ತಿ ಮೇಲೆ ರೇಗಿದ ಅಣ್ಣಾಮಲೈ: ಖಂಡನೆ

newsics.com ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮಹಿಳಾ ವರದಿಗಾರರೊಬ್ಬರ ಮೇಲೆ ಸಿಟ್ಟಾಗುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ. ವರದಿಗಾರ್ತಿ ಜೊತೆ ಅಣ್ಣಾಮಲೈ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ...
- Advertisement -
error: Content is protected !!