Wednesday, September 27, 2023

ನಿರ್ಭಯಾ ಕೇಸ್: ಮತ್ತೆ ಕೋರ್ಟ್ ಮೆಟ್ಟಿಲೇರಿದ ಅಪರಾಧಿಗಳ ಪರ ವಕೀಲ

Follow Us

ನವದೆಹಲಿ: ನಿರ್ಭಯಾ ಅತ್ಯಾಚಾರ ಅಪರಾಧಿಗಳಿಗೆ ವಿಧಿಸಲಾಗಿರುವ ಗಲ್ಲು ಶಿಕ್ಷೆಯ ದಿನ‌ (ಫೆ.1) ಮತ್ತೆ ಮುಂದೂಡಿಕೆಯಾಗುವ ಸಾಧ್ಯತೆಯಿದೆ.
ತಿಹಾರ್ ಜೈಲಿನ ಅಧಿಕಾರಿಗಳು ದಯಾ ಅರ್ಜಿ ಸಲ್ಕಿಸಲು ವಿಳಂಬ ಮಾಡುತ್ತಿದ್ದಾರೆ ಎಂದು ಅಪರಾಧಿಗಳ ಪರ ವಕೀಲ ಎ.ಪಿ.ಸಿಂಗ್ ಪಟಿಯಾಲ ಹೌಸ್ ಕೋರ್ಟ್ ಮೆಟ್ಟಿಲೇರಿದ್ದು, ನಾಳೆ (ಜ.25) ವಿಚಾರಣೆಗೆ ಬರಲಿದೆ.
ಅಪರಾಧಿಗಳಾದ ಪವನ್ ಮತ್ತು ಅಕ್ಷಯ್ ಪರವಾಗಿ ಕ್ಯುರೇಟಿವ್ ಮತ್ತು ದಯಾ ಅರ್ಜಿ ಸಲ್ಲಿಸಲು ಬೇಕಾದ ದಾಖಲೆ ನೀಡಲು ತಿಹಾರ್ ಜೈಲು ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ ಎಂದು ವಕೀಲ ಎ.ಪಿ. ಸಿಂಗ್ ಆರೋಪಿಸಿದ್ದಾರೆ.
ಇನ್ನುಳಿದ ಇಬ್ಬರು ಅಫರಾಧಿಗಳಾದ ವಿನಯ್ ಕುಮಾರ್ ಶರ್ಮಾ ಮತ್ತು ಮುಕೇಶ್ ಸಿಂಗ್ ಅವರ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂಕೋರ್ಟ್ ಈಗಾಗಲೇ ತಿರಸ್ಕರಿಸಿದೆ.
ಈ‌ ಮಧ್ಯೆ, ಕೇಂದ್ರ ಸರ್ಕಾರವು ನಾಲ್ವರು ಅಪರಾಧಿಗಳಿಗೆ ಮರಣದಂಡನೆ ವಿಧಿಸಲು ಏಳು ದಿನಗಳ ಗಡುವು ಹಾಗೂ ಮರಣದಂಡನೆ ನಿಗದಿಪಡಿಸಿದ ಏಳು ದಿನಗಳಲ್ಲಿ ದಯಾ ಅರ್ಜಿ ಸಲ್ಲಿಸಲು ಸೂಚಿಸಬೇಕು ಎಂದು ಕೇಳಿಕೊಂಡಿತ್ತು.

ಮತ್ತಷ್ಟು ಸುದ್ದಿಗಳು

vertical

Latest News

ಸ್ನೇಹಿತೆ ಜತೆ ದೈಹಿಕ ಸಂಪರ್ಕಕ್ಕೆ ಪ್ರೇಯಸಿ ಒತ್ತಾಯ: ನಿರಾಕರಿಸಿದ ಪ್ರಿಯಕರನ ಮರ್ಮಾಂಗವನ್ನೇ ಕಚ್ಚಿದ ಗೆಳತಿ!

newsics.com ಕಾಸ್ಪುರ: ತನ್ನ ಸ್ನೇಹಿತೆಯೊಂದಿಗೆ ದೈಹಿಕ ಸಂಪರ್ಕ ಸಾಧಿಸಲಿಲ್ಲ ಎಂದು ಕೋಪಗೊಂಡ ಗೆಳತಿ, ಪ್ರಿಯಕರನ ಗುಪ್ತಾಂಗಕ್ಕೆ ಕಚ್ಚಿದ್ದಾಳೆ. ಇಂಥದ್ದೊಂದು ವಿಚಿತ್ರ ಮತ್ತು ಆಘಾತಕಾರಿ ಘಟನೆ ನಡೆದಿದ್ದು ಉತ್ತರಪ್ರದೇಶದಲ್ಲಿ. ಇಲ್ಲಿನ...

ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಶಾನವಾಜ್ ಹುಸೇನ್’ಗೆ ಹೃದಯಾಘಾತ!

newsics.com ಮುಂಬೈ: ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಶಾನವಾಜ್ ಹುಸೇನ್'ಗೆ ಹೃದಯ ಸ್ತಂಭನವಾಗಿದ್ದು, ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಂಜಿಯೋಪ್ಲ್ಯಾಸ್ಟಿ ಮಾಡಿಸಲಾಗಿದೆ. ಶಾನವಾಜ್ ಹುಸೇನ್ ಹೃದಯಾಘಾತದಿಂದ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಂಜಿಯೋಪ್ಲಾಸ್ಟಿ...

ಮನೆ ನೌಕರರಿಗೆ ಕಿರುಕುಳ ನೀಡುತ್ತಿದ್ದ ಸೇನಾ ಮೇಜರ್, ಆತನ ಪತ್ನಿ ಬಂಧನ!

newsics.com ಅಸ್ಸಾಂ: ಮನೆ ನೌಕರರಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಸೇನಾ ಮೇಜರ್ ಹಾಗೂ ಆತನ ಪತ್ನಿಯನ್ನು ಅಸ್ಸಾಂನಲ್ಲಿ ಬಂಧಿಸಲಾಗಿದೆ. ಅಸ್ಸಾಂನ ದಿಮಾ ಹಸಾವೋ ಜಿಲ್ಲೆಯಲ್ಲಿ ಸೇನಾ ಮೇಜರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು...
- Advertisement -
error: Content is protected !!