Wednesday, May 31, 2023

ಪೌರತ್ವ ತಿದ್ದುಪಡಿ ಮಸೂದೆ: ರಾಜ್ಯ ಸಭೆಯಲ್ಲಿ ಸರ್ಕಾರಕ್ಕೆ ಅಗ್ನಿ ಪರೀಕ್ಷೆ

Follow Us

ನವದೆಹಲಿ: ಲೋಕಸಭೆಯಲ್ಲಿ ಅಂಗೀಕಾರವಾಗಿರುವ ಬಹು ಚರ್ಚಿತ ಪೌರತ್ವ ತಿದ್ದುಪಡಿ ಮಸೂದೆ ಇಂದು ಮಧ್ಯಾಹ್ನ ರಾಜ್ಯಸಭೆಯಲ್ಲಿ ಮಂಡನೆ ಯಾಗಲಿದೆ. ಸುದೀರ್ಘ ಚರ್ಚೆಯ ಬಳಿಕ ಮತದಾನ ನಡೆಯಲಿದೆ. ಲೋಕಸಭೆಗೆ ಹೋಲಿಸಿದರೆ ರಾಜ್ಯಸಭೆಯಲ್ಲಿ ಆಡಳಿತಾ ರೂಢ ಎನ್ ಡಿ ಎ ಗೆ ಬಹುಮತ ಇಲ್ಲ. ಈ ಹಿನ್ನೆಲೆಯಲ್ಲಿ 240 ಸದಸ್ಯ ಬಲದ ಸದನದಲ್ಲಿ ಬಹುಮತ ಪಡೆಯುವುದೇ ಮುಖ್ಯ ಸವಲಾಗಿದೆ. ಬಿಜೆಪಿ ಮಿತ್ರಪಕ್ಷವಾಗಿದ್ದ ಶಿವಸೇನೆ ಸರ್ಕಾರದಿಂದ ಕೆಲವು ಸ್ಪಷ್ಟೀಕರಣ ಕೋರಿದೆ. ಮೊದಲು ಈ ಸಂಶಯ ನಿವಾರಿಸಬೇಕು. ಇಲ್ಲದಿದ್ದರೆ ಮಸೂದೆ ಪರ ಮತ ಚಲಾಯಿಸಲ್ಲ ಎಂದು  ಹೇಳಿದೆ. ಟಿಆರ್ ಎಸ್ ಮಸೂದೆಯ ವಿರುದ್ಧ ಧ್ವನಿ ಎತ್ತಿದೆ. ಇದೇ ವೇಳೆ ವೈ ಎಸ್ ಆರ್ ಕಾಂಗ್ರೆಸ್ ಮತ್ತು ತೆಲುಗು ದೇಶಂ ಮಸೂದೆ ಬೆಂಬಲಿಸುವುದಾಗಿ ಹೇಳಿದೆ. ಸಂಯುಕ್ತ ಜನತಾ ದಳ ಕೂಡ ಸರ್ಕಾರದ ನಿರ್ಧಾರಕ್ಕೆ ಜೈ ಎಂದಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಮಲಯಾಳಂ ಚಿತ್ರರಂಗದ ಖ್ಯಾತ ನಟ ಹರೀಶ್ ಪೆಂಗನ್ ನಿಧನ

newsics.com ಮಲಯಾಳಂ ಚಿತ್ರರಂಗದ ಖ್ಯಾತ ಕಲಾವಿದ ಹರೀಶ್ ಪೆಂಗನ್ ಅವರು ಮಂಗಳವಾರ (ಮೇ 30) ನಿಧನ ಹೊಂದಿದ್ದಾರೆ. ಅವರಿಗೆ 49 ವರ್ಷ ವಯಸ್ಸಾಗಿತ್ತು. ಹರೀಶ್ ಅವರು ಕಳೆದ...

ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ದುಷ್ಕೃತ್ಯ ಸಂಚು: ದಕ್ಷಿಣ ಕನ್ನಡದ 16 ಕಡೆ NIA ದಾಳಿ

newsics.com ಮಂಗಳೂರು: ಪ್ರಧಾನಿ ಮೋದಿಯವರ ಬಿಹಾರ ಕಾರ್ಯಕ್ರಮದ ವೇಳೆ ದುಷ್ಕೃತ್ಯ ಸಂಚು ರೂಪಿಸಿದ್ದ ಹಿನ್ನೆಲೆಯಲ್ಲಿ ಬುಧವಾರ ರಾಷ್ಟ್ರೀಯ ತನಿಖಾ ದಳ (ಎನ್ಐಎ) ದಕ್ಷಿಣ ಕನ್ನಡ ಜಿಲ್ಲೆಯ 16‌ ಕಡೆ ದಾಳಿ‌ ನಡೆಸಿದೆ. ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ,...

ಸಮುದ್ರಕ್ಕೆ ಬಿತ್ತು ಉತ್ತರ ಕೊರಿಯಾ ಉಡಾಯಿಸಿದ ‘ಗೂಢಚರ್ಯೆ ಉಪಗ್ರಹ’

newsics.com ಸೋಲ್: ಉತ್ತರ ಕೊರಿಯಾ ಬುಧವಾರ ಉಡಾವಣೆ ಮಾಡಿದ ಗೂಢಚರ್ಯೆ ಉಪಗ್ರಹ ಸಮುದ್ರದ ಪಾಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ತಾಂತ್ರಿಕ ಕಾರಣಗಳಿಂದಾಗಿ ಗೂಢಚರ್ಯೆ ಉಪಗ್ರಹ ಸಮುದ್ರಕ್ಕೆ ಬಿದ್ದಿದೆ ಎಂದು ಉತ್ತರ ಕೊರಿಯಾ ಮಾಧ್ಯಮಗಳು ತಿಳಿಸಿವೆ. ಮೊದಲು...
- Advertisement -
error: Content is protected !!