Monday, October 2, 2023

ಶಬರಿಮಲೆ ದೇಗುಲಕ್ಕೆ ಮಹಿಳೆ ಪ್ರವೇಶ; ಖಾರದ ಪುಡಿ ಎರಚಿ ಆಕ್ರೋಶ

Follow Us

ಕೊಚ್ಚಿ; ಶಬರಿಮಲೆಯ ಅಯ್ಯಪ್ಪ ದೇಗುಲ ಪ್ರವೇಶಿಸಲು ಮುಂದಾಗಿರುವ ಕಾರ್ಯಕರ್ತೆ ತೃಪ್ತಿ ದೇಸಾಯಿ ಅವರೊಂದಿಗಿದ್ದ ಆರು ಮಹಿಳೆಯರಲ್ಲಿ ಒಬ್ಬರಾದ ಕೇರಳದ ಕಣ್ಣೂರು ವಿಶ್ವವಿದ್ಯಾಲಯದ ಉಪನ್ಯಾಸಕಿಯ ಮೇಲೆ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ಕಾರದ ಪುಡಿ ಎರಚಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ದೇಗುಲ ಪ್ರವೇಶಿಸಲು ರಕ್ಷಣೆ ಕೋರಿರುವ ಸಲುವಾಗಿ ಉಪನ್ಯಾಸಕಿ ಬಿಂದು ಅಮ್ಮಿನಿ ಮತ್ತು ತೃಪ್ತಿ ದೇಸಾಯಿ ಆಯುಕ್ತರ ಕಚೇರಿಗೆ ತಲುಪಿದಾಗ ಬಲಪಂಥೀಯ ಕಾರ್ಯಕರ್ತರ ಗುಂಪೊಂದು ಅವರೊಂದಿಗೆ ವಾಗ್ವಾದಕ್ಕಿಳಿದು ಬಿಂದು ಮುಖಕ್ಕೆ ಕಾರದಪುಡಿ ಎರಚಿತು. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ತೃಪ್ತಿ ದೇಸಾಯಿ, ಅಯ್ಯಪ್ಪ ದೇವರ ದರ್ಶನ ದೊರೆತರೆ ಮಾತ್ರ ಕೇರಳ ಬಿಡುವುದಾಗಿ ಹೇಳಿಕೆ ನೀಡಿದ್ದಾರೆ.ಪುಣೆ ಮೂಲದ ಕಾರ್ಯಕರ್ತೆ ತೃಪ್ತಿ ಕಳೆದ ವರ್ಷದ ನವೆಂಬರ್ ನಲ್ಲಿ ದೇಗುಲ ಪ್ರವೇಶಿಸುವ ವಿಫಲ ಪ್ರಯತ್ನ ನಡೆಸಿದ್ದರು. ಅಮ್ಮಿನಿ 2019ರ ಜನವರಿ 2ರಂದು ಪೊಲೀಸ್ ರಕ್ಷಣೆಯೊಂದಿಗೆ ದೇಗುಲ ಪ್ರವೇಶಿಸಿದ್ದು, ಇದು ಅವರ ಎರಡನೇ ಯತ್ನಾಗಿದೆ. 2018ರ ಸೆ.28ರಂದು ಸುಪ್ರೀಂಕೋರ್ಟ್, ದೇಗುಲಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರು ಪ್ರವೇಶಿಸಬಹುದು ಎಂಬ ತೀರ್ಪು ನೀಡಿತ್ತು.

ಮತ್ತಷ್ಟು ಸುದ್ದಿಗಳು

vertical

Latest News

ವಿದ್ಯುತ್ ಲೈನ್ ತಗುಲಿ 5 ಜಾನುವಾರು ಸ್ಥಳದಲ್ಲಿಯೇ ಸಾವು

newsics.com ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ. ಮತ್ತೂರು ಗ್ರಾಮದ...

Asian Games; ಭಾರತಕ್ಕೆ ಒಂದೇ ದಿನ 15 ಪದಕ

newsics.com ಹ್ಯಾಂಗ್‌ಝೌ: ಏಷ್ಯನ್‌ ಗೇಮ್ಸ್‌ನಲ್ಲಿ ಭಾರತ 8ನೇ ದಿನವಾದ ಭಾನುವಾರ ಒಂದೇ ದಿನ 15 ಪದಕ ಬಾಚಿಕೊಂಡಿದೆ. 7ನೇ ದಿನವಾದ ಶನಿವಾರ 10 ಚಿನ್ನ, 14 ಬೆಳ್ಳಿ ಮತ್ತು 14 ಕಂಚಿನೊಂದಿಗೆ 38 ಪದಕಗಳನ್ನು ಭಾರತ...

ಬೆಂಗಳೂರು ಕಂಬಳ: ಕೋಣಗಳಿಗೆ ಮಂಗಳೂರಿಂದಲೇ ಬರುತ್ತೆ ಕುಡಿಯುವ ನೀರು!

newsics.com ಬೆಂಗಳೂರು: ನವೆಂಬರ್ ತಿಂಗಳ 25 ಮತ್ತು 26ನೇ ತಾರೀಕಿನಂದು ಮೊದಲ ಬಾರಿಗೆ ತುಳುನಾಡಿನ ಗಡಿಯನ್ನು ದಾಟಿ ಬೆಂಗಳೂರಿನಲ್ಲಿ ಕರಾವಳಿಯ ಸಾಂಸ್ಕೃತಿಕ ಕ್ರೀಡೆ ಕಂಬಳ ನಡೆಯುತ್ತಿದೆ. ಪುತ್ತೂರು ಶಾಸಕ ಅಶೋಕ್‌ ಕುಮಾರ್ ರೈ ನೇತೃತ್ವದಲ್ಲಿ ಕಂಬಳ...
- Advertisement -
error: Content is protected !!