ಕೊಚ್ಚಿ; ಶಬರಿಮಲೆಯ ಅಯ್ಯಪ್ಪ ದೇಗುಲ ಪ್ರವೇಶಿಸಲು ಮುಂದಾಗಿರುವ ಕಾರ್ಯಕರ್ತೆ ತೃಪ್ತಿ ದೇಸಾಯಿ ಅವರೊಂದಿಗಿದ್ದ ಆರು ಮಹಿಳೆಯರಲ್ಲಿ ಒಬ್ಬರಾದ ಕೇರಳದ ಕಣ್ಣೂರು ವಿಶ್ವವಿದ್ಯಾಲಯದ ಉಪನ್ಯಾಸಕಿಯ ಮೇಲೆ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ಕಾರದ ಪುಡಿ ಎರಚಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ದೇಗುಲ ಪ್ರವೇಶಿಸಲು ರಕ್ಷಣೆ ಕೋರಿರುವ ಸಲುವಾಗಿ ಉಪನ್ಯಾಸಕಿ ಬಿಂದು ಅಮ್ಮಿನಿ ಮತ್ತು ತೃಪ್ತಿ ದೇಸಾಯಿ ಆಯುಕ್ತರ ಕಚೇರಿಗೆ ತಲುಪಿದಾಗ ಬಲಪಂಥೀಯ ಕಾರ್ಯಕರ್ತರ ಗುಂಪೊಂದು ಅವರೊಂದಿಗೆ ವಾಗ್ವಾದಕ್ಕಿಳಿದು ಬಿಂದು ಮುಖಕ್ಕೆ ಕಾರದಪುಡಿ ಎರಚಿತು. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ತೃಪ್ತಿ ದೇಸಾಯಿ, ಅಯ್ಯಪ್ಪ ದೇವರ ದರ್ಶನ ದೊರೆತರೆ ಮಾತ್ರ ಕೇರಳ ಬಿಡುವುದಾಗಿ ಹೇಳಿಕೆ ನೀಡಿದ್ದಾರೆ.ಪುಣೆ ಮೂಲದ ಕಾರ್ಯಕರ್ತೆ ತೃಪ್ತಿ ಕಳೆದ ವರ್ಷದ ನವೆಂಬರ್ ನಲ್ಲಿ ದೇಗುಲ ಪ್ರವೇಶಿಸುವ ವಿಫಲ ಪ್ರಯತ್ನ ನಡೆಸಿದ್ದರು. ಅಮ್ಮಿನಿ 2019ರ ಜನವರಿ 2ರಂದು ಪೊಲೀಸ್ ರಕ್ಷಣೆಯೊಂದಿಗೆ ದೇಗುಲ ಪ್ರವೇಶಿಸಿದ್ದು, ಇದು ಅವರ ಎರಡನೇ ಯತ್ನಾಗಿದೆ. 2018ರ ಸೆ.28ರಂದು ಸುಪ್ರೀಂಕೋರ್ಟ್, ದೇಗುಲಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರು ಪ್ರವೇಶಿಸಬಹುದು ಎಂಬ ತೀರ್ಪು ನೀಡಿತ್ತು.
ಮತ್ತಷ್ಟು ಸುದ್ದಿಗಳು
ಮೂಲ ಸೌಕರ್ಯ, ಕೃಷಿ, ಹಸಿರು ಇಂಧನ ಬಳಕೆಗೆ ಒತ್ತು, ಆದಾಯ ತೆರಿಗೆ ವ್ಯವಸ್ಥೆಯಲ್ಲಿ ಬದಲಾವಣೆ: ಬಜೆಟ್ ಹೈಲೈಟ್ಸ್
newsics.com
ನವದೆಹಲಿ: 2024ರ ಸಾರ್ವತ್ರಿಕ ಚುನಾವಣೆಯ ಮುಂಚಿತವಾಗಿ ಇಂದು ಪೂರ್ಣ ಪ್ರಮಾಣದ ಬಜೆಟ್ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೀಮಿತ ಸಂಪನ್ಮೂಲಗಳನ್ನು ವಿವೇಚನಾಯಕ್ತವಾಗಿ ಬಳಸುವ ಜಾಣ್ಮೆ ಮೆರೆದಿದ್ದಾರೆ.
ಜಾಗತಿಕ ಆರ್ಥಿಕ ಹಿಂಜರಿತದ ಭೀತಿ...
ಏಳು ಲಕ್ಷ ರೂಪಾಯಿ ತನಕ ಆದಾಯ ತೆರಿಗೆ ವಿನಾಯಿತಿ: ಕೇಂದ್ರ ಸರ್ಕಾರ ಘೋಷಣೆ
newsics.com
ನವದೆಹಲಿ: ಆದಾಯ ತೆರಿಗೆ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ಭಾರೀ ಬದಲಾವಣೆ ಮಾಡಿದೆ. ಕೇಂದ್ರ ಮುಂಗಡ ಪತ್ರದಲ್ಲಿ ಏಳು ಲಕ್ಷ ರೂಪಾಯಿ ತನಕ ಯಾವುದೇ ಆದಾಯ ತೆರಿಗೆ ಪಾವತಿಸಬೇಕಾಗಿಲ್ಲ ಎಂದು ಘೋಷಿಸಲಾಗಿದೆ.
ಹೊಸ ಆದಾಯ ತೆರಿಗೆ...
ಐದನೇ ಬಾರಿ ಬಜೆಟ್ ಮಂಡಿಸುತ್ತಿರುವ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವ ಸಂಪುಟ ಅನುಮೋದನೆ
newsics.com
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಐದನೆ ಬಾರಿ ಬಜೆಟ್ ಮಂಡಿಸುತ್ತಿದ್ದಾರೆ. ಮುಂಗಡ ಪತ್ರ ಮಂಡನೆ ಪೂರ್ವಭಾವಿಯಾಗಿ ಕೇಂದ್ರ ಸಚಿವ ಸಂಪುಟ ಇದಕ್ಕೆ ಅನುಮೋದನೆ ನೀಡಿದೆ.
ಇದಕ್ಕೂ ಮೊದಲು ರಾಷ್ಟ್ರಪತಿ ದ್ರೌಪದಿ...
ಸಂಸತ್ ಅಧಿವೇಶನ ಆರಂಭ: ಅಭಿವೃದ್ಧಿ ವಿಚಾರದಲ್ಲಿ ಎರಡು ಹೆಜ್ಜೆ ಮುಂದಿರಲು ಯುವಕರಿಗೆ ರಾಷ್ಟ್ರಪತಿ ಸಲಹೆ
newsics.com
ನವದೆಹಲಿ: ಕೇಂದ್ರ ಸರ್ಕಾರದ ಕೊನೆಯ ಪೂರ್ಣಾವಧಿ ಬಜೆಟ್ ಅಧಿವೇಶನ ಮಂಗಳವಾರ ಆರಂಭವಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಸದನವನ್ನುದ್ದೇಶಿಸಿ ಭಾಷಣ ಆರಂಭಿಸಿದ್ದಾರೆ.
2047 ರ ವೇಳೆಗೆ ನಾವು ಗತಕಾಲದ ಬುನಾದಿಯ ಮೇಲೆ ಆಧುನಿಕತೆಯ...
ಮಧ್ಯಪ್ರದೇಶದಲ್ಲಿ ಎರಡು ಸೇನಾ ಯುದ್ದ ವಿಮಾನ ಪತನ, ಸುಖೋಯಿ, ಮಿರಾಜ್ ನಾಶ
newsics.com
ಭೋಪಾಲ್: ಮಧ್ಯಪ್ರದೇಶದಲ್ಲಿ ಭೀಕರ ದುರಂತ ಸಂಭವಿಸಿದೆ. ಎರಡು ಯುದ್ಧ ವಿಮಾನಗಳು ಪತನಗೊಂಡಿವೆ. ಮಧ್ಯ ಪ್ರದೇಶದ ಮೋರೆನಾದಲ್ಲಿ ಹಾರಾಟ ನಡೆಸುತ್ತಿದ್ದ ಸುಖೋಯ್- 30 ಮತ್ತು ಮಿರಾಜ್- 2000 ಯುದ್ಧ ವಿಮಾನ ನೆಲಕ್ಕಪ್ಪಳಿಸಿದೆ. ದುರಂತಕ್ಕೆ ಕಾರಣ...
ಮೂಗಿನ ಮೂಲಕ ಹಾಕುವ ಕೋವಿಡ್ ಲಸಿಕೆ ಇನ್ಕೋವ್ಯಾಕ್ ಬಿಡುಗಡೆ
newsics.com
ನವದೆಹಲಿ: ಮೂಗಿನ ಮೂಲಕ ಹಾಕುವ ಕೋವಿಡ್ ಲಸಿಕೆ ಇನ್ಕೋವ್ಯಾಕ್ ಅನ್ನು ಗುರುವಾರ ಭಾರತ್ ಬಯೋಟೆಕ್ ಸಂಸ್ಥೆ ಬಿಡುಗಡೆ ಮಾಡಿದೆ.
ಕೇಂದ್ರ ಆರೋಗ್ಯ ಸಚಿವ ಡಾ ಮನ್ಸುಖ್ ಮಾಂಡವಿಯಾ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ...
ದೇಶಾದ್ಯಂತ 74ನೇ ಗಣರಾಜ್ಯೋತ್ಸವ ಸಂಭ್ರಮ: ದೇಶದ ಸೇನಾ ಶಕ್ತಿ ಅನಾವರಣ
newsics.com
ನವದೆಹಲಿ: ಹೊಸ ಸವಾಲು ಮತ್ತು ನಿರೀಕ್ಷೆ ಮಧ್ಯೆ ದೇಶ ಇಂದು 74ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. ನವದೆಹಲಿಯ ಕರ್ತವ್ಯ ಪಥದಲ್ಲಿ ಮುಖ್ಯ ಸಮಾರಂಭ ನಡೆಯಲಿದೆ. ಈ ಬಾರಿ ಈಜಿಫ್ಟ್ ಅಧ್ಯಕ್ಷರು ಗಣರಾಜ್ಯೋತ್ಸವ ಸಮಾರಂಭದ ಮುಖ್ಯ...
ಪದ್ಮ ಪ್ರಶಸ್ತಿ ಪ್ರಕಟ: ಎಸ್ಸೆಂ ಕೃಷ್ಣಗೆ ಪದ್ಮವಿಭೂಷಣ, ಭೈರಪ್ಪ, ಸುಧಾಮೂರ್ತಿಗೆ ಪದ್ಮಭೂಷಣ
newsics com
ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮ ಪುರಸ್ಕಾರಗಳನ್ನು ಕೇಂದ್ರ ಸರ್ಕಾರ ಬುಧವಾರ ಘೋಷಿಸಿದೆ. ಒಟ್ಟು 106 ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಲು ರಾಷ್ಟ್ರಪತಿಗಳು ಅನುಮೋದಿಸಿದ್ದಾರೆ. ಇದರಲ್ಲಿ ಆರು ಪದ್ಮವಿಭೂಷಣ, ಒಂಭತ್ತು...
vertical
Latest News
ಜಿಮ್ ಡಂಬಲ್ಸ್ ನಿಂದ ಹೊಡೆದು ಪತ್ನಿಯ ಕೊಲೆ ಮಾಡಿದ ಪತಿ
newsics.com
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅತ್ಯಂತ ಭೀಕರ ಕೊಲೆ ನಡೆದಿದೆ. ಪತಿ ಪತ್ನಿಯನ್ನು ಡಂಬಲ್ಸ್ ನಿಂದ ಹೊಡೆದು ಹತ್ಯೆ ಮಾಡಿದ್ದಾನೆ. ರಾಮ ಮೂರ್ತಿ ನಗರ ಪೊಲೀಸ್ ಠಾಣಾ...
Home
ಅಂಗನವಾಡಿ ಕಾರ್ಯಕರ್ತೆಯರ ಮುಷ್ಕರ ಅಂತ್ಯ: ಬೇಡಿಕೆ ಈಡೇರಿಸಲು ಸಮ್ಮತಿ
Newsics -
newsics.com
ಬೆಂಗಳೂರು: ಕಳೆದ ಎಂಟು ದಿನಗಳಿಂದ ಅಂಗನವಾಡಿ ನೌಕರರು ನಡೆಸುತ್ತಿದ್ದ ಪ್ರತಿಭಟನೆ ಕೊನೆಗೊಂಡಿದೆ. ಗ್ರ್ಯಾಚುವಿಟಿ ಸೇರಿದಂತೆ ನೌಕರರ ಹಲವು ಬೇಡಿಕೆ ಈಡೇರಿಸಲು ಸರ್ಕಾರ ಒಪ್ಪಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈ ಬಿಡಲಾಗಿದೆ.
ಬೆಂಗಳೂರಿನ ಫ್ರೀಡಂ ಪಾರ್ಕ್...
Home
ಮದುವೆಯಾಗುವಂತೆ ವೈದ್ಯನಿಂದ ಒತ್ತಡ ಆರೋಪ: ದಂತ ವೈದ್ಯೆ ಆತ್ಮಹತ್ಯೆ
Newsics -
newsics.com
ಬೆಂಗಳೂರು: ಮದುವೆಯಾಗುವಂತೆ ವೈದ್ಯನೊಬ್ಬ ಪದೇ ಪದೇ ಕಿರುಕುಳ ನೀಡುತ್ತಿದ್ದ ಕಾರಣ ಮನನೊಂದ ದಂತ ವೈದ್ಯೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆರೋಪಿಸಲಾಗಿದೆ. ಬೆಂಗಳೂರಿನ ಪ್ರತಿಷ್ಟಿತ ಆಸ್ಪತ್ರೆಯಲ್ಲಿ ದಂತ ವೈದ್ಯೆಯಾಗಿದ್ದ ಪ್ರಿಯಾಂಶಿ ಆತ್ಮಹತ್ಯೆಗೆ...