Tuesday, December 5, 2023

ಶ್ರೀಲಂಕಾ ವಿರುದ್ಧ 10 ವಿಕೆಟ್ ಜಯ: ಎಂಟನೇ ಬಾರಿ ಏಷ್ಯಾ‌ ಕಪ್ ಮುಡಿಗೇರಿಸಿಕೊಂಡ ಭಾರತ

Follow Us

newsics.com

ಕೊಲಂಬೊ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಶ್ರೀಲಂಕಾ ವಿರುದ್ಧ ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ 10 ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸುವ ಮೂಲಕ ಭಾರತ ಏಷ್ಯಾ ಕಪ್ ಮುಡಿಗೇರಿಸಿಕೊಂಡಿದೆ.

ದಾಖಲೆಯ 8ನೇ ಬಾರಿ ಭಾರತ ತಂಡ ಟ್ರೋಫಿ ಎತ್ತಿ ಹಿಡಿದಿದೆ. ಕೊಲಂಬೋದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಲಂಕಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತ್ತು. ಆದರೆ ಮೊಹಮ್ಮದ್ ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಲಂಕಾ ಕೇವಲ 15.2 ಓವರ್‌ಗಳಲ್ಲಿ 50 ರನ್ನಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು.

ಜೀವನಶ್ರೇಷ್ಠ ಬೌಲಿಂಗ್ ಸಾಧನೆ ಮಾಡಿದ ಸಿರಾಜ್ ಏಳು ಓವರ್‌ಗಳಲ್ಲಿ 21 ರನ್ ತೆತ್ತು ಆರು ವಿಕೆಟ್ ಕಬಳಿಸಿದರು. ಒಂದೇ ಓವರ್‌ನಲ್ಲಿ ಮೇಡನ್ ಸಹಿತ ನಾಲ್ಕು ವಿಕೆಟ್ ಕಬಳಿಸಿದ್ದು ವಿಶೇಷವಾಗಿತ್ತು. ಹಾರ್ದಿಕ್ ಪಾಂಡ್ಯ ಮೂರು ಹಾಗೂ ಜಸ್‌ಪ್ರೀತ್ ಬೂಮ್ರಾ ಒಂದು ವಿಕೆಟ್ ಕಬಳಿಸಿದರು.

ಬಳಿಕ ಈ ಗುರಿ ಬೆನ್ನಟ್ಟಿದ ಭಾರತ 6.1 ಓವರ್‌ಗಳಲ್ಲಿ ಗೆಲುವಿನ ದಡ ಸೇರಿತು. ಶುಭಮನ್ ಗಿಲ್ 27 ಹಾಗೂ ಇಶಾನ್ ಕಿಶನ್ 23 ರನ್ ಗಳಿಸಿ ಔಟಾಗದೆ ಉಳಿದರು.

https://twitter.com/BCCI/status/1703387847154426114?t=jwzFn8EDDmRbaij8ilqbiA&s=08

ಕೋಟಿ ಕೋಟಿ ಆಸ್ತಿಯ ಒಡತಿ ಚೈತ್ರಾ ಕುಂದಾಪುರ: ಕಾರು, ಹಣ, ಚಿನ್ನಾಭರಣ ಜಪ್ತಿ

ಚೈತ್ರಾ ಗ್ಯಾಂಗ್ ವಂಚನೆ ಪ್ರಕರಣ: ಸಾಲುಮರದ ತಿಮ್ಮಕ್ಕನ ಸರ್ಕಾರಿ ಕಾರು ದುರ್ಬಳಕೆ, ಗೃಹಸಚಿವ ಪರಮೇಶ್ವರ್ ಪರ ಪ್ರಚಾರದಲ್ಲಿ ಗಗನ್ ಭಾಗಿ

ಪಿಎಸ್ಐ ಪುತ್ರನಿಂದ ವ್ಹೀಲಿಂಗ್: ವೃದ್ಧ ಸಾವು

ಮತ್ತಷ್ಟು ಸುದ್ದಿಗಳು

vertical

Latest News

ವಿಜಯೇಂದ್ರ ಪತ್ನಿ ಸಹೋದರನ ಮನೆ ಮೇಲೆ ಲೋಕಾಯುಕ್ತ ದಾಳಿ

Newsics.com ಕಲಬುರಗಿ : ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ ಮಾಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪತ್ನಿ ಸಹೋದರ ಡಾ ಪ್ರಭುಲಿಂಗ ಮಾನ್ಕರ್ ಅವರ ಮನೆ...

ಭಾರತದಲ್ಲಿ 75 ಲಕ್ಷಕ್ಕೂ ಅಧಿಕ ವಾಟ್ಸ್ ​ಆ್ಯಪ್ ಅಕೌಂಟ್ ಬ್ಯಾನ್

Newsics.com ನವದೆಹಲಿ : ಮೆಟಾದ ತ್ವರಿತ ಮೆಸೇಜಿಂಗ್ ಪ್ಲಾಟ್​ಫಾರ್ಮ್ ವಾಟ್ಸ್​ಆ್ಯಪ್ ಭಾರತದಲ್ಲಿ ಕಳೆದ ಅಕ್ಟೋಬರ್ ತಿಂಗಳಲ್ಲಿ ಬರೋಬ್ಬರಿ 75 ಲಕ್ಷಕ್ಕೂ ಅಧಿಕ ವಾಟ್ಸ್​ ಆ್ಯಪ್ ಖಾತೆಗಳನ್ನು ರದ್ದುಗೊಳಿಸಿದೆ ಎಂದು ವರದಿಯಾಗಿದೆ. 2021 ಬಳಕೆದಾರರ ಸುರಕ್ಷತ...

ತೆಲಂಗಾಣದ ನೂತನ ಸಿಎಂ ಇವರೇ : ನಾಳೆಯೇ ಪ್ರಮಾಣ ವಚನ..!!

Newsics.com ಹೈದರಾಬಾದ್ : ತೆಲಂಗಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಇದೀಗ ಬಂದ ಮಾಹಿತಿ ಪ್ರಕಾರ, ರೇವಂತ್ ರೆಡ್ಡಿ ಅವರನ್ನೇ...
- Advertisement -
error: Content is protected !!