ಬೆಂಗಳೂರು: ರಾಜ್ಯದಲ್ಲಿ ಶನಿವಾರ 2798 ಜನರಿಗೆ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 36,261ಕ್ಕೆ ಏರಿಕೆಯಾಗಿದೆ. 70 ಜನ ಕೊರೋನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ 613ಕ್ಕೆ ಏರಿಕೆಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಒಂದೇ ದಿನ 1533 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. 23 ಕೊರೋನಾ ಸೋಂಕಿತರು ಬೆಂಗಳೂರಿನಲ್ಲಿ ಇಂದು ಸಾವನ್ನಪ್ಪಿದ್ದಾರೆ. 880 ಕೊರೋನಾ ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗುವ ಮೂಲಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 16,862 ಕ್ಕೆ ಏರಿಕೆಯಾಗಿದೆ. ಇಂದು 404 ಜನ ಬಿಡುಗಡೆಯಾಗಿದ್ದು, ಇದುವರೆಗೆ 3839 ಜನ ಬಿಡುಗಡೆಯಾಗಿದ್ದಾರೆ. 12,793 ಸಕ್ರಿಯ ಪ್ರಕರಣಗಳಿದ್ದು, ಇದುವರೆಗೆ 229 ಮಂದಿ ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 186, ಉಡುಪಿ 90, ಮೈಸೂರು 83, ತುಮಕೂರು 78, ಧಾರವಾಡ 77, ಯಾದಗಿರಿ 74, ದಾವಣಗೆರೆ 72, ಕಲಬುರಗಿ 65, ಬಳ್ಳಾರಿ 65, ಬೀದರ್ 63, ವಿಜಯಪುರ 48 ಜನರಿಗೆ ಸೋಂಕು ತಗುಲಿದೆ. ಉತ್ತರ ಕನ್ನಡ 40, ಗದಗ 40, ಬಾಗಲಕೋಟೆ 37, ಹಾಸನ 34, ರಾಮನಗರ 30, ಶಿವಮೊಗ್ಗ 26, ಮಂಡ್ಯ 23, ಕೊಪ್ಪಳ 23, ಚಿಕ್ಕಬಳ್ಳಾಪುರ 20, ಚಾಮರಾಜನಗರ 17, ಹಾವೇರಿ 16, ರಾಯಚೂರು 14, ಕೋಲಾರ 12, ಕೊಡಗು 12, ಚಿತ್ರದುರ್ಗ 9, ಬೆಂಗಳೂರು ಗ್ರಾಮಾಂತರ 5, ಬೆಳಗಾವಿ 3, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೂವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದುವರೆಗೆ 14,716 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 20,883 ಸಕ್ರಿಯ ಪ್ರಕರಣಗಳು ಇದ್ದು 504 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.