Wednesday, November 29, 2023

2008ರ ಬೆಂಗಳೂರು ಸ್ಫೋಟ ಪ್ರಕರಣ: ಕೇರಳದಲ್ಲಿ ಆರೋಪಿ ಬಂಧನ

Follow Us

ತಿರುವನಂತಪುರಂ: 2008ರಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿದ ಸರಣಿ ಸ್ಫೋಟ ಪ್ರಕರಣದ ಆರೋಪಿಯೊಬ್ಬನನ್ನು ಕೇರಳದ ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಆರೋಪಿ ಕಳೆದ 12 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ.  ಸೌದಿ ಅರೇಬಿಯಾದಿಂದ ಬಂದ ವಿಮಾನದಲ್ಲಿ ಇಳಿಯುತ್ತಿದ್ದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಶೋಯೆಬ್ ಎಂದು ಗುರುತಿಸಲಾಗಿದೆ. ರಾಜ್ಯದ ಭಯೋತ್ಪಾದನಾ  ನಿಗ್ರಹ ದಳ ಮತ್ತು ರಾಷ್ಟ್ರೀಯ ತನಿಖಾದಳ ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿಯನ್ನು ಬಂಧಿಸಿದೆ.

2008 ಜುಲೈ 25 ರಂದು ಬೆಂಗಳೂರಿನಲ್ಲಿ ಸರಣಿ ಸ್ಫೋಟ ಸಂಭವಿಸಿತ್ತು. 9 ಸ್ಫೋಟ ವರದಿಯಾಗಿತ್ತು. ಈ ಸ್ಫೋಟದಲ್ಲಿ ಒಬ್ಬರು ಪ್ರಾಣ ಕಳೆದುಕೊಂಡಿದ್ದರು. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಎಲ್ಲ ಸ್ಫೋಟಗಳು ಕಡಿಮೆ ತೀವ್ರತೆ ಹೊಂದಿದ್ದ ಕಾರಣ ಹೆಚ್ಚಿನ ಪ್ರಾಣ ಹಾನಿ ಸಂಭವಿಸಿರಲಿಲ್ಲ.

ಮತ್ತಷ್ಟು ಸುದ್ದಿಗಳು

vertical

Latest News

ಮೈಸೂರು ವಿವಿ ಪ್ರೊಫೆಸರ್ ವಿರುದ್ಧ ಪಿಎಚ್ಡಿ ವಿದ್ಯಾರ್ಥಿನಿಯಿಂದ ಪೊಲೀಸರಿಗೆ ದೂರು: FIR ದಾಖಲು

newsics.com ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಪ್ರೊಫೆಸರ್ ಶುಭ ಗೋಪಾಲ್ ವಿರುದ್ಧ ಪಿಎಚ್.ಡಿ. ವಿದ್ಯಾರ್ಥಿನಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಮೈಸೂರು ವಿವಿಯ ಮೈಕ್ರೋ ಬಯಾಲಜಿ ವಿಭಾಗದ ಪ್ರೊ.ಶುಭ ಗೋಪಾಲ್ ವಿರುದ್ಧ...

ಮುಂದಿನ ವರ್ಷದಿಂದ 500 ರಿಂದ 600 ಕರ್ನಾಟಕ ಪಬ್ಲಿಕ್ ಸ್ಕೂಲ್ ಆರಂಭ: ಮಧು ಬಂಗಾರಪ್ಪ

newsics.com ಹಾಸನ: ಮುಂದಿನ ಶೈಕ್ಷಣಿಕ ವರ್ಷದಲ್ಲಿ 500 ರಿಂದ 600 ಪಬ್ಲಿಕ್ ಶಾಲೆಗಳನ್ನು ಸ್ಥಾಪನೆ ಮಾಡಲಾಗುವುದು. ಚುನಾವಣೆ ಸಂದರ್ಭದಲ್ಲಿ ನೀಡಿದ 5 ಗ್ಯಾರಂಟಿಗಳನ್ನು ಈಡೇರಿಸಿದ್ದು, ಶಾಲೆಗಳ ಅಭಿವೃದ್ಧಿಗೂ ಹಾಗೂ ಗ್ಯಾರಂಟಿಗೂ ಯಾವ ಸಂಬಂಧವಿಲ್ಲ ಎಂದು...

2024ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಬಿಡುಗಡೆ

newsics.com ಬೆಂಗಳೂರು: 2024ಕ್ಕೆ ಮುಂಜೂರಾದ ಸಾರ್ವತ್ರಿಕ ರಜೆಗಳ ಪಟ್ಟಿಯನ್ನು ಕರ್ನಾಟಕ ಸರ್ಕಾರವು ಬಿಡುಗಡೆ ಮಾಡಿದೆ. ಎಲ್ಲಾ ಎರಡನೇ ಶನಿವಾರ, ನಾಲ್ಕನೇ ಶನಿವಾರ ಮತ್ತು ಭಾನುವಾರಗಳು ಸೇರಿದಂತೆ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಹೀಗಿದೆ. ಜನವರಿ 15,...
- Advertisement -
error: Content is protected !!